Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಜಿನ್ಸನ್ ಜಾನ್ಸನ್ಗೆ ವರ್ಲ್ಡ್...

ಜಿನ್ಸನ್ ಜಾನ್ಸನ್ಗೆ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಗುರಿ

ವಾರ್ತಾಭಾರತಿವಾರ್ತಾಭಾರತಿ10 Sept 2019 11:02 PM IST
share
ಜಿನ್ಸನ್ ಜಾನ್ಸನ್ಗೆ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಗುರಿ

ಹೊಸದಿಲ್ಲಿ, ಸೆ.10: ಭಾರತದ ಖ್ಯಾತ ಮಧ್ಯಮ ಅಂತರದ ಓಟಗಾರ ಜಿನ್ಸನ್ ಜಾನ್ಸನ್ ಬರ್ಲಿನ್‌ನಲ್ಲಿ ಇತ್ತೀಚೆಗೆ ನಡೆದ ಐಎಸ್‌ಟಿಎಫ್ ಕೂಟದಲ್ಲಿ 3 ನಿಮಿಷ, 35.24 ಸೆಕೆಂಡ್‌ಗಳಲ್ಲಿ 1,500 ಮೀಟರ್ ದೂರವನ್ನು ಕ್ರಮಿಸಿ ಬೆಳ್ಳಿ ಜಯಿಸಿದ್ದರು. ಈ ಪ್ರದರ್ಶನದ ನೆರವಿನಲ್ಲಿ ಜಾನ್ಸನ್ ಸೆಪ್ಟಂಬರ್ 27ರಿಂದ ಅಕ್ಟೋಬರ್ 6ರ ತನಕ ದೋಹಾದಲ್ಲಿ ನಡೆಯಲಿರುವ ವರ್ಲ್ಡ್‌ಚಾಂಪಿಯನ್‌ಶಿಪ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದಾರೆ.

 28ರ ಹರೆಯದ ಜಾನ್ಸನ್ ಅಪೂರ್ವ ಪ್ರದರ್ಶನದ ನೆರವಿನಲ್ಲಿ ತಮ್ಮ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಉತ್ತಮಪಡಿಸಿದ್ದಾರೆ. ನೆದರ್‌ರ್ಲೆಂಡ್‌ನ ನಿಜ್ಮೆಗೆನ್‌ನಲ್ಲಿ ಕಳೆದ ಜೂನ್‌ನಲ್ಲಿ ನಡೆದ 1,500 ಓಟದಲ್ಲಿ 3 ನಿಮಿಷ, 37.62 ಸೆಕೆಂಡ್‌ನಲ್ಲಿ ಗುರಿ ತಲುಪಿ ರಾಷ್ಟ್ರೀಯ ದಾಖಲೆ ನಿರ್ಮಿಸಿದ್ದರು. ಜಾನ್ಸನ್‌ರ ಕೊನೆಯ ಗುರಿ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಪದಕ ತಂದುಕೊಡುವುದಾಗಿದೆ. ಜಿನ್ಸನ್ 2016ರಲ್ಲಿ ರಿಯೋ ಒಲಿಂಪಿಕ್ಸ್ ನಲ್ಲಿ 800 ಮೀಟರ್ ಓಟದಲ್ಲಿ ಭಾರತವನ್ನು ಪ್ರತಿನಿಧಿಸಿದ್ದರೂ, ಅರ್ಹತಾ ಸುತ್ತಿನಲ್ಲಿ 1 ನಿಮಿಷ, 47.27 ಸೆಕೆಂಡ್‌ಗಳಲ್ಲಿ ಗುರಿ ತಲುಪಿದ್ದರು. ಆದರೆ ಸೆಮಿಫೈನಲ್‌ಗೇರುವಲ್ಲಿ ವಿಫಲರಾಗಿದ್ದರು. ‘‘ಬರ್ಲಿನ್‌ನಲ್ಲಿ ರಾಷ್ಟ್ರೀಯ ದಾಖಲೆಯನ್ನು ಮುರಿಯುವ ವಿಶ್ವಾಸ ಇತ್ತು. ಆದರೆ ಬೆಳ್ಳಿ ಗೆಲ್ಲುವ ವಿಶ್ವಾಸ ನನಗಿರಲಿಲ್ಲ. ಪದಕ ಜಯಿಸಿರುವುದರಿಂದ ತುಂಬಾ ಸಂತಸವಾಗಿದೆ. ವರ್ಲ್ಡ್‌ಚಾಂಪಿಯನ್‌ಶಿಪ್‌ಗೆ ಅರ್ಹತೆ ಪಡೆದಿರುವೆ. ಆದರೆ ನನ್ನ ಅಂತಿಮ ಗುರಿ 2020ರ ಒಲಿಂಪಿಕ್ಸ್‌ನಲ್ಲಿ ಭಾರತವನ್ನು ಪ್ರತಿನಿಧಿಸಿ ಪದಕ ಗೆಲ್ಲುವುದಾಗಿದೆ. ಅದು ನನ್ನ ಕನಸು ’’ ಎಂದು ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಅರ್ಜುನ ಪ್ರಶಸ್ತಿಗೆ ಭಾಜನರಾಗಿದ್ದ ಜಿನ್ಸನ್ ಇದೀಗ ಅಮೆರಿಕದ ಕೊಲೊರಾಡೊದಲ್ಲಿ ತರಬೇತಿ ಪಡೆಯುತ್ತಿದ್ದಾರೆ.

‘‘3.35 ನಿಮಿಷಗಳಲ್ಲಿ ಗುರಿ ತಲುಪಿದರೆ ಒಲಿಂಪಿಕ್ಸ್ ದೊರೆಯದು ಎಂಬ ಅರಿವು ನನಗಿದೆ. ಆದರೆ ಇದಕ್ಕಾಗಿ ಕಠಿಣ ತರಬೇತಿ ಪಡೆಯುತ್ತಿದ್ದೇನೆ ’’ ಎಂದು ಜಿನ್ಸನ್ ತಿಳಿಸಿದ್ದಾರೆ. ಬರ್ಲಿನ್‌ನಲ್ಲಿ ಐಎಸ್‌ಟಿಎಫ್ ಕೂಟದಲ್ಲಿ ಅಮೆರಿಕದ ಜೋಶುವಾ ಥಾಂಪ್ಸನ್ ಚಿನ್ನ ಜಯಿಸಿದ್ದರು. ಜಿನ್ಸನ್ ಜಾನ್ಸನ್ ಎರಡನೇ ಸ್ಥಾನದೊಂದಿಗೆ ಬೆಳ್ಳಿ ಜಯಿಸಿದ್ದರು.

ಒಲಿಂಪಿಕ್‌ಗಿಂತ ಮೊದಲು ಜಿನ್ಸನ್ ದೋಹಾದಲ್ಲಿ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಪದಕ ಗೆಲ್ಲುವ ಯೋಜನೆಯಲ್ಲಿದ್ದಾರೆ. ಈಗ ಅವರು ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ 1,500 ಮೀಟರ್ ಸ್ಪರ್ಧೆಯ ಕಡೆಗೆ ಮಾತ್ರ ಗಮನ ಹರಿಸಿದ್ದಾರೆ. ಜಿನ್ಸನ್ ವರ್ಲ್ಡ್ ಚಾಂಪಿಯನ್‌ಶಿಪ್‌ನಲ್ಲಿ ಈ ವರೆಗೆ ಪದಕ ಜಯಿಸಿಲ್ಲ. 1,500 ಮೀಟರ್ ಓಟದಲ್ಲಿ ಪದಕ ಜಯಿಸುವ ಗುರಿಯೊಂದಿಗೆ ತರಬೇತಿ ಪಡೆಯುತ್ತಿದ್ದಾರೆ.

ಇಂಡಿಯನ್ ಆರ್ಮಿಯಲ್ಲಿ ನೈಬ್ ಸುಬೇದಾರ್ ಆಗಿರುವ ಜಿನ್ಸನ್ 2018ರಲ್ಲಿ ಜಕಾರ್ತದಲ್ಲಿ ನಡೆದ ಏಶ್ಯನ್ ಗೇಮ್ಸ್‌ನಲ್ಲಿ 1,500 ಮೀ ಓಟದಲ್ಲಿ ಚಿನ್ನ ಮತ್ತು 800 ಮೀಟರ್ ಓಟದಲ್ಲಿ ಬೆಳ್ಳಿ ಗೆದ್ದುಕೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X