Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸೆ.12ರಿಂದ ‘ಮೈನಿಂಗ್ ಮಜ್ಮಾ’...

ಸೆ.12ರಿಂದ ‘ಮೈನಿಂಗ್ ಮಜ್ಮಾ’ ಅಂತರ್‌ರಾಷ್ಟ್ರೀಯ ಸಮಾವೇಶ: ಫಿಮಿ ಅಧ್ಯಕ್ಷ ಸುನೀಲ್ ದುಗ್ಗಲ್

ವಾರ್ತಾಭಾರತಿವಾರ್ತಾಭಾರತಿ11 Sept 2019 8:50 PM IST
share

ಬೆಂಗಳೂರು, ಸೆ.11: ಗಣಿಗಾರಿಕೆಗೆ ಸಂಬಂಧಿಸಿದಂತೆ ಪರಿಶೋಧನೆ, ವ್ಯಾಪಾರ ಪ್ರದರ್ಶನವನ್ನು ಒಳಗೊಂಡ ಮೂರು ದಿನಗಳ(ಸೆ.12-14ರವರೆಗೆ) ‘ಮೈನಿಂಗ್ ಮಜ್ಮಾ’ ಅಂತರ್‌ರಾಷ್ಟ್ರೀಯ ಸಮಾವೇಶವನ್ನು ಬೆಂಗಳೂರು ಅಂತರ್‌ರಾಷ್ಟ್ರೀಯ ಪ್ರದರ್ಶನ ಕೇಂದ್ರ(ಬಿಐಇಸಿ)ದಲ್ಲಿ ಆಯೋಜಿಸಲಾಗಿದೆ ಎಂದು ಫೆಡರೇಷನ್ ಆಫ್ ಇಂಡಿಯನ್ ಮಿನರಲ್ ಇಂಡಸ್ಟ್ರೀಸ್ ಅಧ್ಯಕ್ಷ ಸುನೀಲ್ ದುಗ್ಗಲ್ ತಿಳಿಸಿದರು.

ಬುಧವಾರ ನಗರದ ಖಾಸಗಿ ಹೊಟೇಲ್‌ನಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಖನಿಜ ಸಮೃದ್ಧ ರಾಷ್ಟ್ರಗಳಾದ ಕೆನಡಾ ಮತ್ತು ಇತರೆ ದೇಶಗಳು ಸಮಾವೇಶದಲ್ಲಿ ಮತ್ತು ಟ್ರೇಡ್ ಶೋನಲ್ಲಿ ಸಕ್ರಿಯವಾಗಿ ಭಾಗವಹಿಸುತ್ತಿವೆ. ಇದಲ್ಲದೆ, ಪರಿಶೋಧನೆ, ಗಣಿಗಾರಿಕೆ ಕಂಪೆನಿಗಳು, ಸಲಕರಣೆಗಳ ಪೂರೈಕೆದಾರರು, ರಾಷ್ಟ್ರೀಯ ಮತ್ತು ಅಂತರ್‌ರಾಷ್ಟ್ರೀಯ ಸೇವಾ ಪೂರೈಕೆದಾರರು ಈ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಿದ್ದಾರೆ ಎಂದರು.

ನೀತಿ ತಯಾರಕರು, ತಂತ್ರಜ್ಞರು, ಪರಿಶೋಧನಾ ಕಂಪೆನಿಗಳು, ಗಣಿಗಾರಿಕೆ ವೃತ್ತಿಪರರು, ಸಲಕರಣೆಗಳ ಪೂರೈಕೆದಾರರು, ಶಿಕ್ಷಣ ತಜ್ಞರು ಮತ್ತು ನಾಗರಿಕ ಸಮಾಜಗಳು ಆಯಾ ಕ್ಷೇತ್ರಗಳಲ್ಲಿನ ಇತ್ತೀಚಿನ ಬೆಳವಣಿಗೆಗಳನ್ನು ಹಂಚಿಕೊಳ್ಳಲು ಈ ಸಮಾವೇಶ ಒಂದು ವಿಶಿಷ್ಟ ವೇದಿಕೆಯನ್ನು ಒದಗಿಸುತ್ತದೆ ಎಂದು ಸುನೀಲ್ ದುಗ್ಗಲ್ ಹೇಳಿದರು.

ದೇಶದ ಆರ್ಥಿಕತೆಗೆ ಮಹತ್ವದ ಕೊಡುಗೆ ನೀಡುವಲ್ಲಿ ಮತ್ತು ಅದರ ಅಗತ್ಯವಿರುವ ಉದ್ಯೋಗ ಉತ್ಪಾದನೆಯನ್ನು ಹೆಚ್ಚಿಸುವಲ್ಲಿ ಗಣಿಗಾರಿಕೆ ಕ್ಷೇತ್ರ ಪ್ರಮುಖ ಪಾತ್ರ ವಹಿಸುತ್ತದೆ. ಆದರೂ, ಗಣಿಗಾರಿಕೆ ಕ್ಷೇತ್ರದ ಪುನರುಜ್ಜೀವನ ಮತ್ತು ಬೆಳವಣಿಗೆಯ ಅಪೇಕ್ಷಿತ ಉದ್ದೇಶವನ್ನು ಸಾಧಿಸುವಲ್ಲಿ ಹಲವಾರು ಸವಾಲುಗಳನ್ನು ಎದುರಿಸಲಾಗುತ್ತಿದೆ ಎಂದು ಅವರು ಹೇಳಿದರು.

ದೇಶದ ಜಿಡಿಪಿಗೆ ಖನಿಜ ಕ್ಷೇತ್ರದ ಕೊಡುಗೆ ತೀರಾ ಕಡಿವೆು ಇದೆ. 2017-18ರಲ್ಲಿ ಶೇ.1.53ರಷ್ಟಿತ್ತು. ಆದರೆ, ಖನಿಜ ಸಂಪನ್ಮೂಲ ಸಮೃದ್ಧ ರಾಷ್ಟ್ರಗಳಾದ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯದ ಖನಿಜ ವಲಯದ ಕೊಡುಗೆಗಳು ತಮ್ಮ ದೇಶದ ಜಿಡಿಪಿಗೆ ಶೇ.7 ರಿಂದ 7.5ರಷ್ಟಿದೆ ಎಂದು ಸುನೀಲ್ ದುಗ್ಗಲ್ ತಿಳಿಸಿದರು.

ನಮ್ಮ ದೇಶದಲ್ಲಿ ಪರಿಶೋಧನಾ ಚಟುವಟಿಕೆಗಳು ಮುಖ್ಯವಾಗಿ ಸರಕಾರಿ ವಲಯದ ಸಂಸ್ಥೆಗಳಾದ ಜಿಎಸ್‌ಐ, ಎಂಇಸಿಎಲ್, ಡಿಎಂಜಿಗಳು ಮತ್ತು ಕೆಲವು ನಾಮ ನಿರ್ದೇಶಿತ ಸಾರ್ವಜನಿಕ ವಲಯದ ಕಂಪೆನಿಗಳಿಗೆ ಸೀಮಿತವಾಗಿವೆ ಎಂದು ಅವರು ಹೇಳಿದರು.

ಅಸಮರ್ಪಕ ಪರಿಶೋಧನೆ ಮತ್ತು ನಂತರದ ಖನಿಜ ಸಂಪನ್ಮೂಲಗಳ ಬಳಕೆಯಿಂದಾಗಿ, ದೇಶವು ಖನಿಜಗಳ ಆಮದಿನ ಮೇಲೆ ಹೆಚ್ಚು ಅವಲಂಬಿತವಾಗಿದೆ. ಇದರಿಂದಾಗಿ, ಪ್ರಮುಖ ಖನಿಜಗಳ ದೇಶಿಯ ಉತ್ಪಾದನೆಯ ವೌಲ್ಯಕ್ಕಿಂತ ಏಳುಪಟ್ಟು ಹೆಚ್ಚು ಆಮದು ಮಾಡಿಕೊಳ್ಳುತ್ತಿದೆ ಎಂದು ಅವರು ಹೇಳಿದರು.

ವಾಣಿಜ್ಯ ಕಲ್ಲಿದ್ದಲು ಗಣಿಗಾರಿಕೆಯಲ್ಲಿ ಶೇ.100ರಷ್ಟು ಎಫ್‌ಡಿಐಗೆ ಅನುಮತಿ ನೀಡುವ ಮೂಲಕ ಕಲ್ಲಿದ್ದಲು ಕ್ಷೇತ್ರವನ್ನು ಅನಿಯಂತ್ರಣಗೊಳಿಸಲು ಕಲ್ಲಿದ್ದಲು ಸಚಿವಾಲಯ ಕೈಗೊಂಡ ಉಪಕ್ರಮ ಸ್ವಾಗತಾರ್ಹ. ವಾಣಿಜ್ಯ ಗಣಿಗಾರಿಕೆಗಾಗಿ ಖಾಸಗಿ ವಲಯಕ್ಕೆ ಕಲ್ಲಿದ್ದಲು ಘಟಕಗಳನ್ನು ನೀಡುವ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ನಾವು ಕೇಂದ್ರ ಸರಕಾರವನ್ನು ಒತ್ತಾಯಿಸುತ್ತೇವೆ ಎಂದು ಅವರು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಫಿಮಿ ಉಪಾಧ್ಯಕ್ಷ ಆರ್.ಎಲ್.ಮೊಹಂತಿ, ಮಹಾ ಪ್ರಧಾನ ಕಾರ್ಯದರ್ಶಿ ಆರ್.ಕೆ.ಶರ್ಮಾ, ಪದಾಧಿಕಾರಿಗಳಾದ ಎಚ್.ಇಕ್ಬಾಲ್, ಎಚ್.ನೂರ್ ಅಹ್ಮದ್, ಶಾಂತೇಶ್ ಗುರೆಡ್ಡಿ ಉಪಸ್ಥಿತರಿದ್ದರು.

ಸುಪ್ರೀಂಕೋರ್ಟ್ 204 ಕಲ್ಲಿದ್ದಲು ಘಟಕಗಳನ್ನು ರದ್ದುಪಡಿಸಿತ್ತು. ಈ ಪೈಕಿ 84 ಘಟಕಗಳನ್ನು ಮರು ಹರಾಜು(25 ಖಾಸಗಿ ವಲಯ, 59 ಸಾರ್ವಜನಿಕ ವಲಯ) ಹಾಕಲಾಯಿತು. ಮರು ಹರಾಜು ಆದ ಘಟಕಗಳ ಪೈಕಿ 6 ಘಟಕಗಳನ್ನು ಪುನಃ ರದ್ದುಗೊಳಿಸಲಾಯಿತು. 8 ಘಟಕಗಳು ಅಭಿವೃದ್ಧಿ ಹೊಂದುತ್ತಿವೆ. 13 ಗಣಿಗಳಲ್ಲಿ ಕಲ್ಲಿದ್ದಲು ಉತ್ಪಾದನೆಯಾಗುತ್ತಿದೆ.

-ಸುನೀಲ್ ದುಗ್ಗಲ್, ಫಿಮಿ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X