Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೀತಲಪ್ಪು ಅಂಗನವಾಡಿ ಕೇಂದ್ರದಲ್ಲಿ ದಲಿತ...

ಬೀತಲಪ್ಪು ಅಂಗನವಾಡಿ ಕೇಂದ್ರದಲ್ಲಿ ದಲಿತ ಮಕ್ಕಳ ಮೇಲೆ ತಾರತಮ್ಯ ಧೋರಣೆ ಆರೋಪ: ಸಿಡಿಪಿಒಗೆ ದೂರು

ವಾರ್ತಾಭಾರತಿವಾರ್ತಾಭಾರತಿ11 Sept 2019 10:34 PM IST
share

ಉಪ್ಪಿನಂಗಡಿ: 34ನೇ ನೆಕ್ಕಿಲಾಡಿ ಗ್ರಾ.ಪಂ.ನ ಬೀತಲಪ್ಪು ಅಂಗನವಾಡಿ ಕೇಂದ್ರದಲ್ಲಿ ಪರಿಶಿಷ್ಟ ಜಾತಿಗೆ ಸೇರಿದ ಪುಟಾಣಿಗಳ ಮೇಲೆ ತಾರತಮ್ಯ ನೀತಿ ಅನುಸರಿಸಲಾಗುತ್ತಿದ್ದು, ಈ ಮೂಲಕ ದಲಿತ ಸಮುದಾಯಕ್ಕೆ ಸೇರಿದ ಮಕ್ಕಳ ಹಕ್ಕುಗಳಿಗೆ ಚ್ಯುತಿ ತರಲಾಗುತ್ತಿದೆ ಎಂಬ ಗಂಭೀರ ಆರೋಪವನ್ನು ಅಂಗನವಾಡಿ ಮಕ್ಕಳ ಪೋಷಕರು ಹಾಗೂ ಬೀತಲಪ್ಪು ದಲಿತರ ಕಾಲನಿಯ ನಾಗರಿಕರು ಮಾಡಿದ್ದು, ಈ ಬಗ್ಗೆ ಪುತ್ತೂರು ಮಕ್ಕಳ ಕಲ್ಯಾಣ ಯೋಜನಾಧಿಕಾರಿಗೆ ದೂರು ನೀಡಿದ್ದಾರೆ.

ಅಂಗನವಾಡಿ ಕಾರ್ಯಕರ್ತೆ ಬೇಬಿ ಹಾಗೂ ಸಹಾಯಕಿ ಮೀನಾಕ್ಷಿ ಅವರು ತಾರತಮ್ಯ ಧೋರಣೆ ಅನುಸರಿಸುತ್ತಿದ್ದಾರೆ ಎಂದು ಸಿಡಿಪಿಒ ಅವರಿಗೆ ದೂರು ನೀಡಿರುವ ಅವರು, ಪರಿಶಿಷ್ಟ ಜಾತಿಗೆ ಸೇರಿದ ಮಗುವೊಂದು ಅಂಗನವಾಡಿಯಲ್ಲಿ ಮೂತ್ರ ಮಾಡಿತೆಂದುಕೊಂಡು ಮರುದಿನ ಬೆಡ್‍ಶೀಟನ್ನು ಆ ಮಗುವಿನ ತಾಯಿಯನ್ನು ಕರೆದು ಒಗೆಸಿದ್ದಾರೆ. ಅದಾದ ಬಳಿಕ ಮಧ್ಯಾಹ್ನ ಸಮಯದಲ್ಲಿ ಆ ಮಗುವನ್ನು ಕರೆದುಕೊಂಡು ಬರಲು ತಾಯಿ ಅಂಗನವಾಡಿಗೆ ಬಂದಾಗ ಆ ಮಗುವನ್ನು ಅಮಾನವೀಯವಾಗಿ ಗೋಣಿ ಚೀಲವೊಂದರಲ್ಲಿ ಮಲಗಿಸಲಾಗಿತ್ತು. ಬಾಕಿ ಉಳಿದ ಮಕ್ಕಳನ್ನು ಬೆಡ್ ಶೀಟ್‍ನಲ್ಲಿ ಮಲಗಿಸಿ, ತನ್ನ ಮಗುವನ್ನು ಗೋಣಿ ಚೀಲದಲ್ಲಿ ಮಲಗಿಸಿದ್ಯಾಕೆ ಎಂದು ಮಗುವಿನ ತಾಯಿ ಪ್ರಶ್ನಿಸಿದಾಗ, ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ, ನೀವು ಮಗುವನ್ನು ಕರೆದುಕೊಂಡು ಹೋಗಲು ಮಾಮೂಲಿ ಸಮಯಕ್ಕೆ ಬರುವ ಬದಲು ಬೇಗ ಬಂದಿದ್ಯಾಕೆ ಎಂದು ಮಗುವಿನ ತಾಯಿಯನ್ನೇ ದಬಾಯಿಸಿ ಕಳುಹಿಸಿದ್ದಾರೆ. ಆ ಬಳಿಕ ಆ ಮಗು ಅಂಗನವಾಡಿಗೆ ಹೋಗಲು ಕೂಡಾ ಹಿಂದೇಟು ಹಾಕುತ್ತಿದೆ ಎಂದು ಆರೋಪಿಸಿದ್ದಾರೆ.

ಇದಲ್ಲದೆ, ಇದಕ್ಕೂ ಮೊದಲು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆಯೋರ್ವರು 'ಮಾತೃ ಪೂರ್ಣ' ಯೋಜನೆಯಡಿ ಬೀತಲಪ್ಪು ಅಂಗನವಾಡಿಗೆ ಮಧ್ಯಾಹ್ನ ಊಟಕ್ಕಾಗಿ ತೆರಳುತ್ತಿದ್ದರು. ಅದೊಂದು ದಿನ ಊಟದ ಸಂದರ್ಭ ಅನ್ನ ಬೇಕು ಎಂದು ಅಲ್ಲಿನ ಸಹಾಯಕಿ ಅವರನ್ನು `ಹೆಲ್ಪರ್‍ರೇ' ಎಂದು ಸಂಭೋಧಿಸಿ ಕರೆದಿದ್ದಕ್ಕೆ ಆ ಗರ್ಭೀಣಿ ಮಹಿಳೆಯನ್ನು ಅಲ್ಲಿನ ಸಹಾಯಕಿ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಲ್ಲದೆ, ನನ್ನನ್ನು ಹಾಗೆ ಕರೆಯಬಾರದು. ಟೀಚರ್ ಎಂದು ಅಥವಾ ಹೆಸರಿಡಿದು ಕೂಗಬೇಕು ಎಂದು ಹೇಳಿದ್ದಲ್ಲದೆ ಹೀಯಾಳಿಸಿ ಮಾತನಾಡಿದ್ದಾರೆ. ಇದರಿಂದ ಆ ಗರ್ಭೀಣಿ ಮಹಿಳೆಗೆ  ರಕ್ತದೊತ್ತಡ ಜಾಸ್ತಿಯಾಗಿ, ಮುಂದಕ್ಕೆ ಇದೇ ಸಮಸ್ಯೆಯಿಂದಾಗಿ ಮಗು ಭ್ರೂಣದಲ್ಲೇ ಸತ್ತು ಹೋಗಿ ಅಬಾರ್ಷನ್ ಕೂಡಾ ಆಗಿತ್ತು. ಇದರೊಂದಿಗೆ ಇಲ್ಲಿ ಮಧ್ಯಾಹ್ನದ ಸಮಯದಲ್ಲಿ ಮಕ್ಕಳು ಮಲಗಿರಬೇಕಾದರೆ, ಅವರೊಂದಿಗೆ ಸಹಾಯಕಿಯವರು ಕೂಡಾ ಮಲಗಿ ನಿದ್ದೆ ಮಾಡುತ್ತಾರೆ. ಅಲ್ಲದೇ, ಬೆಳಗ್ಗೆ ಮಕ್ಕಳನ್ನು ಅಂಗನವಾಡಿಯೊಳಗೆ ನುಗ್ಗಿಸಿ ಅಂಗನವಾಡಿಯ ಪ್ರಧಾನ ಬಾಗಿಲು ಹಾಕಿದರೆ ಅದನ್ನು ಸಂಜೆಯೇ ತೆರೆಯುತ್ತಿದ್ದರು. ಇದಕ್ಕೆ ನಾವೆಲ್ಲಾ ವಿರೋಧ ವ್ಯಕ್ತಪಡಿಸಿದ ಬಳಿಕ ಈಗ ದಿನಕ್ಕೆ ಒಂದು ಗಂಟೆಯಷ್ಟು ಹೊತ್ತು ಮಾತ್ರ ಅಂಗನವಾಡಿಯ ಬಾಗಿಲು ತೆಗೆಯಲಾಗುತ್ತದೆ. ಉಳಿದ ಸಮಯದಲ್ಲಿ ಅಂಗನವಾಡಿಯಲ್ಲಿ ಮಕ್ಕಳನ್ನು ಕೂಡಿ ಹಾಕಲಾಗುತ್ತಿದೆ ಎಂದು ದೂರಿನಲ್ಲಿ ವಿವರಿಸಿದ್ದಾರೆ.

ವಿವಿಧ ಜಾತಿ, ಧರ್ಮಕ್ಕೆ ಸೇರಿದ ಪುಟಾಣಿಗಳು ಇಲ್ಲಿ ಕಲಿಯುತ್ತಿದ್ದು, ಆದರೆ ಪರಿಶಿಷ್ಟ ಜಾತಿಗೆ ಸೇರಿದ ಮಕ್ಕಳ ತಾರತಮ್ಯ ನೀತಿ ಅನುಸರಿಸಲಾಗುತ್ತಿದೆ. ಆದ್ದರಿಂದ ಈ ಬಗ್ಗೆ ಸೂಕ್ತ ತನಿಖೆ ನಡೆಸಿ, ನಮಗೆ ನ್ಯಾಯ ಒದಗಿಸಿಕೊಡಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತಿದ್ದೇವೆ ಎಂದು ದೂರಿನಲ್ಲಿ ಆಗ್ರಹಿಸಿದ್ದಾರಲ್ಲದೆ, ಈ ಬಗ್ಗೆ ದ.ಕ. ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿಗೂ ದೂರು ನೀಡುವುದಾಗಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X