Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಆಟಗಾರರ ಪಾಕ್ ಪ್ರವಾಸ ಬಹಿಷ್ಕಾರದ ಹಿಂದೆ...

ಆಟಗಾರರ ಪಾಕ್ ಪ್ರವಾಸ ಬಹಿಷ್ಕಾರದ ಹಿಂದೆ ಭಾರತದ ಕೈವಾಡವಿಲ್ಲ

ಶ್ರೀಲಂಕಾ

ವಾರ್ತಾಭಾರತಿವಾರ್ತಾಭಾರತಿ11 Sept 2019 11:14 PM IST
share
ಆಟಗಾರರ ಪಾಕ್ ಪ್ರವಾಸ ಬಹಿಷ್ಕಾರದ ಹಿಂದೆ ಭಾರತದ ಕೈವಾಡವಿಲ್ಲ

ಹೊಸದಿಲ್ಲಿ, ಸೆ.11: ಮುಂಬರುವ ಪಾಕ್ ವಿರುದ್ಧ ಸರಣಿಯನ್ನು ಬಹಿಷ್ಕರಿಸುವಂತೆ ಶ್ರೀಲಂಕಾ ಆಟಗಾರರಿಗೆ ಭಾರತ ಬಲವಂತಪಡಿಸಿದೆ ಎಂಬ ಪಾಕ್ ಸಚಿವ ಫವಾದ್ ಹುಸೇನ್ ಚೌಧರಿ ಆರೋಪವನ್ನು ಶ್ರೀಲಂಕಾದ ಕ್ರೀಡಾ ಸಚಿವ ಹಾರಿನ್ ಫೆರ್ನಾಂಡೊ ತಿರಸ್ಕರಿಸಿದ್ದಾರೆ. ‘‘2009ರ ಅಹಿತಕರ ಘಟನೆಯನ್ನು ಆಧರಿಸಿ 10 ಆಟಗಾರರು ಪಾಕ್ ಕ್ರಿಕೆಟ್ ಪ್ರವಾಸವನ್ನು ಬಹಿಷ್ಕರಿಸಿದ್ದಾರೆ. ಪಾಕಿಸ್ತಾನದಲ್ಲಿ ಲಂಕಾ ಆಟಗಾರರು ಆಡದೇ ಇರುವ ನಿರ್ಧಾರದ ಹಿಂದೆ ಭಾರತ ಪ್ರಭಾವ ಬೀರಿದೆ ಎಂಬ ವರದಿಯಲ್ಲಿ ಸತ್ಯಾಂಶವಿಲ್ಲ. ಪಾಕ್‌ಗೆ ತೆರಳಲು ಹಿಂದೇಟು ಹಾಕಿರುವ ಆಟಗಾರರ ನಿರ್ಧಾರವನ್ನು ಗೌರವಿಸಿ, ಪಾಕ್‌ಗೆ ತೆರಳುವ ಆಟಗಾರರನ್ನು ಆಯ್ಕೆ ಮಾಡಿದ್ದೇವೆ. ನಮ್ಮದು ಸಂಪೂರ್ಣ ಶಕ್ತಿಶಾಲಿ ತಂಡ. ಪಾಕಿಸ್ತಾನದಲ್ಲಿ ಪಾಕ್‌ನ್ನು ಮಣಿಸುವ ವಿಶ್ವಾಸ ನಮಗಿದೆ’’ ಎಂದು ಫೆರ್ನಾಂಡೊ ಹೇಳಿದ್ದಾರೆ.

 2009ರಲ್ಲಿ ಶ್ರೀಲಂಕಾ ತಂಡದ ಆಟಗಾರರು ತಂಡ ತಂಗಿದ್ದ ಹೊಟೇಲ್‌ನಿಂದ ಸ್ಟೇಡಿಯಂನತ್ತ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ಬಸ್ ಮೇಲೆ ದಾಳಿ ನಡೆಸಿದ್ದ ಉಗ್ರರು 8 ಜನರನ್ನು ಬಲಿ ಪಡೆದಿದ್ದರು. ಹಲವು ಮಂದಿ ಗಾಯಗೊಂಡಿದ್ದರು. ಘಟನೆಯಲ್ಲಿ ಲಂಕಾ ಆಟಗಾರರು ಸಣ್ಣಪುಟ್ಟ ಗಾಯದಿಂದ ಅಪಾಯದಿಂದ ಪಾರಾಗಿದ್ದರು.

ಉಗ್ರರ ದಾಳಿಯ ಬಳಿಕ ಶ್ರೀಲಂಕಾ ಆಟಗಾರರು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿಲ್ಲ. ಇದೀಗ 10 ವರ್ಷಗಳ ಬಳಿಕ ಮೊದಲ ಬಾರಿ ಲಂಕಾ-ಪಾಕ್ ಮಧ್ಯೆ ಸರಣಿ ಆಯೋಜಿಸಲಾಗಿದೆ. ಶ್ರೀಲಂಕಾ ಕ್ರಿಕೆಟ್ ಮಂಡಳಿ ಬಳಿ ಪಾಕ್‌ನಲ್ಲಿ ಭದ್ರತೆಯ ಆತಂಕವನ್ನು ವ್ಯಕ್ತಪಡಿಸಿ ಸೆ.27 ರಂದು ಪಾಕಿಸ್ತಾನದಲ್ಲಿ ಆರಂಭವಾಗಲಿರುವ ಸೀಮಿತ ಓವರ್ ಕ್ರಿಕೆಟ್ ಸರಣಿಯಿಂದ ಹೊರಗುಳಿಯಲು ಶ್ರೀಲಂಕಾದ ಪ್ರಮುಖ ಆಟಗಾರರಾದ ಲಸಿತ್ ಮಾಲಿಂಗ, ಆ್ಯಂಜೆಲೊ ಮ್ಯಾಥ್ಯೂಸ್, ದಿನೇಶ್ ಚಾಂಡಿಮಾಲ್, ಸುರಂಗ ಲಕ್ಮಲ್, ಡಿಮುತ್ ಕರುಣರತ್ನೆ, ತಿಸರ ಪೆರೇರ, ಅಕಿಲ ಧನಂಜಯ, ಧನಂಜಯ ಡಿಸಿಲ್ವಾ, ಕುಸಾಲ್ ಪೆರೇರ ಹಾಗೂ ನಿರೊಶನ್ ಡಿಕ್ವೆಲ್ಲಾ ನಿರ್ಧರಿಸಿದ್ದರು.

ಶ್ರೀಲಂಕಾ ತಂಡ ಪಾಕ್ ಪ್ರವಾಸದ ವೇಳೆ ಸೆ.27, 29 ಹಾಗೂ ಅಕ್ಟೋಬರ್ 3 ರಂದು ಕರಾಚಿಯಲ್ಲಿ 3 ಪಂದ್ಯಗಳ ಏಕದಿನ ಸರಣಿ ಆಡಲಿದೆ. ಅ.5, 7 ಹಾಗೂ 9ರಂದು ಲಾಹೋರ್‌ನಲ್ಲಿ 3 ಪಂದ್ಯಗಳ ಟಿ-20 ಸರಣಿಯನ್ನು ಆಡಲಿದೆ. ಡಿಸೆಂಬರ್‌ನಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಭಾಗವಾಗಿರುವ ಟೆಸ್ಟ್ ಸರಣಿಯಲ್ಲಿ ಭಾಗವಹಿಸಲು ಪಾಕ್‌ಗೆ ಮತ್ತೊಮ್ಮೆ ಪ್ರವಾಸ ಕೈಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X