Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ​ಸಂಚಾರ ನಿಯಮ ಉಲ್ಲಂಘನೆ: ಈ ರಾಜ್ಯದಲ್ಲಿ...

​ಸಂಚಾರ ನಿಯಮ ಉಲ್ಲಂಘನೆ: ಈ ರಾಜ್ಯದಲ್ಲಿ ದಂಡ ಭಾರೀ ಇಳಿಕೆ!

ವಾರ್ತಾಭಾರತಿವಾರ್ತಾಭಾರತಿ11 Sept 2019 9:21 AM IST
share
​ಸಂಚಾರ ನಿಯಮ ಉಲ್ಲಂಘನೆ: ಈ ರಾಜ್ಯದಲ್ಲಿ ದಂಡ ಭಾರೀ ಇಳಿಕೆ!

ಗಾಂಧಿನಗರ: ಪರಿಷ್ಕೃತ ಮೋಟಾರು ವಾಹನ ಕಾಯ್ದೆ ಜಾರಿಗೆ ಬಂದ ಹತ್ತು ದಿನಗಳಲ್ಲೇ ಗುಜರಾತ್ ಸರ್ಕಾರ, ವಿವಿಧ ಸಂಚಾರ ನಿಯಮ ಉಲ್ಲಂಘನೆಗೆ ವಿಧಿಸುವ ದಂಡಮೊತ್ತವನ್ನು ಶೇಕಡ 25 ರಿಂದ ಶೇಕಡ 90ರವರೆಗೂ ಇಳಿಸಿದೆ. ಕೇಂದ್ರ ಸರ್ಕಾರ ಸೂಚಿಸಿದ್ದ ದಂಡಮೊತ್ತವನ್ನು ಇಳಿಸುವ ಸಂಬಂಧ ಮಂಗಳವಾರ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

"ಅನುಕಂಪ ಮತ್ತು ಮಾನವೀಯತೆ" ಆಧಾರದಲ್ಲಿ ದಂಡಮೊತ್ತವನ್ನು ಇಳಿಸಲಾಗಿದೆ ಎಂದು ರಾಜ್ಯ ಸರ್ಕಾರ ಸಮರ್ಥಿಸಿಕೊಂಡಿದೆ. ಗುಜರಾತ್ ಸರ್ಕಾರದ ಈ ಕ್ರಮ ಇತರ ರಾಜ್ಯಗಳಲ್ಲಿ ಕೂಡಾ ದಂಡಮೊತ್ತ ಇಳಿಸಲು ದಾರಿ ಮಾಡಿಕೊಡುವ ನಿರೀಕ್ಷೆ ಇದೆ.

ಹೊಸ ಮೋಟಾರು ವಾಹನ ಕಾಯ್ದೆಯ ಅನ್ವಯ ಹಲವು ಸಂಚಾರ ಅಪರಾಧಗಳಿಗೆ ವಿಧಿಸುವ ದಂಡವನ್ನು ರಾಜ್ಯ ಸರ್ಕಾರಗಳು ಕಡಿಮೆ ಮಾಡಲು ಅವಕಾಶವಿದೆ.

ಹೊಸ ದಂಡ ವಿಧಿಸುವ ವ್ಯವಸ್ಥೆ ಸೆ. 16ರಿಂದ ಜಾರಿಗೆ ಬರಲಿದೆ. ಆದರೆ ಪಾನಮತ್ತರಾಗಿ ವಾಹನ ಚಾಲನೆ ಮಾಡುವುದು, ಸಿಗ್ನಲ್ ಜಂಪ್‌ನಂಥ ಅಪರಾಧಗಳಿಗೆ ಮೂಲ ದಂಡನಾ ಮೊತ್ತ ಮುಂದುವರಿಯಲಿದ್ದು, ಇದನ್ನು ಬದಲಾಯಿಸಲು ಅವಕಾಶ ಇರುವುದಿಲ್ಲ.

"ಜನರಿಂದ ದಂಡ ಸಂಗ್ರಹಿಸುವುದು ಅಥವಾ ಪ್ರಕರಣ ದಾಖಲಿಸುವುದು ನಮ್ಮ ಆದ್ಯತೆಯಲ್ಲ. ಆದಾಗ್ಯೂ ಕಠಿಣ ಶಿಕ್ಷೆ ಇಲ್ಲದೇ ಕಾನೂನು ಜಾರಿಗೊಳಿಸುವುದು ಅಸಾಧ್ಯ. ಆದರೂ ಅನುಕಂಪ ಮತ್ತು ಮಾನವೀಯತೆ ಆಧಾರದಲ್ಲಿ ದಂಡವನ್ನು ಇಳಿಸುವ ನಿರ್ಧಾರಕ್ಕೆ ಬಂದಿದ್ದೇವೆ. ಆದರೆ ಜನರ ಜೀವಕ್ಕೆ ಅಪಾಯವಾಗುವಂಥ ಪ್ರಕರಣಗಳಲ್ಲಿ ಯಾವ ರಿಯಾಯಿತಿಯೂ ಇಲ್ಲ" ಎಂದು ಮುಖ್ಯಮಂತ್ರಿ ವಿಜಯ್ ರುಪಾನಿ ಹೇಳಿದ್ದಾರೆ.

ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುವುದಕ್ಕೆ ವಿಧಿಸುವ ದಂಡಮೊತ್ತವನ್ನು 1000 ರೂಪಾಯಿನಿಂದ 500 ರೂ., ತುರ್ತು ವಾಹನಗಳಿಗೆ ತಡೆ ಒಡ್ಡುವ ಅಪರಾಧಕ್ಕೆ 10 ಸಾವಿರದಿಂದ 1000 ರೂ., ಪಿಯುಸಿ ಇಲ್ಲದ ವಾಹನಗಳಿಗೆ ವಿಧಿಸುವ ದಂಡವನ್ನು 10 ಸಾವಿರದಿಂದ 3 ಸಾವಿರ ರೂಪಾಯಿಗಳಿಗೆ ಇಳಿಸಲಾಗಿದೆ.

ಕರ್ನಾಟಕದಲ್ಲೂ ದಂಡ ಪರಿಷ್ಕರಣೆ ಪ್ರಸ್ತಾವ ಪರಿಶೀಲಿಸಲಾಗುವುದು ಎಂದು ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಪ್ರಕಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X