Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ರೋಹಿತ್ ಶರ್ಮಾಗೆ ಅವಕಾಶ ಸಾಧ್ಯತೆ

ರೋಹಿತ್ ಶರ್ಮಾಗೆ ಅವಕಾಶ ಸಾಧ್ಯತೆ

ರಾಹುಲ್ ಕಳಪೆ ಫಾರ್ಮ್

ವಾರ್ತಾಭಾರತಿವಾರ್ತಾಭಾರತಿ10 Sept 2019 11:40 PM IST
share
ರೋಹಿತ್ ಶರ್ಮಾಗೆ ಅವಕಾಶ ಸಾಧ್ಯತೆ

ಹೊಸದಿಲ್ಲಿ, ಸೆ.10: ಆರಂಭಿಕ ಬ್ಯಾಟ್ಸ್‌ಮನ್ ಲೋಕೇಶ್ ರಾಹುಲ್ ಫಾರ್ಮ್ ಕಳೆದುಕೊಂಡಿರುವುದು ಟೀಮ್ ಇಂಡಿಯಾಕ್ಕೆ ತಲೆನೋವಾಗಿ ಪರಿಣಮಿಸಿದೆ. ಈ ಕಾರಣದಿಂದಾಗಿ ರೋಹಿತ್ ಶರ್ಮಾರಿಗೆ ಮುಂಬರುವ ದಕ್ಷಿಣ ಆಫ್ರಿಕ ವಿರುದ್ದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾದ ಅಂತಿಮ ಹನ್ನೊಂದರ ಬಳಗದಲ್ಲಿ ಆರಂಭಿಕ ಬ್ಯಾಟ್ಸ್‌ಮನ್ ಸ್ಥಾನ ದೊರೆಯುವ ಸಾಧ್ಯತೆ ಇದೆ.

ರಾಹುಲ್ ಬದಲಿಗೆ ರೋಹಿತ್ ಶರ್ಮಾ ಟೆಸ್ಟ್‌ನಲ್ಲಿ ಇನಿಂಗ್ಸ್ ಆರಂಭಿಸುವ ಬಗ್ಗೆ ಆಯ್ಕೆ ಸಮಿತಿಯ ಮುಖ್ಯಸ್ಥ ಎಂಎಸ್‌ಕೆ ಪ್ರಸಾದ್ ಅವರು ಸುಳಿವು ನೀಡಿದ್ದಾರೆ. ಭಾರತದ ಏಕದಿನ ತಂಡದ ಉಪನಾಯಕ ರೋಹಿತ್ ಶರ್ಮಾ ಉತ್ತಮ ಫಾರ್ಮ್‌ನಲ್ಲಿದ್ದಾರೆ. ಆದರೆ ವೆಸ್ಟ್‌ಇಂಡೀಸ್ ವಿರುದ್ಧ ಎರಡು ಟೆಸ್ಟ್ ಪಂದ್ಯಗಳಿಗೆ ಅವರಿಗೆ ಅವಕಾಶ ಸಿಕ್ಕಿರಲಿಲ್ಲ. ರೋಹಿತ್ ಟೆಸ್ಟ್‌ನಲ್ಲಿ ಸಾಮಾನ್ಯವಾಗಿ ಮಧ್ಯಮ ಸರದಿಯ ದಾಂಡಿಗನಾಗಿ ಕಣಕ್ಕಿಳಿಯುತ್ತಿದ್ದರು. ಆದರೆ ಮಧ್ಯಮ ಸರದಿಯಲ್ಲಿ ಅಜಿಂಕ್ಯ ರಹಾನೆ ಮತ್ತು ಹನುಮ ವಿಹಾರಿ ವೆಸ್ಟ್‌ಇಂಡೀಸ್ ವಿರುದ್ಧದ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಈ ಕಾರಣದಿಂದಾಗಿ ರೋಹಿತ್ ಶರ್ಮಾಗೆ ಮಧ್ಯಮ ಸರದಿಯಲ್ಲಿ ಅವಕಾಶ ಇಲ್ಲದಾಗಿದೆ. ಆರಂಭಿಕ ಬ್ಯಾಟ್ಸ್‌ಮನ್ ಸ್ಥಾನಕ್ಕೆ ರೋಹಿತ್ ಶರ್ಮಾಗೆ ಅವಕಾಶ ನೀಡಲು ಆಯ್ಕೆ ಸಮಿತಿ ಚಿಂತನೆ ನಡೆಸಿದೆ.

‘‘ ವೆಸ್ಟ್ ಇಂಡೀಸ್ ವಿರುದ್ಧ ಸರಣಿಯ ಬಳಿಕ ಆಯ್ಕೆ ಸಮಿತಿ ಸಭೆ ಸೇರಿಲ್ಲ. ತಂಡದ ಆಯ್ಕೆ ವೇಳೆ ರೋಹಿತ್ ಶರ್ಮಾರನ್ನು ಆರಂಭಿಕ ಬ್ಯಾಟ್ಸ್‌ಮನ್ ಸ್ಥಾನಕ್ಕೆ ಸೇರಿಸಿಕೊಳ್ಳುವ ವಿಚಾರದಲ್ಲಿ ಚರ್ಚೆ ನಡೆಸಲಿದ್ದೇವೆ’’ ಎಂದು ಪ್ರಸಾದ್ ತಿಳಿಸಿದ್ದಾರೆ.

 ‘‘ಲೋಕೇಶ್ ರಾಹುಲ್ ಖಂಡಿತವಾಗಿಯೂ ಓರ್ವ ಶ್ರೇಷ್ಠ ಪ್ರತಿಭಾವಂತ ಆಟಗಾರ. ಅವರಿಗೆ ಈಗ ಸ್ವಲ್ಪ ಹಿನ್ನಡೆಯಾಗಿದೆ. ಮುಂದೆ ಖಂಡಿತವಾಗಿಯೂ ಅವರು ಫಾರ್ಮ್‌ಗೆ ಮರಳುತ್ತಾರೆ ’’ ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ವಿಕೆಟ್ ಕೀಪರ್ ಎಂಎಸ್‌ಕೆ ಪ್ರಸಾದ್ ಹೇಳಿದ್ದಾರೆ.

ರಾಹುಲ್ ವೆಸ್ಟ್‌ಇಂಡೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಕ್ರಮವಾಗಿ 13, 6,44, 38 ರನ್ ಗಳಿಸಿದ್ದರು.

  ಕುಲದೀಪ ಯಾದವ್‌ಮತ್ತು ಯಜುವೇಂದ್ರ ಚಹಾಲ್ ವೆಸ್ಟ್‌ಇಂಡೀಸ್ ವಿರುದ್ಧ ನಡೆದ ಟ್ವೆಂಟಿ-20 ಸರಣಿಗೆ ಟೀಮ್ ಇಂಡಿಯಾದಲ್ಲಿ ಇರಲಿಲ್ಲ. ಮುಂಬರುವ ದಕ್ಷಿಣ ಆಫ್ರಿಕ ಸರಣಿಗೂ ಅವರು ತಂಡದಲ್ಲಿ ಸ್ಥಾನ ಪಡೆದಿಲ್ಲ. ಆದರೆ ಆಸ್ಟ್ರೇಲಿಯದಲ್ಲಿ ಮುಂದಿನ ವರ್ಷ ನಡೆಯಲಿರುವ ಟ್ವೆಂಟಿ-20 ವಿಶ್ವಕಪ್ ಟೂರ್ನಿಗೆ ತಂಡದಲ್ಲಿ ಅವರು ಅವಕಾಶ ಪಡೆಯಲಿದ್ದಾರೆ.

ರಾಹುಲ್ ಚಹಾರ್ ಮತ್ತು ವಾಶಿಂಗ್ಟನ್ ಸುಂದರ್ ದಕ್ಷಿಣ ಆಫ್ರಿಕ ವಿರುದ್ಧ ಟ್ವೆಂಟಿ-20 ಸರಣಿಗೆ ತಂಡದಲ್ಲಿದ್ದಾರೆ. ಟ್ವೆಂಟಿ-20 ಸರಣಿಯ ಮೊದಲ ಪಂದ್ಯ ಧರ್ಮಶಾಲಾದಲ್ಲಿ ಸೆ.15ರಂದು ನಡೆಯಲಿದೆ. ಇಬ್ಬರು ಆಟಗಾರರು ಕಳೆದ ತಿಂಗಳು ವೆಸ್ಟ್‌ಇಂಡೀಸ್ ಪ್ರವಾಸ ಸರಣಿಯಲ್ಲಿ ಭಾಗವಹಿಸಿದ್ದರು.

‘‘ಮುಂಬರುವ ಟ್ವೆಂಟಿ-20 ವಿಶ್ವಕಪ್‌ನ್ನು ಗಮನದಲ್ಲಿಟ್ಟುಕೊಂಡು ಸ್ಪಿನ್ ವಿಭಾಗಕ್ಕೆ ವಿಭಿನ್ನ ಶೈಲಿಯ ಯುವ ಸ್ಪಿನ್ನರ್‌ಗಳನ್ನು ಸೇರಿಸಿಕೊಳ್ಳುವ ನಿಟ್ಟಿನಲ್ಲಿ ಯೋಚಿಸಲಾಗುತ್ತಿದೆ. ಸೀಮಿತ ಓವರ್‌ಗಳ ಕ್ರಿಕೆಟ್‌ನಲ್ಲಿ ಕಳೆದ ಎರಡು ವರ್ಷಗಳಿಂದ ಚಹಾಲ್ ಮತ್ತು ಕುಲದೀಪ್ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ’’ ಎಂದು ಪ್ರಸಾದ್ ಹೆಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X