Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 1984ರ ಸಿಕ್ಖ್ ವಿರೋಧಿ ದಂಗೆ ಪ್ರಕರಣಕ್ಕೆ...

1984ರ ಸಿಕ್ಖ್ ವಿರೋಧಿ ದಂಗೆ ಪ್ರಕರಣಕ್ಕೆ ಮರುಜೀವ: ಮಧ್ಯಪ್ರದೇಶ ಸಿಎಂಗೆ ಕಂಟಕ

ವಾರ್ತಾಭಾರತಿವಾರ್ತಾಭಾರತಿ10 Sept 2019 9:18 AM IST
share
1984ರ ಸಿಕ್ಖ್ ವಿರೋಧಿ ದಂಗೆ ಪ್ರಕರಣಕ್ಕೆ ಮರುಜೀವ: ಮಧ್ಯಪ್ರದೇಶ ಸಿಎಂಗೆ ಕಂಟಕ

ಹೊಸದಿಲ್ಲಿ, ಸೆ.10: ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್‌ನಾಥ್ ವಿರುದ್ಧ 1984ರ ಸಿಕ್ಖ್ ವಿರೋಧಿ ದಂಗೆಗೆ ಸಂಬಂಧಿಸಿದ ಏಳು ಪ್ರಕರಣಗಳನ್ನು ಗೃಹ ಸಚಿವಾಲಯ ಮರು ತೆರೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯಕ್ತಿಗಳು, ಗುಂಪುಗಳು ಹಾಗೂ ಸಂಘ ಸಂಸ್ಥೆಗಳು ಯಾವುದೇ ಮಾಹಿತಿ ಇದ್ದಲ್ಲಿ ಹಂಚಿಕೊಳ್ಳಬಹುದು ಎಂದು ಪ್ರಕಟಿಸಿದೆ.

ಎಫ್‌ಐಆರ್ ಸಂಖ್ಯೆ 601/84 ಸೇರಿದಂತೆ ಸಿಕ್ಖ್ ವಿರೋಧಿ ದಂಗೆಗೆ ಸಂಬಂಧಿಸಿದ ಏಳು ಪ್ರಕರಣಗಳನ್ನು ಮರು ತೆರೆಯಲಾಗಿದೆ. ಗಲಭೆ ಸಂದರ್ಭದಲ್ಲಿ ರಕಬ್‌ಗಂಜ್ ಗುರುದ್ವಾರಕ್ಕೆ ಮುತ್ತಿಗೆ ಹಾಕಿದ ಗುಂಪಿನಲ್ಲಿ ಕಮಲ್‌ನಾಥ್ ಅವರೂ ಇದ್ದರು ಎಂಬ ಸಾಕ್ಷಿಯೊಬ್ಬನ ಪ್ರತಿಪಾದನೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ. ಅಂದಿನ ಪ್ರಧಾನಿಯಾಗಿದ್ದ ಇಂದಿರಾ ಗಾಂಧಿ ಹತ್ಯೆಯಾದ ಬಳಿಕ ಸಿಕ್ಖ್ ವಿರೋಧಿ ಗಲಭೆ ಆರಂಭವಾಗಿತ್ತು.

ಅಂದು ಅಪರಾಧ ವರದಿಗಾರನಾಗಿದ್ದ ಸಂಜಯ್ ಸೂರಿಯಂಥ ಕೆಲ ಸಾಕ್ಷಿಗಳು, ಈ ಗುಂಪಿನಲ್ಲಿ ಕಮಲ್‌ನಾಥ್ ಇದ್ದರು ಎಂದು ಹೇಳಿಕೆ ನೀಡಿದ್ದರು. ಆದರೆ ಹಿರಿಯ ಕಾಂಗ್ರೆಸ್ ಮುಖಂಡ ಇದನ್ನು ನಿರಾಕರಿಸಿದ್ದಾರೆ. ಈ ಪ್ರಕರಣದ ಎಫ್‌ಐಆರ್‌ನಲ್ಲಿ ಕಮಲ್‌ನಾಥ್ ಹೆಸರಿಲ್ಲ.

ಏಳು ಪ್ರಕರಣಗಳ ಪೈಕಿ ಒಂದು ಪ್ರಕರಣದಲ್ಲಿ ಶಾಮೀಲಾಗಿದ್ದ ಐದು ಆರೋಪಿಗಳಿಗೆ ಕಮಲ್‌ನಾಥ್ ಆಶ್ರಯ ನೀಡಿದ್ದರು ಎಂದು ಸೋಮವಾರ ದಿಲ್ಲಿ ಶಾಸಕ ಮಜೀಂದರ್ ಸಿಂಗ್ ಸಿಸ್ರಾ ಹೇಳಿಕೆ ನೀಡಿದ್ದರು.

"ಹೊಸದಿಲ್ಲಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್‌ಐಆರ್‌ನಲ್ಲಿ ನಾಥ್ ಅವರ ಹೆಸರು ಇಲ್ಲ. 601/84 ಪ್ರಕರಣದಲ್ಲಿ ಐದು ಮಂದಿಯ ವಿರುದ್ಧ ಆರೋಪ ಹೊರಿಸಲಾಗಿದ್ದು, ಇವರಿಗೆ ನಾಥ್ ಮನೆಯಲ್ಲಿ ಆಸರೆ ನೀಡಲಾಗಿದೆ. ಸಾಕ್ಷಿ ಇಲ್ಲ ಎಂಬ ಕಾರಣಕ್ಕೆ ಎಲ್ಲರನ್ನೂ ಆರೋಪಮುಕ್ತಗೊಳಿಸಲಾಗಿದೆ. ಇದೀಗ ಎಸ್‌ಐಟಿ ಈ ಪ್ರಕರಣದ ಮರುತನಿಖೆಗೆ ಮಾಡುತ್ತಿರುವುದರಿಂದ ಕಮಲ್‌ನಾಥ್ ದಂಗೆಯಲ್ಲಿ ಶಾಮೀಲಾದ ಬಗ್ಗೆ ಇಬ್ಬರು ಸಾಕ್ಷಿಗಳು ಎಸ್‌ಐಟಿ ಮುಂದೆ ಹಾಜರಾಗಿ ಹೇಳಿಕೆ ನೀಡಲಿದ್ದಾರೆ" ಎಂದು ಸಿಸ್ರಾ ಹೇಳಿದ್ದಾರೆ.

ಇಂಗ್ಲೆಂಡಿನಲ್ಲಿರುವ ಸಂಜಯ್ ಸೂರಿ ಹಾಗೂ ಪಾಟ್ನಾದಲ್ಲಿರುವ ಮುಕ್ತಿಯಾರ್ ಸಿಂಗ್ ಎಂಬ ಇಬ್ಬರು ಸಾಕ್ಷಿಗಳ ಜತೆ ಈಗಾಗಲೇ ಮಾತನಾಡಿದ್ದು, ಅವರು ಎಸ್‌ಐಟಿ ಮುಂದೆ ಹಾಜರಾಗಿ ತಮ್ಮ ಹೇಳಿಕೆ ದಾಖಲಿಸಲಿದ್ದಾರೆ ಎಂದು ಸಿಸ್ರಾ ವಿವರಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X