Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಚೀನಾ ಹಿಡಿತದಿಂದ ಹಾಂಕಾಂಗ್...

ಚೀನಾ ಹಿಡಿತದಿಂದ ಹಾಂಕಾಂಗ್ ಮುಕ್ತಗೊಳಿಸಿ: ಟ್ರಂಪ್‌ಗೆ ಪ್ರತಿಭಟನಕಾರರ ಮನವಿ

ವಾರ್ತಾಭಾರತಿವಾರ್ತಾಭಾರತಿ8 Sept 2019 11:35 PM IST
share
ಚೀನಾ ಹಿಡಿತದಿಂದ ಹಾಂಕಾಂಗ್ ಮುಕ್ತಗೊಳಿಸಿ: ಟ್ರಂಪ್‌ಗೆ ಪ್ರತಿಭಟನಕಾರರ ಮನವಿ

 ಹಾಂಕಾಂಗ್,ಸೆ.8: ಚೀನಾದ ಅರೆಸ್ವಾಯತ್ತ ಪ್ರಾಂತವಾದ ಹಾಂಕಾಂಗ್‌ಗೆ ಅಧಿಕ ಪ್ರಜಾತಾಂತ್ರಿಕ ಸ್ವಾತಂತ್ರ ನೀಡಬೇಕೆಂದು ಆಗ್ರಹಿಸಿ ಹಾಂಕಾಂಗ್‌ನ ಸಹಸ್ರಾರು ನಾಗರಿಕರು ರವಿವಾರವೂ ಬೃಹತ್ ರ್ಯಾಲಿ ನಡೆಸಿದರು. ಚೀನಾದ ಹಿಡಿತದಿಂದ ತಮ್ಮ ನೆಲವನ್ನು ಮುಕ್ತಗೊಳಸಬೇಕೆಂದು ಪ್ರತಿಭಟನಕಾರರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಮನವಿ ಮಾಡಿದ್ದಾರೆ. ರ್ಯಾಲಿಯಲ್ಲಿ ಭಾಗವಹಿಸಿದ್ದ ಸಹಸ್ರಾರು ಪ್ರತಿಭಟನಕಾರರು‘‘ ಬೀಜಿಂಗ್ ಅನ್ನು ತಡೆಯಿರಿ, ಹಾಂಕಾಂಗನ್ನು ವಿಮೋಚನೆಗೊಳಿಸಿ’’ ಎಂಬ ಘೋಷಣೆಗಳನ್ನು ಕೂಗಿದರು. ಕಪ್ಪು ಟೀಶರ್ಟ್ ಹಾಗೂ ಮುಖವಾಡಗಳನ್ನು ಧರಿಸಿದ್ದ ನೂರಾರು ಮಂದಿ ಅಧ್ಯಕ್ಷ ಟ್ರಂಪ್ ಅವರೇ, ಹಾಂಕಾಂಗನ್ನು ವಿಮೋಚನೆಗೊಳಿಸಿ’’ ಎಂಬ ಘೋಷಣೆಗಳನ್ನು ಬರೆಯಲಾಗಿದ್ದ ಭಿತ್ತಿಪತ್ರಗಳನ್ನು ಹಿಡಿದಿದ್ದರು. ಅಮೆರಿಕ ರಾಯಭಾರಿ ಕಚೇರಿಯ ಸಮೀಪದಿಂದಲೇ ರ್ಯಾಲಿ ಆರಂಭಗೊಂಡಿದ್ದು, ಪೊಲೀಸರು ಮೂಕಪ್ರೇಕ್ಷಕರಾಗಿ ನಿಂತಿದ್ದರೆಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಚೀನಾದ ಸರ್ವಾಧಿಕಾರಿ ಆಡಳಿತದ ವಿರುದ್ಧ ನಡೆಯುತ್ತಿರುವ ಸಮರದಲ್ಲಿ ಹಾಂಕಾಂಗ್ ಮುಂಚೂಣಿಯಲ್ಲಿದೆ’’ ಎಂದು ರವಿವಾರದ ರ್ಯಾಲಿಯ ಸಂಘಟಕರಲ್ಲೊಬ್ಬರಾದ ಪಾಂರೆರ್ ಚಾನ್ ತಿಳಿಸಿದ್ದಾರೆ.

 ಹಾಂಕಾಂಗ್‌ನಲ್ಲಿ ಕ್ರಿಮಿನಲ್ ಪ್ರಕರಣದಲ್ಲಿ ಬಂಧಿತರಾದ ಶಂಕಿತ ಆರೋಪಿಗಳನ್ನು ಚೀನಾ ಮುಖ್ಯಭೂಮಿಗೆ ಕರೆದೊಯ್ಯುವುದಕ್ಕೆ ಅವಕಾಶ ನೀಡುವ ಚೀನಿ ಸರಕಾರದ ಪ್ರಸ್ತಾವಿತ ಕಾನೂನಿನ ವಿರುದ್ಧ ಬೇಸಿಗೆಯಲ್ಲಿ ಪ್ರತಿಭಟನೆ ಆರಂಭಗೊಂಡಿತ್ತು ಹಾಗೂ ಕಳೆದ ಕೆಲವು ವಾರಗಳಲ್ಲಿ ತೀವ್ರ ಸ್ವರೂಪವನ್ನು ಪಡೆದಿತ್ತು.

  ಪ್ರತಿಭಟನಾಕಾರರ ಬೇಡಿಕೆಗೆ ಕೊನೆಗೂ ಮಣಿದ ಹಾಂಕಾಂಗ್ ಸರಕಾರವು ಕಳೆದ ವಾರ ವಿಧೇಯಕವನ್ನು ಹಿಂದಕ್ಕೆ ಪಡೆದುಕೊಂಡಿತ್ತು. ಆದರೆ ಆನಂತರ ಪ್ರತಿಭಟನಕಾರರು ಇತರ ಬೇಡಿಕೆಗಳನ್ನು ಮಂದಿರಿಸಿದ್ದು, ಹಾಂಕಾಂಗ್‌ಗೆ ಅಧಿಕ ಪ್ರಜಾಪ್ರಭುತ್ವವನ್ನು ನೀಡಬೇಕೆಂದು ಅವರು ಆಗ್ರಹಿಸಿದ್ದಾರೆ.

  

ಅಮೆರಿಕದ ಕೆಲವು ಸಂಸದರು ಹಾಂಕಾಂಗ್‌ನ ಪ್ರತಿಭಟನಕಾರರನ್ನು ಬಲವಾಗಿ ಬೆಂಬಲಿಸಿದ್ದಾರೆ ಹಾಗೂ ಚೀನಾವು ಹಿಂಸಾತ್ಮಕವಾಗಿ ಪ್ರತಿಭಟನಕಾರನ್ನು ಹತ್ತಿಕ್ಕುವ ಸಾಧ್ಯತೆಯಿದೆಯೆಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಆದಾಗ್ಯೂ ಹಾಂಕಾಂಗ್ ಬಿಕ್ಕಟ್ಟಿನ ವಿಷಯದಿಂದ ಅಮೆರಿಕವು ದೂರವಿರುವುದೆಂದು ಟ್ರಂಪ್ ಸ್ಪಷ್ಟಪಡಿಸಿದ್ದಾರೆ. ಹಾಂಕಾಂಗ್ ಹಾಗೂ ಚೀನಾ ತಮ್ಮ ನಡುವೆಯೇ ಬಿಕ್ಕಟ್ಟು ಬಗೆಹರಿಯಬೇಕಾಗಿದೆಯೆಂದು ಅವರು ಅಭಿಪ್ರಾಯಿಸಿದ್ದಾರೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X