Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ತಾಲಿಬಾನ್ ಜೊತೆ ರಹಸ್ಯ ಶೃಂಗಸಭೆ...

ತಾಲಿಬಾನ್ ಜೊತೆ ರಹಸ್ಯ ಶೃಂಗಸಭೆ ರದ್ದುಪಡಿಸಿದ ಟ್ರಂಪ್

ವಾರ್ತಾಭಾರತಿವಾರ್ತಾಭಾರತಿ8 Sept 2019 11:31 PM IST
share
ತಾಲಿಬಾನ್ ಜೊತೆ ರಹಸ್ಯ ಶೃಂಗಸಭೆ ರದ್ದುಪಡಿಸಿದ ಟ್ರಂಪ್

ವಾಶಿಂಗ್ಟನ್,ಸೆ.8: ಅಫ್ಘಾನಿಸ್ತಾನದಲ್ಲಿ ಅಮೆರಿಕದ ಸುದೀರ್ಘ ಸಮರವನ್ನು ಕೊನೆಗಾಣಿಸು ಪ್ರಯತ್ನವಾಗಿ ತಾಲಿಬಾನ್ ಹಾಗೂ ಅಫ್ಘಾನ್ ಅಧ್ಯಕ್ಷರ ಜೊತೆ ತಾನು ನಡೆಲು ಉದ್ದೇಶಿಸಿದ್ದ ರಹಸ್ಯ ಶೃಂಗಸಭೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಠಾತ್ತನೆ ಸ್ಥಗಿತಗೊಳಿಸಿದ್ದಾರೆ. ಇದರೊಂದಿಗೆ ಅಫ್ಘಾನ್ ಯುದ್ಧವನ್ನು ಅಂತ್ಯಗೊಳಿಸಲು ಅಮೆರಿಕ ನಡೆಸುತ್ತಿದ್ದ ರಾಜತಾಂತ್ರಿಕ ಪ್ರಯತ್ನಗಳು ನೆನೆಗುದಿಗೆ ಬಿದ್ದಂತಾಗಿದೆ.

   ಅಮೆರಿಕದ ಮೇರಿಲ್ಯಾಂಡ್‌ನಲ್ಲಿರುವ ಅಮೆರಿಕ ಅಧ್ಯಕ್ಷ ವಿಶ್ರಾಂತಿಗೃಹವಾದ ಕ್ಯಾಂಪ್‌ಡೇವಿಡ್‌ನಲ್ಲಿ ಇತ್ತಂಡಗಳ ನಡುವೆ ತಾನು ರವಿವಾರ ಅಭೂತಪೂರ್ವವಾದ ಮಾತುಕತೆಗಳನ್ನು ಪ್ರತ್ಯಪ್ರತ್ಯೇಕವಾಗಿ ನಡೆಸುವುದಾಗಿ ಹೇಳಿ ಅಚ್ಚರಿ ಮೂಡಿಸಿದ್ದರು. ಆದರೆ ತಾಲಿಬಾನ್‌ನ ಹಿಂಸಾತ್ಮಕ ಅಭಿಯಾವನ್ನು ಉಂದುವರಿಸಿದ್ದು, ಅವರು ನಂಬಲರ್ಹರಲ್ಲದ ಪಾಲುದಾರರೆಂದು ತನಗೆ ಮನವರಿಕೆಯಾಗಿದೆ ಎಂದರು.

 ಕೆಲವು ಪ್ರಮುಖ ತಾಲಿಬಾನ್ ನಾಯಕರು ಹಾಗೂ ಅಫ್ಘಾನ್ ಅಧ್ಯಕ್ಷರು ತನ್ನನ್ನು ರವಿವಾರ ಕ್ಯಾಂಪ್‌ಡೇವಿಡ್‌ನಲ್ಲಿ ರಹಸ್ಯವಾಗಿ ಭೇಟಿಯಾಗಲಿದ್ದಾರೆಂದು ಟ್ರಂಪ್ ಟ್ವೀಟ್ ಮಾಡಿದ್ದಾರೆ.

 ‘‘ಆದರೆ ದುರದೃಷ್ಟವಶಾತ್, ಹುಸಿ ಸಾಮರ್ಥ್ಯವನ್ನು ತೋರ್ಪಡಿಸಿಕೊಳ್ಳವುದಕ್ಕಾಗಿ ಅವರು ನಮ್ಮ ಓರ್ವ ಮಹಾನ್ ಸೈನಿಕರಲ್ಲೊಬ್ಬನನ್ನು ಹಾಗೂ ಇತರ 11 ಮಂದಿಯ ಹತ್ಯೆಗೈದಿದೆ. ನಾನು ತಕ್ಷಣವೇ ಸಭೆಯನ್ನು ರದ್ದುಪಡಿಸಿದ್ದೇನೆ ಹಾಗೂ ಶಾಂತಿ ಮಾತುಕತೆಗಳನ್ನು ಸ್ಥಗಿತಗೊಳಿಸಿದ್ದೇನೆ’’ ಎಂದವರು ಹೇಳಿದ್ದಾರೆ.

ತಮ್ಮ ಚೌಕಾಶಿಗೆ ಹೆಚ್ಚಿನ ಬಲಬರುವಂತೆ ಮಾಡಲು ಹಲವಾರು ಮಂದಿಯನ್ನು ಕೊಲ್ಲುವ ಈ ಜನರು ಎಂಥವರು?. ಅವರು ಪರಿಸ್ಥಿತಿಯನ್ನು ಹದಗೆಡಿಸಿದ್ದಾರೆ ಎಂದು ಟ್ರಂಪ್ ತಾಲಿಬಾನ್ ಬಂಡುಕೋರರ ವಿರುದ್ಧ ಕಿಡಿಕಾರಿದ್ದಾರೆ.

 ಕಾಬೂಲ್‌ನಲ್ಲಿ ಗುರುವಾರ ನಡೆದ ಕಾರ್‌ಬಾಂಬ್ ದಾಳಿಯಲ್ಲಿ ಓರ್ವ ಅಮೆರಿಕ ಸೈನಿಕ ಹಾಗೂ ರೊಮೆನಿಯಾದ ಸೇನಾಪಡೆಯ ಸಿಬ್ಬಂದಿಯೊಬ್ಬ ಸೇರಿದಂತೆ 12 ಮಂದಿ ಸಾವನ್ನಪ್ಪಿದ್ದರು. ಅಫ್ಘಾನಿಸ್ತಾನದಿಂದ ಅಮೆರಿಕ ನೇತೃತ್ವದ ವಿದೇಶಿ ಸೇನಾಪಡೆಗಳ ಹಿಂತೆಗೆತಕ್ಕೆ ಸಂಬಂಧಿಸಿ ಅಮೆರಿಕದ ಶಾಂತಿ ಪ್ರತಿನಿಧಿ ಹಾಗೂ ತಾಲಿಬಾನ್ ಬಂಡುಕೋರ ಪ್ರತಿನಿಧಿಗಳ ನಡುವೆ ಮಾತುಕತೆ ನಡೆಯುತ್ತಿರುವ ಸಂದರ್ಭದಲ್ಲೇ ಈ ದಾಳಿ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X