Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೆಳ್ತಂಗಡಿ : 15ಲಕ್ಷ ರೂ ವೆಚ್ಚದಲ್ಲಿ...

ಬೆಳ್ತಂಗಡಿ : 15ಲಕ್ಷ ರೂ ವೆಚ್ಚದಲ್ಲಿ ಅನಾರು ಸೇತುವೆಗೆ ಸ್ಟೀಲ್ ಬ್ರಿಡ್ಜ್- ಲೋಕೋಪಯೋಗಿ ಇಲಾಖೆ

ವಾರ್ತಾಭಾರತಿವಾರ್ತಾಭಾರತಿ11 Sept 2019 10:06 PM IST
share
ಬೆಳ್ತಂಗಡಿ : 15ಲಕ್ಷ ರೂ ವೆಚ್ಚದಲ್ಲಿ ಅನಾರು ಸೇತುವೆಗೆ ಸ್ಟೀಲ್ ಬ್ರಿಡ್ಜ್- ಲೋಕೋಪಯೋಗಿ ಇಲಾಖೆ

ಬೆಳ್ತಂಗಡಿ : ಕಳೆದ ಒಂದು ತಿಂಗಳ ಹಿಂದೆ ಸುರಿದ ನೆರೆಹಾವಳಿಗೆ ಕೊಚ್ಚಿಹೋದ ಅನಾರು ಸೇತುವೆಗೆ ಸುಮಾರು 15ಲಕ್ಷ ರೂ ವೆಚ್ಚದಲ್ಲಿ ಸ್ಟೀಲ್ ಬ್ರಿಡ್ಜ್ ಅಳವಡಿಸಲು ಲೋಕೋಪಯೋಗಿ ಇಲಾಖೆ ಪರಿಶೀಲನೆ ನಡೆಸಿದ್ದು ನದಿಯಲ್ಲಿ ನೀರಿನ ಪ್ರಮಾಣ ಕಡಿಮೆಯಾದ ಕೂಡಲೇ ಇದರ ನಿರ್ಮಾಣ ಕಾರ್ಯ ನಡೆಸಲಿದ್ದಾರೆ.

ಇದೀಗ ಅನಾರಿಗೆ ಶಾಸಕ ಹರೀಶ್ ಪೂಂಜಾರವರ ಸೂಚನೆಯಂತೆ ಸ್ಟೀಲ್ ಬ್ರಿಡ್ಜ್ ಅಳವಡಿಕೆಗೆ ತಯಾರಿ ನಡೆಸಲಾಗಿದ್ದು ಸುಮಾರು 50 ಮೀಟರ್ ಉದ್ದ ಹಾಗೂ ನಾಲ್ಕು ಅಡಿ ಅಗಲದ ಬ್ರಿಡ್ಜ್ ನಿರ್ಮಾಣವಾಗಲಿದ್ದು ಇದರಲ್ಲಿ ಪಾದಾಚಾರಿಗಳಿಗೆ ಹಾಗೂ ದ್ವೀಚಕ್ರ ವಾಹನಗಳಿಗೆ ಹೋಗಲು ಅನುಕೂಲವಾಗಲಿದೆ.  ಇತೀಚೆಗೆ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ನೀರಿನ ಅಂತರ ಹೆಚ್ಚಾಗಿದ್ದು ಇದರಿಂದ ಕಾಮಗಾರಿ ನಡೆಸಲು ತೊಂದರೆಯಾಗುತ್ತಿದೆ. ನೀರು ಕಡಿಮೆಯಾದ ತಕ್ಷಣ ಸ್ಟೀಲ್ ಬ್ರಿಡ್ಜ್ ಅಳವಡಿಕೆ ಕಾಮಗಾರಿ ನಡೆಯಲಿದೆ.

ಈ ಪ್ರದೇಶದಲ್ಲಿ ಅನಾರು, ನಲ್ಲಿಲು, ಮುಗುಳಿದಡ್ಡ ಹೀಗೆ ಮೂರು ಕಡೆಗಳಲ್ಲಿ ಒಟ್ಟು ಸುಮಾರು ಎಂಬತ್ತಕ್ಕಿಂತಲೂ ಹೆಚ್ಚು ಕುಟುಂಬಗಳು ವಾಸಿಸುತ್ತಿದ್ದು ಇವರಿಗೆಲ್ಲರಿಗೂ ಏಕೈಕ ಆಶ್ರಯವಾಗಿದ್ದುದು ಅನಾರಿನಲ್ಲಿರುವ ಸೇತುವೆಯಾಗಿತ್ತು. ಈ ಸೇತುವೆಯ ಮೂಲಕವಾಗಿ ಇವರು ಸುಲಭವಾಗಿ ಕಕ್ಕಿಂಜೆಗೆ ಬಂದು ಹೋಗುತ್ತಿದ್ದರು, ಕೂಲಿ ಕೆಲಸಕ್ಕೆ ಹೋಗುವವರು ಶಾಲಾ ಕಾಲೇಜಿಗೆ ಹೋಗುವ ಮಕ್ಕಳು ಇದನ್ನೇ ಆಶ್ರಯಿಸಿದ್ದರು. ಇದೀಗ ಸೇತುವೆ ಕೊಚ್ಚಿ ಹೋದ ಬಳಿಕ ಇವರು ಹೊರ ಜಗತ್ತಿನೊಂದಿಗೆ ಸಂಪಕ್ವನ್ನು ಕಳೆದುಕೊಂಡಿದ್ದರು. ನದಿಯಲ್ಲಿ ನೀರು ಇಳಿದಾಗ ಮಾತ್ರ ಇವರು ನದಿಯನ್ನು ದಾಟಿ ಹೊರಗೆ ಬರುತ್ತಿದ್ದರು. ಸೇತುವೆ ನಾಶದಿಂದಾಗಿ ಇಲ್ಲಿನ ಮಕ್ಕಳು ಕಳೆದ ಒಂದು ತಿಂಗಳಿನಿಂದ ಶಾಲೆಗೆ ಹೋಗಲೂ ಕಷ್ಟ ಅನುಭವಿಸಬೇಕಾಗಿ ಬಂದಿತ್ತು. ಇದೀಗ ಉದ್ದೇಶಿತ ಸ್ಟೀಲ್ ಬ್ರಿಡ್ಜ್ ನಿರ್ಮಾಣವಾದರೆ ಜನರ ಸಮಸ್ಯೆಗೆ ಒಂದಿಷ್ಟು ಪರಿಹಾರ ಕಂಡಂತಾಗಬಹುದಾಗಿದೆ.

ಅನಾರು ಸೇತುವೆ ಹಾನಿಗೊಳಗಾದ ಸ್ಥಳದಲ್ಲಿ ಸುಮಾರು 15ಲಕ್ಷ ರೂ ವೆಚ್ಚದಲ್ಲಿ ಸ್ಟೀಲ್ ಬ್ರಿಡ್ಜ್ ಸೇತುವೆ ನಿರ್ಮಾಣವಾಗಲಿದ್ದು ನದಿಯಲ್ಲಿ ನೀರಿನ ಅಂತರ ಹೆಚ್ಚಿರುವುದರಿಂದ ಕಾಮಗಾರಿ ನಡೆಸಲು ಸಾಧ್ಯವಾಗುತ್ತಿಲ್ಲ. ನೀರು ಕಡಿಮೆಯಾದ ತಕ್ಷಣ ಕಾಮಗಾರಿ ಪ್ರಾರಂಭಿಸಲಿದ್ದು ಶೀಘ್ರವೇ ಈ ಭಾಗದ ಜನರ ಸಮಸ್ಯೆ ಪರಿಹಾರವಾಗಲಿದೆ.

ಶಿವಪ್ರಸಾದ್ ಅಜಿಲ
ಸಹಾಯಕ ಕಾರ್ಯಪಾಲಕ ಅಭಿಯಂತರರು, ಪಿಡಬ್ಲೂಡಿ ಬೆಳ್ತಂಗಡಿ.

ಇಲಾಖಾಧಿಕಾರಿಗಳು ಬಂದು ಪರಿಶೀಲನೆ ನಡೆಸಿ ಹೋಗಿದ್ದಾರೆ, ನೀರು ಕಡಿಮೆಯಾದ ಕೂಡಲೆ ಸ್ಟೀಲ್ ಬ್ರಿಡ್ಜ್ ಮಾಡಿಕೊಡುವುದಾಗಿ ಹೇಳಿ ದ್ದಾರೆ, ಇದೀಗ ನದಿಯಲ್ಲಿ ನೀರು ಕಡಿಮೆಯಾಗಿದೆ. ಈಗ ಕಾಮಗಾರಿ ನಡೆಸಬಹುದಾಗಿದ್ದು ಕೂಡಲೇ ಇಲಾಖೆಯವರು ಇದನ್ನು ಮಾಡಿಕೊಡಬೇಕು. ಇದೀಗ ತಾತ್ಕಾಲಿಕವಾಗಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಲು ಶಾಸಕರ ಸಹಕಾರದಿಂದ ಜೀಪೊಂದು ಬರುತ್ತಿದೆ. ಅದು ಕಷ್ಟ ಪಟ್ಟು  ಓಡಾಡುತ್ತಿದೆ.  ಇದು ಹೆಚ್ಚುದಿನ ಸಾಧ್ಯವಿಲ್ಲ ತಾತ್ಕಾಲಿಕ ಸೇತುವೆಯಾದರೂ ಆದರೆ ನಮ್ಮ ಸಮಸ್ಯೆಗೆ ಸಾಕಷ್ಟು ಪರಿಹಾರ ಸಿಗಲಿದೆ. 
- ಕೃಷ್ಣಪ್ಪ ಮಲೆಕುಡಿಯ, ಅನಾರು ನಿವಾಸಿ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X