Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತೀವ್ರ ಆರ್ಥಿಕ ಸಂಕಷ್ಟ: ಶೇ.30ರಷ್ಟು...

ತೀವ್ರ ಆರ್ಥಿಕ ಸಂಕಷ್ಟ: ಶೇ.30ರಷ್ಟು ಗುತ್ತಿಗೆ ನೌಕರಿ ಕಡಿತಕ್ಕೆ ಬಿಎಸ್ಸೆನ್ನೆಲ್ ನಿರ್ಧಾರ

ವಾರ್ತಾಭಾರತಿವಾರ್ತಾಭಾರತಿ9 Sept 2019 7:24 PM IST
share
ತೀವ್ರ ಆರ್ಥಿಕ ಸಂಕಷ್ಟ: ಶೇ.30ರಷ್ಟು ಗುತ್ತಿಗೆ ನೌಕರಿ ಕಡಿತಕ್ಕೆ ಬಿಎಸ್ಸೆನ್ನೆಲ್ ನಿರ್ಧಾರ

ತಿರುವನಂತಪುರಂ, ಸೆ.9: ತೀವ್ರ ಆರ್ಥಿಕ ಸಂಕಷ್ಟದಲ್ಲಿರುವ ಸರಕಾರಿ ಸ್ವಾಮ್ಯದ ಬಿಎಸ್‌ಎನ್ನೆಲ್ ಸಂಸ್ಥೆಯ ಖಾಯಂ ಉದ್ಯೋಗಿಗಳಿಗೆ ಸತತ ಎರಡನೇ ತಿಂಗಳು ವೇತನ ಪಾವತಿ ವಿಳಂಬವಾಗಿರುವಂತೆಯೇ, ವೆಚ್ಚ ಕಡಿಮೆಗೊಳಿಸುವ ಸಲುವಾಗಿ ಪ್ರಥಮ ಹಂತದಲ್ಲಿ ಗುತ್ತಿಗೆ ನೌಕರಿಯನ್ನು ಶೇ.30ರಷ್ಟು ಕಡಿತಗೊಳಿಸುವಂತೆ ಸಂಸ್ಥೆ ಎಲ್ಲಾ ಕಚೇರಿಗಳಿಗೂ ಸುತ್ತೋಲೆ ಕಳುಹಿಸಿದೆ.

ಕೇರಳದಲ್ಲಿ ಬಿಎಸ್ಸೆಎನ್ನೆಲ್‌ನ ಗುತ್ತಿಗೆ ನೌಕರರು 7 ತಿಂಗಳಿಂದ ಬಾಕಿಯಾಗಿರುವ ವೇತನ ಪಾವತಿಗಾಗಿ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಮಧ್ಯೆಯೇ ಸಂಸ್ಥೆಯು ರವಾನಿಸಿರುವ ಈ ಸುತ್ತೋಲೆ ಗುತ್ತಿಗೆ ನೌಕರರಿಗೆ ಆಘಾತ ನೀಡಿದೆ. ಆಗಸ್ಟ್ 20ರಂದು ನಡೆದ ಲೆಕ್ಕಪರಿಶೋಧನಾ ಸಭೆಯಲ್ಲಿ ಕೈಗೊಂಡ ನಿರ್ಧಾರದ ಅನ್ವಯ ಈ ಕ್ರಮ ಕೈಗೊಳ್ಳಲಾಗಿದೆ.

ಖಾಯಂ ನೌಕರರಿಂದ ಆಗದ ಕೆಲಸಗಳನ್ನು ಮಾತ್ರ ಗುತ್ತಿಗೆ ನೌಕರರಿಂದ ನಿರ್ವಹಿಸಬೇಕು. ಅಲ್ಲದೆ ಅನಿವಾರ್ಯವಾದರೆ ಮಾತ್ರ, ವಾರಕ್ಕೆ ಮೂರು ದಿನ ಮಾತ್ರ ಗುತ್ತಿಗೆ ಕಾರ್ಮಿಕರನ್ನು ಬಳಸಿಕೊಳ್ಳಬೇಕು ಎಂದು ಸಭೆಯಲ್ಲಿ ನಿರ್ಧರಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ. ಇದು ಪ್ರಮುಖ ಹೊರಾಂಗಣ ಕೆಲಸಗಳನ್ನು ಬೃಹತ್ ಸಂಸ್ಥೆಗಳಿಗೆ ವಹಿಸಿಕೊಡುವ ಪ್ರಯತ್ನವಾಗಿದೆ ಎಂದು ನೌಕರರ ಒಕ್ಕೂಟ ಹೇಳಿದೆ.

ಬಿಎಸ್ಸೆಎನ್ನೆಲ್ ಪುನಶ್ಚೇತನ ಪ್ಯಾಕೇಜ್‌ನಡಿ ಸ್ವಯಂ ನಿವೃತ್ತಿ ಯೋಜನೆಯನ್ನು ಪ್ರಸ್ತಾಪಿಸುವ ನಿರೀಕ್ಷೆಯಿದೆ. ಈಗ ವೇತನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರಸ್ತಾವನೆಯನ್ನು ಹಲವು ಉದ್ಯೋಗಿಗಳು ಸ್ವೀಕರಿಸಬಹುದು. ಖಾಯಂ ನೌಕರರ ಸಂಖ್ಯೆ ಕಡಿಮೆಯಾದೊಡನೆ ಹಾಗೂ ಗುತ್ತಿಗೆ ನೌಕರಿಗೆ ಸಂಬಂಧಿಸಿ ಹೊಸ ನಿಯಮವನ್ನು ಜಾರಿಗೊಳಿಸಿದ ಬಳಿಕ ಪ್ರಮುಖ ಹೊರಾಂಗಣ ಕೆಲಸಗಳನ್ನು ಬೃಹತ್ ಸಂಸ್ಥೆಗಳಿಗೆ ವಹಿಸಬಹುದು ಎಂದು ಬಿಎಸ್ಸೆಎನ್ನೆಲ್ ಸಾಂದರ್ಭಿಕ ಗುತ್ತಿಗೆ ನೌಕರರ ಒಕ್ಕೂಟ(ಸಿಸಿಎಲ್‌ಯು)ದ ಕಾರ್ಯಾಧ್ಯಕ್ಷ ಕೆ ಮೋಹನನ್ ಹೇಳಿದ್ದಾರೆ.

ಈಗ ಇರುವ ಹಲವು ಗುತ್ತಿಗೆ ನೌಕರರು ಸುಮಾರು 20ರಿಂದ 30 ವರ್ಷ ಇಲ್ಲಿ ಕೆಲಸ ಮಾಡಿದವರು. ನಿವೃತ್ತಿ ವಯಸ್ಸಿನ ಮಿತಿಯಲ್ಲಿ ಸ್ವೇಚ್ಛಾನುಸಾರ ಬದಲಾವಣೆ ಮಾಡುವ ಮೂಲಕ ಕಳೆದ ಕೆಲ ತಿಂಗಳಿನಲ್ಲಿ ಸುಮಾರು 2000 ಗುತ್ತಿಗೆ ನೌಕರರನ್ನು ಕೆಲಸ ತೊರೆಯುವಂತೆ ಸೂಚಿಸಲಾಗಿದೆ ಎಂದವರು ಹೇಳಿದ್ದಾರೆ. ಹಲವು ತಿಂಗಳಿಂದ ಬಾಕಿ ಇರುವ ವೇತನ ಪಾವತಿಗೆ ಆಗ್ರಹಿಸಿ ಎರಡು ತಿಂಗಳ ಹಿಂದೆ ಗುತ್ತಿಗೆ ನೌಕರರು ಚೀಫ್ ಜನರಲ್ ಮ್ಯಾನೇಜರ್(ಸಿಜಿಎಂ) ಕಚೇರಿಯೆದುರು ಪ್ರತಿಭಟನೆ ನಡೆಸುತ್ತಿದ್ದಾರೆ. ಗುತ್ತಿಗೆ ನೌಕರರ ಬಾಕಿ ವೇತನ ಪಾವತಿಸಲು ತಕ್ಷಣ ಹಣದ ವ್ಯವಸ್ಥೆ ಮಾಡುವಂತೆ ಕೋರಿ ಸಿಜಿಎಂ ಕಾರ್ಪೊರೇಟ್ ಕಚೇರಿಗೆ ಪತ್ರ ಬರೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X