Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪತ್ರಕರ್ತರು ಉದ್ಯಮಿಗಳಾಗಲು ಅವಕಾಶ-ಸವಾಲು...

ಪತ್ರಕರ್ತರು ಉದ್ಯಮಿಗಳಾಗಲು ಅವಕಾಶ-ಸವಾಲು ಎರಡೂ ಇವೆ: ಸಚಿವ ಸುರೇಶ್‌ ಕುಮಾರ್

ಪತ್ರಕರ್ತರು ಮತ್ತು ಉದ್ಯಮ ರಾಜ್ಯಮಟ್ಟದ ಕಾರ್ಯಾಗಾರ

ವಾರ್ತಾಭಾರತಿವಾರ್ತಾಭಾರತಿ12 Sept 2019 6:24 PM IST
share
ಪತ್ರಕರ್ತರು ಉದ್ಯಮಿಗಳಾಗಲು ಅವಕಾಶ-ಸವಾಲು ಎರಡೂ ಇವೆ: ಸಚಿವ ಸುರೇಶ್‌ ಕುಮಾರ್

ಬೆಂಗಳೂರು, ಸೆ.12: ಪತ್ರಕರ್ತರು ಉದ್ಯಮಿಗಳಾಗಿ ರೂಪಗೊಳ್ಳಲು ಉತ್ತಮ ಅವಕಾಶ ಹಾಗೂ ಸವಾಲುಗಳೆರಡೂ ಇವೆ. ಈ ಬಗ್ಗೆ ಕೂಲಂಕಷವಾಗಿ ಚರ್ಚಿಸುವ ಮೂಲಕ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಗುರುವಾರ ಕರ್ನಾಟಕ ಪತ್ರಕರ್ತರ ಸಹಕಾರ ಸಂಘ ಮತ್ತು ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ ನಗರದ ಎಫ್‌ಕೆಸಿಸಿಐನ ಸರ್‌ಎಂವಿ ಸಭಾಂಗಣದಲ್ಲಿ ಆಯೋಜಿಸಿದ್ದ ಪತ್ರಕರ್ತರು ಮತ್ತು ಉದ್ಯಮ ಕುರಿತ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಬದಲಾದ ಸನ್ನಿವೇಶದಲ್ಲಿ ಪತ್ರಕರ್ತರು ಕಾರ್ಯಒತ್ತಡ, ಕೆಲಸದ ಅನಿಶ್ಚಿತತೆ ಸೇರಿದಂತೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಇವೆಲ್ಲವುಗಳನ್ನು ನಿವಾರಿಸುವ ನಿಟ್ಟಿನಲ್ಲಿ ಗಂಭೀರವಾದ ಚರ್ಚಿಯ ಅಗತ್ಯವಿದೆ. ಹಾಗೂ ಪತ್ರಕರ್ತರು ಸ್ವಾವಲಂಬಿ ಜೀವನಕ್ಕೆ ಸರಕಾರದಿಂದ ಯಾವ ಸಹಾಯಬೇಕೆಂಬುದನ್ನು ನಿಖರವಾಗಿ ತಿಳಿದರೆ, ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯಮಗ್ನರಾಗಬಹುದೆಂದು ಅವರು ತಿಳಿಸಿದರು.

ಇಲ್ಲಿಯವರೆಗೂ ಪತ್ರಕರ್ತರೆಂದರೆ ನಿರ್ಭೀತರಾಗಿ, ನಿಸ್ವಾರ್ಥವಾಗಿ ಸತ್ಯಾಂಶವನ್ನು ಬಯಲಿಗೆಳೆಯವವರು ಎಂದೇ ಭಾವಿಸಲಾಗಿದೆ. ಆದರೆ, ಪತ್ರಕರ್ತರು ಉದ್ಯಮಿಗಳಾಗಲು ಚಿಂತನೆ ನಡೆಸಲು ಪ್ರಾರಂಭಿಸುವ ತಕ್ಷಣದಿಂದಲೇ ಲಾಭ-ನಷ್ಟದ ಲೆಕ್ಕಾಚಾರ ಪ್ರಾರಂಭವಾಗುತ್ತದೆ. ಪ್ರತಿ ಸುದ್ದಿಯನ್ನು ಉತ್ಪನ್ನವಾಗಿಯೇ ನೋಡುವಂತಹ ಮನಸ್ಥಿತಿ ರೂಪಿತಗೊಳ್ಳುತ್ತದೆ. ಈ ಬದಲಾವಣೆಯನ್ನು ಹೇಗೆ ನೋಡಬೇಕೆಂಬುದನ್ನು ವಿಶ್ಲೇಷಿಸಬೇಕಾದ ಅಗತ್ಯವಿದೆ ಎಂಂದು ಅವರು ಹೇಳಿದರು.

ಮಾಜಿ ಎಫ್‌ಕೆಸಿಸಿ ಅಧ್ಯಕ್ಷ ತಲ್ಲಂ ವೆಂಕಟೇಶ್ ಮಾತನಾಡಿ, ಮಾಧ್ಯಮವು ಸೇವಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಈ ಕ್ಷೇತ್ರದಲ್ಲಿ ಶೇ.60ರಷ್ಟು ಉದ್ಯೋಗವಕಾಶಗಳಿವೆ. ಇದನ್ನು ಸದುಪಯೋಗ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಪತ್ರಕರ್ತರು ಕೌಶಲ್ಯಗಳನ್ನು ರೂಢಿಸಿಕೊಳ್ಳಬೇಕೆಂದು ಆಶಿಸಿದರು.

ಉತ್ತಮ ಸಂವಹನ ಹಾಗೂ ಸಮಯ ನಿರ್ವಹಣೆಯನ್ನು ಹಾಗೂ ತಮ್ಮ ಕೆಲಸದಲ್ಲಿ ಪರಿಣತಿಯನ್ನು ಪಡೆಯುವವರು ಉದ್ಯಮಿಗಳಾಗಿ ರೂಪಗೊಳ್ಳಲು ಹೆಚ್ಚಿನ ಅವಕಾಶ ಇರುತ್ತದೆ. ಹೀಗಾಗಿ ಪತ್ರಕರ್ತರು ತಮ್ಮ ಮಾಧ್ಯಮ ಕ್ಷೇತ್ರದಲ್ಲಿ ಬಹುಮುಖಿ ಪ್ರೌಢಿಮೆಯನ್ನು ಬೆಳೆಸಿಕೊಳ್ಳುವ ಮೂಲಕ ಸ್ವಾವಲಂಬಿ ಬದುಕನ್ನು ಕಟ್ಟಿಕೊಳ್ಳಬಹುದೆಂದು ಅವರು ಹೇಳಿದರು.

ಎಫ್‌ಕೆಸಿಸಿ ಅಧ್ಯಕ್ಷ ಜನಾರ್ದನ್ ಮಾತನಾಡಿ, ಪತ್ರಕರ್ತರು ಉದ್ಯಮಿಗಳಾಗಿ ಪರಿವರ್ತನೆಗೊಳ್ಳಲು ಉತ್ತಮ ಅವಕಾಶವಿದೆ. ತಮ್ಮ ಬರವಣಿಗೆ ಹಾಗೂ ಕ್ರಿಯಾಶೀಲ ಚಿಂತನೆಗಳು ಸಿನೆಮಾ, ಪುಟ ವಿನ್ಯಾಸ, ಸಾಕ್ಷಚಿತ್ರ ನಿರ್ಮಾಣ, ಸಂಕಲನ ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ ಎಂದು ಅವರು ಹೇಳಿದರು.

ಕಾರ್ಯಾಗಾರದಲ್ಲಿ ಎಂಎಸ್‌ಎನಿ ಹೆಚ್ಚುವರಿ ನಿರ್ದೇಶಕ ಹೊನ್ನಮಾನೆ, ಕರ್ನಾಟಕ ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಆರ್.ರಾಜು ಮಾತನಾಡಿದರು. ಈ ವೇಳೆ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ಎಂ.ಎಸ್.ರಾಜೇಂದ್ರ ಕುಮಾರ್, ಉಪಾಧ್ಯಕ್ಷ ಲಕ್ಷ್ಮಿನಾರಾಯಣ, ಖಜಾಂಚಿ ಯತಿರಾಜು, ನಿರ್ದೇಶಕ ರಾಘವೇಂದ್ರ ಮತ್ತಿತರರಿದ್ದರು.

ನಷ್ಟಕ್ಕೆ ಜಿಎಸ್‌ಟಿಯೇ ಕಾರಣ

ಇವತ್ತು ರಿಯಲ್‌ಎಸ್ಟೇಟ್ ಉದ್ಯಮ, ವಾಹನ ತಯಾರಿಕಾ ಕಂಪೆನಿಗಳು ಸೇರಿದಂತೆ ವಿವಿಧ ಉದ್ಯಮ ವಲಯಗಳು ನಷ್ಟ ಅನುಭವಿಸಲು ಜಿಎಸ್‌ಟಿ ಹೆಚ್ಚಳವೇ ಕಾರಣವಾಗಿದೆ. ಆರ್ಥಿಕ ಶಿಸ್ತು ಹಾಗೂ ಮೂಲಭೂತ ಸೌಲಭ್ಯಗಳ ಅಭಿವೃದ್ಧಿಗೆ ಜಿಎಸ್‌ಟಿ ಉತ್ತಮವಾಗಿದೆ. ಹೀಗಾಗಿಯೇ ಜಿಎಸ್‌ಟಿ ಪರವಾಗಿ ಸಾವಿರಾರು ವಿಚಾರ ಸಂಕಿರಣಗಳನ್ನು ಆಯೋಜಿಸಿ ಜಾಗೃತಿ ಮೂಡಿಸಿದ್ದೇವೆ. ಆದರೆ, ಜಿಎಸ್‌ಟಿ ವಿಪರೀತವಾಗಿ ಹೆಚ್ಚಳ ಮಾಡಿರುವುದು ಸರಿಯಲ್ಲ. ಕೇಂದ್ರ ಸರಕಾರ ಕೂಡಲೇ ಜಿಎಸ್‌ಟಿ ಪ್ರಮಾಣವನ್ನು ತಗ್ಗಿಸುವಂತಹ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.

-ಜನಾರ್ದನ, ಅಧ್ಯಕ್ಷ, ಎಫ್‌ಕೆಸಿಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X