Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಖಾಸಗಿ ರೈಲ್ವೆ ಸೇವೆ ಆರಂಭ ಯಾವಾಗ...

ಖಾಸಗಿ ರೈಲ್ವೆ ಸೇವೆ ಆರಂಭ ಯಾವಾಗ ಗೊತ್ತೇ?

ವಾರ್ತಾಭಾರತಿವಾರ್ತಾಭಾರತಿ10 Sept 2019 9:29 AM IST
share
ಖಾಸಗಿ ರೈಲ್ವೆ ಸೇವೆ ಆರಂಭ ಯಾವಾಗ ಗೊತ್ತೇ?

ಹೊಸದಿಲ್ಲಿ, ಸೆ.10: ಖಾಸಗಿಯವರಿಗೆ ರೈಲು ಸೇವೆ ನಿರ್ವಹಿಸಲು ಅವಕಾಶ ನೀಡುವ ಮುನ್ನ ಭಾರತೀಯ ರೈಲ್ವೆ, ಹಬ್ಬದ ಸಂದರ್ಭದಲ್ಲಿ ಪ್ರಯಾಣದರವನ್ನು ದಿಢೀರನೇ ಏರಿಸುವುದನ್ನು ತಡೆಯುವ ಸಂಬಂಧ ನಿರ್ಬಂಧಗಳನ್ನು ಹೇರಲಿದೆ ಎಂದು ಭಾರತೀಯ ರೈಲ್ವೆ ಪ್ರಕಟಿಸಿದೆ.

"ರೈಲು ಸೇವೆಯನ್ನು ಖಾಸಗಿಯವರು ನಿರ್ವಹಿಸುವ ವ್ಯವಸ್ಥೆ ಜಾರಿಗೆ ತರಲು ಸ್ವಲ್ಪ ಸಮಯಾವಕಾಶ ಬೇಕಾಗಬಹುದು. ನಿರ್ಬಂಧ ಸಂಸ್ಥೆಯೊಂದು ಪ್ರಯಾಣದರ, ಮಾರ್ಗಗಳ ಹಂಚಿಕೆ ಮತ್ತು ಸುರಕ್ಷತೆ ವಿಚಾರಗಳ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ. ಪಾರದರ್ಶಕ ಬಿಡ್ಡಿಂಗ್ ಪ್ರಕ್ರಿಯೆ ಮೂಲಕ ರೈಲು ಹಾಗೂ ಮಾರ್ಗಗಳನ್ನು ಹಂಚಿಕೆ ಮಾಡಲಾಗುವುದು" ಎಂದು ರೈಲ್ವೆ ಮಂಡಳಿ ಅಧ್ಯಕ್ಷ ವೈ.ಕೆ.ಯಾದವ್ ಹೇಳಿದರು.

ರೈಲು ಸೇವೆ ಆರಂಭಿಸುವ ಬಗ್ಗೆ ಹಲವು ಖಾಸಗಿ ಸಂಘಸಂಸ್ಥೆಗಳು ಆಸಕ್ತಿ ವ್ಯಕ್ತಪಡಿಸಿವೆ ಎಂದು ಅವರು ಸ್ಪಷ್ಟಪಡಿಸಿದರು. ಹಲವು ವಿಮಾನಯಾನ ಸಂಸ್ಥೆಗಳು ಕೂಡಾ ಈ ಯೋಜನೆಗೆ ಉತ್ಸುಕವಾಗಿವೆ ಎಂದರು.

ಸದ್ಯ ಇರುವ ಪ್ರಮುಖ ರೈಲ್ವೆ ಮಾರ್ಗಗಳಲ್ಲಿ ಓಡಾಡುವ ಶೇಕಡ 90ರಷ್ಟು ಸರಕು ಸಾಗಣೆ ರೈಲುಗಳನ್ನು, ವಿಶೇಷವಾದ ಸರಕು ಸಾಗಣೆ ಕಾರಿಡಾರ್‌ಗಳಿಗೆ ವರ್ಗಾವಣೆ ಮಾಡಿದ ಬಳಿಕ ಖಾಸಗಿ ಸಂಸ್ಥೆಗಳಿಗೆ ಇದರ ನಿರ್ವಹಣೆಯನ್ನು ವಹಿಸಲಾಗುತ್ತದೆ. ಪೂರ್ವ ಮತ್ತು ಪಶ್ಚಿಮ ಸರಕು ಸಾಗಣೆ ಕಾರಿಡಾರ್ 2021ರ ಡಿಸೆಂಬರ್ ವೇಳೆಗೆ ಕಾರ್ಯಾರಂಭ ಮಾಡಲಿದೆ ಎಂದು ಯಾದವ್ ವಿವರಿಸಿದರು.

ಸದ್ಯ ಭಾರತೀಯ ರೈಲ್ವೆ ಎರಡು ತೇಜಸ್ ರ್ಯಾಕ್‌ಗಳನ್ನು ಐಆರ್‌ಸಿಟಿಸಿಗೆ ನೀಡಿದ್ದು, ಇದು ದಿಲ್ಲಿ- ಲಕ್ನೋ ಮತ್ತು ಅಹ್ಮದಾಬಾದ್- ಮುಂಬೈ ನಡುವೆ ಈ ಪರಿಕಲ್ಪನೆಯಡಿ ಓಡಲಿವೆ. "ನಾವು ಕಾರ್ಯಾಚರಣೆ ಸಂಸ್ಥೆಗಳಿಗೆ ಸಂಪೂರ್ಣ ಸ್ವಾತಂತ್ರ ನೀಡಲಿದ್ದೇವೆ. ಅವರು ಮನೋರಂಜನಾ ವ್ಯವಸ್ಥೆಗಳು, ವೈವಿಧ್ಯಮಯ ಶ್ರೇಣಿಯ ಆಹಾರ ಹಾಗೂ ಪಾನೀಯವನ್ನು ಒದಗಿಸಬಹುದಾಗಿದೆ. ಹೋಟೆಲ್ ಬುಕ್ಕಿಂಗ್, ಟ್ಯಾಕ್ಸಿ ಸೇವೆ, ಮನೆಯಿಂದ ಬ್ಯಾಗೇಜ್ ಒಯ್ಯುವುದು ಹಾಗೂ ಗಮ್ಯತಾಣಗಳಿಗೆ ಒಯ್ಯುವುದು, ಅಗತ್ಯವಿರುವ ಪ್ರಯಾಣಿಕರಿಗೆ ವೀಲ್‌ಚೇರ್ ಒದಗಿಸುವಂಥ ಸೇವೆಗಳನ್ನು ಐಆರ್‌ಸಿಟಿಸಿ ಆರಂಭಿಸಲಿದೆ" ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X