Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಆಟೊಮೊಬೈಲ್ ಕ್ಷೇತ್ರದಲ್ಲಿಯ ಬಿಕ್ಕಟ್ಟು:...

ಆಟೊಮೊಬೈಲ್ ಕ್ಷೇತ್ರದಲ್ಲಿಯ ಬಿಕ್ಕಟ್ಟು: ಅಶೋಕ್ ಲೇಲ್ಯಾಂಡ್ ನ 7 ಘಟಕಗಳು ಸ್ಥಗಿತ

ವಾರ್ತಾಭಾರತಿವಾರ್ತಾಭಾರತಿ9 Sept 2019 7:46 PM IST
share
ಆಟೊಮೊಬೈಲ್ ಕ್ಷೇತ್ರದಲ್ಲಿಯ ಬಿಕ್ಕಟ್ಟು: ಅಶೋಕ್ ಲೇಲ್ಯಾಂಡ್ ನ 7 ಘಟಕಗಳು ಸ್ಥಗಿತ

ಹೊಸದಿಲ್ಲಿ,ಸೆ.9: ತನ್ನ ಉತ್ಪನ್ನಗಳಿಗೆ ಬೇಡಿಕೆ ಕುಸಿದಿರುವ ಹಿನ್ನೆಲೆಯಲ್ಲಿ ಈ ತಿಂಗಳಲ್ಲಿ ತನ್ನ ಏಳು ಘಟಕಗಳು 18 ದಿನಗಳವರೆಗೆ ಉತ್ಪಾದನೆಯನ್ನು ಸ್ಥಗಿತಗೊಳಿಸಲಿವೆ ಎಂದು ವಾಣಿಜ್ಯ ವಾಹನಗಳ ಪ್ರಮುಖ ತಯಾರಿಕೆ ಕಂಪನಿ ಅಶೋಕ್ ಲೇಲ್ಯಾಂಡ್ ಸೋಮವಾರ ತಿಳಿಸಿದೆ.

ಉತ್ತರಾಖಂಡದ ಪಂತನಗರದಲ್ಲಿರುವ ಘಟಕವು ಸೆಪ್ಟಂಬರ್‌ನಲ್ಲಿ ಗರಿಷ್ಠ 18 ದಿನಗಳವರೆಗೆ ಕಾರ್ಯಾಚರಿಸುವುದಿಲ್ಲ. ಚೆನ್ನೈ ಬಳಿಯ ಎನ್ನೋರ್,ರಾಜಸ್ಥಾನದ ಆಲ್ವಾರ್, ಮಹಾರಾಷ್ಟ್ರದ ಭಂಡಾರಾ,ತಮಿಳುನಾಡಿನ ಹೊಸೂರು ಸೇರಿದಂತೆ ವಿವಿಧೆಡೆಗಳಲ್ಲಿರುವ ಕಂಪನಿಯ ಆರು ಘಟಕಗಳೂ 5 ದಿನಗಳಿಂದ ಹಿಡಿದು 16 ದಿನಗಳವರೆಗೆ ಉತ್ಪಾದನೆಯನ್ನು ಮಾಡುವುದಿಲ್ಲ ಎಂದು ಕಂಪನಿಯು ಶೇರು ವಿನಿಮಯ ಕೇಂದ್ರಗಳಿಗೆ ಸಲ್ಲಿಸಿರುವ ಹೇಳಿಕೆಯಲ್ಲಿ ಪ್ರಕಟಿಸಿದೆ.

ಬಸ್‌ ಗಳು ಸೇರಿದಂತೆ ಅಶೋಕ್ ಲೇಲ್ಯಾಂಡ್ ತಯಾರಿಸುವ ಎಲ್ಲ ಮಧ್ಯಮ ಮತ್ತು ಭಾರೀ ವಾಣಿಜ್ಯ ವಾಹನಗಳ ವಿಭಾಗದಲ್ಲಿ ಮಾರಾಟ ಸಂಖ್ಯೆಯು ಕಳೆದ ಆಗಸ್ಟ್‌ನಲ್ಲಿ 4,585ಕ್ಕೆ ಕುಸಿದಿದೆ. ಕಳೆದ ವರ್ಷದ ಆಗಸ್ಟ್‌ನಲ್ಲಿ ಕಂಪನಿಯು 12,420 ವಾಹನಗಳನ್ನು ಮಾರಾಟ ಮಾಡಿದ್ದು,ಈಗ ಅದು ಶೇ.63ರಷ್ಟು ಕುಸಿದಿದೆ. ಲಘು ವಾಣಿಜ್ಯ ವಾಹನಗಳ ಮಾರಾಟದಲ್ಲಿಯೂ ಶೇ.12ರಷ್ಟು ಕುಸಿತವಾಗಿದ್ದು, 3,711 ವಾಹನಗಳು ಮಾರಾಟವಾಗಿವೆ. 2018,ಆಗಸ್ಟ್‌ನಲ್ಲಿ 16,628ರಷ್ಟಿದ್ದ ಕಂಪನಿಯ ಒಟ್ಟೂ ವಾಹನಗಳ ಮಾರಾಟ ಸಂಖ್ಯೆ ಈ ವರ್ಷದ ಆಗಸ್ಟ್‌ನಲ್ಲಿ ಶೇ.50ರಷ್ಟು ಕುಸಿದು 8,296 ವಾಹನಗಳಿಗೆ ಇಳಿದಿದೆ.

ದೇಶದಲ್ಲಿ ಆಟೊಮೊಬೈಲ್ ಕ್ಷೇತ್ರವು ತೀವ್ರ ಬಿಕ್ಕಟ್ಟು ಎದುರಿಸುತ್ತಿದ್ದು,ಪ್ರಮುಖ ಕಾರು ತಯಾರಿಕೆ ಕಂಪನಿ ಮಾರುತಿ ಸುಝುಕಿ ತನ್ನ ಗುರುಗ್ರಾಮ ಮತ್ತು ಮನೇಸರ್ ಘಟಕಗಳನ್ನು ಸೆ.7ರಿಂದ ಸೆ.9ರವರೆಗೆ ಮುಚ್ಚುವುದಾಗಿ ಕಳೆದ ವಾರ ಪ್ರಕಟಿಸಿತ್ತು.

ಜುಲೈನಲ್ಲಿ ದೇಶದಲ್ಲಿ ಪ್ರಯಾಣಿಕ ವಾಹನಗಳ ಮಾರಾಟ ಶೇ.30.9ರಷ್ಟು ಕುಸಿದಿತ್ತು. ಕಳೆದ ತ್ರೈಮಾಸಿಕದಲ್ಲಿ ಆಟೊಮೊಬೈಲ್ ಕ್ಷೇತ್ರದಲ್ಲಿ 15,000 ಜನರು ಉದ್ಯೋಗಗಳನ್ನು ಕಳೆದುಕೊಂಡಿದ್ದು,ಕಳೆದ 18 ತಿಂಗಳುಗಳಲ್ಲಿ ಸುಮಾರು 300 ವಾಹನ ವಿತರಣೆ ಸಂಸ್ಥೆಗಳು ಮುಚ್ಚಲ್ಪಟ್ಟಿವೆ.

ಜಿಎಸ್‌ಟಿ ಕಡಿತದ ಕುರಿತು ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಅವರೊಂದಿಗೆ ಚರ್ಚೆ ಸೇರಿದಂತೆ ಆಟೊಮೊಬೈಲ್ ಕ್ಷೇತ್ರಕ್ಕೆ ಸರಕಾರದಿಂದ ಅಗತ್ಯವಿರುವ ಎಲ್ಲ ನೆರವುಗಳ ಬಗ್ಗೆ ಕೇಂದ್ರ ಸಚಿವ ನಿತಿನ ಗಡ್ಕರಿ ಅವರು ಕಳೆದ ವಾರ ಭರವಸೆ ನೀಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X