Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಬ್ರೇಝ್ ಅನ್ಸಾರಿ ಗುಂಪು ಹತ್ಯೆ: ಚಾರ್ಜ್...

ತಬ್ರೇಝ್ ಅನ್ಸಾರಿ ಗುಂಪು ಹತ್ಯೆ: ಚಾರ್ಜ್ ಶೀಟ್‍ ನಲ್ಲಿ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ಕೈಬಿಟ್ಟ ಪೊಲೀಸರು!

ವಾರ್ತಾಭಾರತಿವಾರ್ತಾಭಾರತಿ9 Sept 2019 11:57 AM IST
share
ತಬ್ರೇಝ್ ಅನ್ಸಾರಿ ಗುಂಪು ಹತ್ಯೆ: ಚಾರ್ಜ್ ಶೀಟ್‍ ನಲ್ಲಿ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ಕೈಬಿಟ್ಟ ಪೊಲೀಸರು!

ರಾಂಚಿ, ಸೆ.9: ಜೂನ್ 17ರಂದು ಜಾರ್ಖಂಡ್ ನಲ್ಲಿ ತಬ್ರೇಝ್ ಅನ್ಸಾರಿ ಎಂಬ ಯುವಕನಿಗೆ ಗುಂಪೊಂದು ‘ಜೈ ಶ್ರೀ ರಾಮ್’ ಹಾಗೂ ‘ಜೈ ಹನುಮಾನ್’ ಹೇಳುವಂತೆ ಬಲವಂತಪಡಿಸಿ ಆತನನ್ನು ಥಳಿಸಿ ಕೊಂದ ಪ್ರಕರಣದ ಸಂಬಂಧ ಜುಲೈ 29ರಂದು ಚಾರ್ಜ್ ಶೀಟ್ ಸಲ್ಲಿಸಿರುವ  ಪೊಲೀಸರು ತಬ್ರೇಝ್ ಮೇಲೆ ಹಲ್ಲೆಗೈದವರ ವಿರುದ್ಧ  ಕೊಲೆ ಆರೋಪವನ್ನು ಅದರಲ್ಲಿ ಕೈ ಬಿಟ್ಟಿದ್ದಾರೆ. ಇದಕ್ಕೆ ಆಕ್ಷೇಪ ಸೂಚಿಸಿ ತಬ್ರೇಝ್ ಪತ್ನಿ ಶಹಿಸ್ತಾ ಪರ ವಕೀಲ ಅಲ್ತಾಫ್ ಹುಸೈನ್ ಅವರು ಆಗಸ್ಟ್ 31ರಂದು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಆರೋಪಿಗಳನ್ನು ಪ್ರಕಾಶ್ ಮಂಡಲ್ ಅಲಿಯಾಸ್ ಪಪ್ಪು ಮಂಡಲ್, ಕಮಲ್ ಮಹತೋ, ಸುನಾಮೊ ಪ್ರಧಾನ್, ಪ್ರೇಮಚಂದ್ರ ಮಹಾಲಿ, ಸುಮಂತ್ ಮಹತೋ, ಮದನ್ ನಾಯಕ್, ಚಾಮು ನಾಯಕ್, ಮಹೇಶ್ ಮಹಳಿ, ಕುಶಲ್ ಮಹಳಿ, ಸತ್ಯನಾರಾಯಣ್ ನಾಯಕ್ ಹಾಗೂ ಭೀಮ್ ಸೇನ್ ಮಂಡಲ್ ಎಂದು ಗುರುತಿಸಲಾಗಿದೆ.

“ತಬ್ರೇಝ್ ದಿಢೀರ್ ಹೃದಯ ಸ್ಥಂಭನದಿಂದ ಮೃತಪಟ್ಟಿದ್ದಾನೆಂದು ಅಧಿಕಾರಿಗಳು ಹೇಳುತ್ತಿದ್ದಾರೆಂದು ನಮಗೆ ತಿಳಿದು ಬಂದಿದೆ. ಆತನ ತಲೆಯಲ್ಲಿ ದೊಡ್ಡ ಗಾಯವಿತ್ತು, ತಲೆಬುರುಡೆ ಹಲ್ಲೆಯಿಂದ ಒಡೆದಿತ್ತು. ಹೀಗಿರುವಾಗ ಹೃದಯ ಸ್ಥಂಭನದಿಂದ ಮೃತಪಟ್ಟಿದ್ದಾನೆಂದು ಹೇಗೆ ಹೇಳುತ್ತಾರೆ?'' ಎಂದು ಶಹಿಸ್ತಾರ ವಕೀಲ ಅಲ್ತಾಫ್ ಪ್ರಶ್ನಿಸುತ್ತಾರೆ.

ಪ್ರಕರಣದ ತನಿಖಾಧಿಕಾರಿ ಆರ್. ನಾರಾಯಣ್ ಕೂಡ ದಿಢೀರ್ ಹೃದಯ ಸ್ಥಂಭನ ಸಾವಿಗೆ ಕಾರಣವೆಂದು ಹೇಳಿದ್ದಾರೆ.  ಎರಡೆರಡು ವೈದ್ಯರ ಅಭಿಪ್ರಾಯ ಪಡೆಯಲಾಗಿದ್ದು ಇಬ್ಬರೂ ಇದೇ ಕಾರಣ ದೃಢಪಡಿಸಿದ್ದಾರೆ ಎಂದು ನಾರಾಯಣ್ ಹೇಳಿದ್ದಾರೆ.

ತಬ್ರೇಝ್ ಸಾವಿನ ಕಾರಣ ತಿಳಿಯಲು ರಚಿಸಲಾಗಿದ್ದ ಸರೈಕೆಲ-ಖಾರ್ವನ್ ಜಿಲ್ಲಾಧಿಕಾರಿ ಅಂಜನೇಯುಲ್ಲು ದೊಡ್ಡೆ ನೇತೃತ್ವದ ತ್ರಿಸದಸ್ಯ ತಂಡ ತಬ್ರೇಝ್ ಸಾವಿಗೆ ಪೊಲೀಸರು ಹಾಗೂ ವೈದ್ಯರನ್ನು ಹೊಣೆಯಾಗಿಸಿತ್ತು. “ಪೊಲೀಸರು ಸ್ಥಳಕ್ಕೆ ತಡವಾಗಿ ಆಗಮಿಸಿದ್ದರೆ, ವೈದ್ಯರು ಆತನ ತಲೆಬುರುಡೆಗಾದ ಗಾಯವನ್ನು  ಸರಿಯಾಗಿ ಗುರುತಿಸಿರಲಿಲ್ಲ'' ಎಂದು ದೊಡ್ಡೆ ನೇತೃತ್ವದ ತಂಡ ಜುಲೈ 12ರಂದು ನೀಡಿದ ವರದಿಯಲ್ಲಿ ತಿಳಿಸಿತ್ತು.

ಆದರೆ ಇದೀಗ ಹೃದಯ ಸ್ಥಂಭನ ಸಾವಿಗೆ ಕಾರಣವೆಂದು ದೃಢಪಟ್ಟಿದ್ದರಿಂದ ಆರೋಪಿಗಳ ವಿರುದ್ಧ ಕೊಲೆ ಪ್ರಕರಣ ದಾಖಲಿಸುವ ಹಾಗಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಪೊಲೀಸರು ಆರೋಪಿಗಳನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂದು ವಕೀಲ ಅಲ್ತಾಫ್ ಹೇಳುತ್ತಾರೆ. ತನ್ನ ಪತಿ ಮನೆಯಿಂದ ಹೆತ್ತವರ ಮನೆಗೆ ಮರಳಿರುವ ಶಹಿಸ್ತಾ ತನ್ನ ಪತಿಯ ಮಾವ ಮಸೂರ್ ಜತೆ ಆಗಾಗ ನ್ಯಾಯಾಲಯಕ್ಕೆ ಹಾಗೂ ಪೊಲೀಸ್ ಠಾಣೆಗೆ ಅಲೆದಾಡುತ್ತಾ ಪತಿಯ ಸಾವಿಗೆ ನ್ಯಾಯಕ್ಕಾಗಿ ಮೊರೆಯಿಡುತ್ತಿದ್ದಾರೆ. ಇದೀಗ ಆಕೆ ನ್ಯಾಯಾಲಯದಿಂದ ನ್ಯಾಯ ದೊರಕುವ ನಿರೀಕ್ಷೆಯಲ್ಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X