Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತ-ನೇಪಾಳ ಪೈಪ್‌ಲೈನ್‌ಗೆ ಚಾಲನೆ:...

ಭಾರತ-ನೇಪಾಳ ಪೈಪ್‌ಲೈನ್‌ಗೆ ಚಾಲನೆ: ಮೋದಿ, ಕೆ.ಪಿ. ಶರ್ಮ ಒಲಿಯಿಂದ ಜಂಟಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ10 Sept 2019 8:05 PM IST
share
ಭಾರತ-ನೇಪಾಳ ಪೈಪ್‌ಲೈನ್‌ಗೆ ಚಾಲನೆ: ಮೋದಿ, ಕೆ.ಪಿ. ಶರ್ಮ ಒಲಿಯಿಂದ ಜಂಟಿ ಉದ್ಘಾಟನೆ

ಕಠ್ಮಂಡು, ಸೆ. 10: ಭಾರತ ಮತ್ತು ನೇಪಾಳಗಳ ನಡುವಿನ ಪೆಟ್ರೋಲಿಯಂ ಪೈಪ್‌ಲೈನ್ ಮಂಗಳವಾರ ಉದ್ಘಾಟನೆಗೊಂಡಿದೆ. ಎರಡು ದೇಶಗಳ ನಡುವೆ ಪೆಟ್ರೋಲಿಯಂ ಪೈಪ್‌ಲೈನ್ ಹಾದು ಹೋಗಿರುವುದು ದಕ್ಷಿಣ ಏಶ್ಯದಲ್ಲೇ ಮೊದಲನೆಯದಾಗಿದೆ.

ಸುತ್ತಲೂ ನೆಲಾವೃತವಾಗಿರುವ ನೇಪಾಳಕ್ಕೆ ತನ್ನ ಇಂಧನ ಅವಶ್ಯಕತೆಗಳನ್ನು ಪೂರೈಸಲು ಹಾಗೂ ಇಂಧನ ಸಾಗಾಟದ ವೆಚ್ಚವನ್ನು ಗಣನೀಯವಾಗಿ ಕಡಿಮೆ ಮಾಡಲು ಈ ಪೈಪ್‌ಲೈನ್ ನೆರವಾಗಲಿದೆ.

60 ಕಿ.ಮೀ.ಗಿಂತಲೂ ಹೆಚ್ಚಿನ ಉದ್ದದ ಮೋತಿಹಾರಿ-ಆಮ್‌ಲೇಖ್‌ಗಂಜ್ ತೈಲ ಪೈಪ್‌ಲೈನ್‌ನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ನೇಪಾಳ ಪ್ರಧಾನಿ ಕೆ.ಪಿ. ಶರ್ಮ ಒಲಿ ವೀಡಿಯೊ ಲಿಂಕ್ ಮೂಲಕ ಜಂಟಿಯಾಗಿ ಉದ್ಘಾಟಿಸಿದರು.

ಭಾರತದ 324 ಕೋಟಿ ರೂಪಾಯಿ ನೆರವಿನೊಂದಿಗೆ ಪೈಪ್‌ಲೈನನ್ನು ನಿರ್ಮಿಸಲಾಗಿದೆ.

ಯೋಜನೆಯನ್ನು ಉದ್ಘಾಟಿಸಿದ ನೇಪಾಳ ಪ್ರಧಾನಿ ಒಲಿ, ಈ ಪೈಪ್‌ಲೈನ್ ನೇಪಾಳದ ದೊಡ್ಡ ಸಾಧನೆಯಾಗಿದೆ ಎಂದು ಹೇಳಿದರು.

‘‘ನಮ್ಮ ಜನರ ಅಭಿವೃದ್ಧಿ, ಸಮೃದ್ಧಿ ಮತ್ತು ಸಂತೋಷಕ್ಕಾಗಿ ನಾವು (ಭಾರತ ಮತ್ತು ನೇಪಾಳ) ಒಂದೇ ರೀತಿಯ ಮುನ್ನೋಟಗಳನ್ನು ಹೊಂದಿದ್ದೇವೆ. ಇದನ್ನು ಸಾಕಾರಗೊಳಿಸಲು ಸದೃಢ ರಾಜಕೀಯ ಬದ್ಧತೆ ಮತ್ತು ಪ್ರಬಲ ಇಚ್ಛಾಶಕ್ತಿಯನ್ನು ಹೊಂದಿದ್ದೇವೆ’’ ಎಂದರು.

60 ಕಿ.ಮೀ.ಗೂ ಅಧಿಕ ಉದ್ದದ ಪೆಟ್ರೋಲಿಯಂ ಪೈಪ್‌ಲೈನ್ ಮೂಲಕ, ಮೊದಲ ಹಂತದಲ್ಲಿ, ಬಿಹಾರದ ಮೋತಿಹಾರ್ ನಗರದಿಂದ ನೇಪಾಳಕ್ಕೆ ಡೀಸೆಲ್ ಸಾಗಿಸಲು ನೇಪಾಳದ ಅಧಿಕಾರಿಗಳು ನಿರ್ಧರಿಸಿದ್ದಾರೆ. ನೇಪಾಳದ ಭಾಗದಲ್ಲಿ ಪೈಪ್‌ಲೈನ್‌ಗೆ ಭದ್ರತೆ ನೀಡಲು ನೇಪಾಳ ಸೇನೆಯು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ.

ಪ್ರಸಕ್ತ ಪೆಟ್ರೋಲಿಯಂ ಉತ್ಪನ್ನಗಳನ್ನು ಟ್ಯಾಂಕರ್‌ಗಳ ಮೂಲಕ ಭಾರತದಿಂದ ನೇಪಾಳಕ್ಕೆ ಸಾಗಿಸಲಾಗುತ್ತಿದೆ. ಈ ವ್ಯವಸ್ಥೆಯು 1973ರಿಂದಲೂ ಚಾಲ್ತಿಯಲ್ಲಿದೆ.

ಪೆಟ್ರೋಲಿಯಂ ಉತ್ಪನ್ನಗಳ ಸಾಗಾಟ ಖರ್ಚಿನಲ್ಲಿ ವಾರ್ಷಿಕ 200 ಕೋಟಿ ನೇಪಾಳಿ ರೂಪಾಯಿ (ಸುಮಾರು 125 ಕೋಟಿ ಭಾರತೀಯ ರೂಪಾಯಿ) ಉಳಿಸುವ ನಿರೀಕ್ಷೆಯನ್ನು ನೇಪಾಳ್ ತೈಲ ನಿಗಮ ಹೊಂದಿದೆ. ಅದೂ ಅಲ್ಲದೆ, ಪೆಟ್ರೋಲಿಯ ಉತ್ನನ್ನಗಳ ಸೋರಿಕೆಯನ್ನು ಕಡಿಮೆ ಮಾಡುವ ಮೂಲಕ ಹೆಚ್ಚುವರಿಯಾಗಿ ಕೋಟ್ಯಂತರ ರೂಪಾಯಿಯನ್ನು ಉಳಿಸಬಹುದಾಗಿದೆ ಎಂಬುದಾಗಿಯೂ ಅದು ಹೇಳಿದೆ.

23 ವರ್ಷಗಳ ಯೋಜನೆ!

ಮೋತಿಹಾರಿ-ಆಮ್‌ಲೇಖ್‌ಗಂಜ್ ತೈಲ ಪೈಪ್‌ಲೈನ್ ಯೋಜನೆಯನ್ನು ಮೊದಲ ಬಾರಿಗೆ 1996ರಲ್ಲಿ ಪ್ರಸ್ತಾಪಿಸಲಾಗಿತ್ತು. ಆದರೆ, ಅದಕ್ಕೆ ನಿಜವಾದ ಚಾಲನೆ ದೊರೆತಿದ್ದು ಪ್ರಧಾನಿ ನರೇಂದ್ರ ಮೋದಿ 2014ರಲ್ಲಿ ನೇಪಾಳಕ್ಕೆ ನೀಡಿದ ಭೇಟಿಯ ವೇಳೆ.

ಯೋಜನೆಯನ್ನು ಜಾರಿಗೊಳಿಸುವುದಕ್ಕಾಗಿ ಎರಡು ಸರಕಾರಗಳು 2015 ಆಗಸ್ಟ್‌ನಲ್ಲಿ ಒಪ್ಪಂದವೊಂದಕ್ಕೆ ಸಹಿ ಹಾಕಿದವು.

2015ರಲ್ಲಿ ನೇಪಾಳದಲ್ಲಿ ಸಂಭವಿಸಿದ ಭೂಕಂಪ ಮತ್ತು ದಕ್ಷಿಣ ಗಡಿಯಲ್ಲಿನ ಪೂರೈಕೆ ತಡೆಯಿಂದಾಗಿ ಯೋಜನೆಯ ಜಾರಿ ವಿಳಂಬಗೊಂಡಿತು. ಯೋಜನೆ ಕಾಮಗಾರಿ ಕೊನೆಗೂ ಕಳೆದ ವರ್ಷದ ಎಪ್ರಿಲ್‌ನಲ್ಲಿ ಆರಂಭಗೊಂಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X