Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಂಡಗಳನ್ನು ಕ್ರಮೇಣ ಹೆಚ್ಚಿಸುವಂತೆ...

ದಂಡಗಳನ್ನು ಕ್ರಮೇಣ ಹೆಚ್ಚಿಸುವಂತೆ ಕೇಂದ್ರಕ್ಕೆ ರಸ್ತೆ ಸುರಕ್ಷತಾ ತಜ್ಞರ ಆಗ್ರಹ

ಮೋಟರ್ ವಾಹನಗಳ ಕಾಯ್ದೆ

ವಾರ್ತಾಭಾರತಿವಾರ್ತಾಭಾರತಿ10 Sept 2019 10:26 PM IST
share
ದಂಡಗಳನ್ನು ಕ್ರಮೇಣ ಹೆಚ್ಚಿಸುವಂತೆ ಕೇಂದ್ರಕ್ಕೆ ರಸ್ತೆ ಸುರಕ್ಷತಾ ತಜ್ಞರ ಆಗ್ರಹ

ಹೊಸದಿಲ್ಲಿ,ಸೆ.10: ಮೋಟರ್ ವಾಹನಗಳ ಕಾಯ್ದೆಯಲ್ಲಿ ಬದಲಾವಣೆಗಳನ್ನು ತಂದಿರುವುದಕ್ಕಾಗಿ ಕೇಂದ್ರವನ್ನು ಪ್ರಶಂಸಿಸಿರುವ ರಸ್ತೆ ಸುರಕ್ಷತಾ ತಜ್ಞರು,ಆದರೆ ಒಂದೇ ಬಾರಿ ಭಾರೀ ದಂಡವನ್ನು ವಿಧಿಸುವ ಬದಲು ಅದನ್ನು ಕ್ರಮೇಣ ಹೆಚ್ಚಿಸುವಂತೆ ಆಗ್ರಹಿಸಿದ್ದಾರೆ.

 ಸಂಚಾರ ನಿಯಮಗಳ ಉಲ್ಲಂಘನೆಗಾಗಿ ದಂಡದ ಪ್ರಮಾಣವನ್ನು ಭಾರೀ ಪ್ರಮಾಣದಲ್ಲಿ ಹೆಚ್ಚಿಸಿರುವ ಮೋಟರ್ ವಾಹನಗಳ ಕಾಯ್ದೆಯಲ್ಲಿನ ಇತ್ತೀಚಿನ ತಿದ್ದುಪಡಿಗಳಲ್ಲಿ ಯಾವುದೇ ದೋಷಗಳಿಲ್ಲ ಮತ್ತು ಅವುಗಳು ಪ್ರಶಂಸೆಗೆ ಅರ್ಹವಾಗಿವೆ. ಆದರೆ ದಂಡದ ಪ್ರಮಾಣವನ್ನು ಕ್ರಮೇಣ ಹೆಚ್ಚಿಸಬೇಕು. ದಂಡದ ಪ್ರಮಾಣ ಏರಿಕೆ 100 ರೂ.ನಿಂದ 1,000 ರೂ.ಗೆ ಆಗಿದ್ದರೆ,ಒಂದೇ ಬಾರಿಗೆ ಅನುಷ್ಠಾನಿಸುವ ಬದಲು ಮೊದಲ ವರ್ಷದಲ್ಲಿ 250 ರೂ.ಗೆ,ಎರಡನೇ ವರ್ಷದಲ್ಲಿ 500 ರೂ.ಗೆ ಮತ್ತು ಮೂರನೇ ವರ್ಷದಲ್ಲಿ 1,000 ರೂ.ಗೆ ಹೆಚ್ಚಿಸಬೇಕು ಎಂದು ಹೇಳಿರುವ ಅಂತರರಾಷ್ಟ್ರೀಯ ರಸ್ತೆ ಒಕ್ಕೂಟದ ಅಧ್ಯಕ್ಷ ಕೆ.ಕೆ.ಕಪಿಲ ಅವರು,ಭವಿಷ್ಯದಲ್ಲಿ ರಸ್ತೆ ಸುರಕ್ಷತೆಗೆ ಬಳಸುವಂತಾಗಲು ಸಂಗ್ರಹಿಸಲಾದ ದಂಡದ ಹಣದಿಂದ ನಿಧಿಯೊಂದನ್ನು ಸರಕಾರವು ಸ್ಥಾಪಿಸಬೇಕು ಎಂದಿದ್ದಾರೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಲ್ಲಿ ಅರಿವು ಮೂಡಿಸಲು ಮತ್ತು ದಂಡದ ಹಣವನ್ನು ಕ್ರಮೇಣ ಹೆಚ್ಚಿಸಲು ಸಂಚಾರ ಪೊಲೀಸರು ರಸ್ತೆ ಸುರಕ್ಷತೆ ಸಂದೇಶಗಳೊಂದಿಗೆ ಹಸಿರು,ಕೆಂಪು ಮತ್ತು ಕಿತ್ತಳೆ ವರ್ಣಗಳಲ್ಲಿ ಸೆಲ್ಫ್-ಇಂಕಿಂಗ್ ರಬ್ಬರ್ ಸ್ಟಾಂಪ್‌ಗಳನ್ನು ಹೊಂದಿರಬೇಕು ಮತ್ತು ಚಲನ್ ಪ್ರತಿಯಲ್ಲಿ ಎಚ್ಚರಿಕೆಗಳನ್ನು ಮುದ್ರಿಸಿರಬೇಕು ಎಂದು ವಕೀಲ ಹಾಗೂ ರಸ್ತೆ ಸುರಕ್ಷತಾ ಕಾರ್ಯಕರ್ತ ಅರುಣ ಮೋಹನ್ ಹೇಳಿದ್ದಾರೆ.

ಪರಿಷ್ಕೃತ ಮೋಟರ್ ವಾಹನಗಳ ಕಾಯ್ದೆ ಜಾರಿಗೆ ಬಂದ ಸೆ.1ರಂದು ವಿವಿಧ ಉಲ್ಲಂಘನೆಗಳಿಗಾಗಿ 39,000 ಚಾಲಕರಿಗೆ ದಂಡಗಳನ್ನು ವಿಧಿಸಲಾಗಿತ್ತು. ಕಳೆದೊಂದು ವಾರದಲ್ಲಿ ಗುರುಗ್ರಾಮದಲ್ಲಿ ದ್ವಿಚಕ್ರ ವಾಹನ ಸವಾರನಿಗೆ 23,000 ರೂ.,ಭುವನೇಶ್ವರದಲ್ಲಿ ಆಟೊರಿಕ್ಷಾ ಚಾಲಕನಿಗೆ 47,500 ರೂ. ಮತ್ತು ಸಂಬಲ್ಪುರದಲ್ಲಿ ಲಾರಿ ಚಾಲಕನಿಗೆ 86,500 ರೂ.ಗಳ ಭಾರೀ ದಂಡಗಳನ್ನು ವಿಧಿಸಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X