Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿದವರಿಗೆ...

ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿದವರಿಗೆ 7 ಫುಟ್ಬಾಲ್ ಅಂಗಣಗಳಷ್ಟು ದೊಡ್ಡ ಸ್ಥಳದಲ್ಲಿ ದಿಗ್ಬಂಧನ ಕೇಂದ್ರ

ವಾರ್ತಾಭಾರತಿವಾರ್ತಾಭಾರತಿ12 Sept 2019 8:21 PM IST
share
ಎನ್ ಆರ್ ಸಿ ಪಟ್ಟಿಯಿಂದ ಹೊರಗುಳಿದವರಿಗೆ 7 ಫುಟ್ಬಾಲ್ ಅಂಗಣಗಳಷ್ಟು ದೊಡ್ಡ ಸ್ಥಳದಲ್ಲಿ ದಿಗ್ಬಂಧನ ಕೇಂದ್ರ

ಗುವಾಹಟಿ, ಸೆ.12: ಅಸ್ಸಾಂನ ವಿವಾದಿತ ನ್ಯಾಷನಲ್ ರಿಜಿಸ್ಟರ್ ಆಫ್ ಸಿಟಿಝನ್ಸ್ ಪಟ್ಟಿಯಿಂದ ಕೈಬಿಟ್ಟು ವಿದೇಶೀಯರೆಂದು ಘೋಷಿತರಾದವರಿಗೆ ಭಾರತದ ಪ್ರಥಮ ದಿಗ್ಬಂಧನ ಕೇಂದ್ರ ಗುವಾಹಟಿಗಿಂತ ಸುಮಾರು 150 ಕಿಮೀ ದೂರದಲ್ಲಿ  ತಲೆಯೆತ್ತುತ್ತಿದೆ. ಕಳೆದ ತಿಂಗಳು ಪ್ರಕಟಗೊಂಡ ಅಂತಿಮ ಪಟ್ಟಿಯಿಂದ 19 ಲಕ್ಷ ಮಂದಿಯನ್ನು ಹೊರಗಿಟ್ಟಿರುವುದನ್ನು ಇಲ್ಲಿ ಸ್ಮರಿಸಬಹುದು.

ಗೋಲ್ಪರ ಜಿಲ್ಲೆಯ  ಮಟಿಯಾ ಎಂಬಲ್ಲಿ ನಿರ್ಮಿಸಲಾಗುತ್ತಿರುವ ಈ ಸಾಮೂಹಿಕ ದಿಗ್ಬಂಧನ ಕೇಂದ್ರದಲ್ಲಿ ಸುಮಾರು 3,000 ಜನರನ್ನು ಇರಿಸಬಹುದಾಗಿದ್ದು 2.5 ಹೆಕ್ಟೇರ್  ಪ್ರದೇಶದಲ್ಲಿ ಸುಮಾರು ಏಳು ಫುಟ್ಬಾಲ್ ಅಂಗಣಗಳಷ್ಟು ಸ್ಥಳಾವಕಾಶ ಇಲ್ಲಿದೆ. ಇಲ್ಲಿ ನಾಲ್ಕು ಮಹಡಿಗಳ ಒಟ್ಟು 15 ಕಟ್ಟಡವಿರಲಿದ್ದು, ಡಿಸೆಂಬರ್ ಅಂತ್ಯದೊಳಗಾಗಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳುವ ನಿರೀಕ್ಷೆಯನ್ನು ಸರಕಾರ ಹೊಂದಿದೆ.

ಇಲ್ಲಿ ಒಂದು ಆಸ್ಪತ್ರೆ, ಸಭಾಂಗಣ, ಪ್ರಾಥಮಿಕ ಶಾಲೆ ಹಾಗೂ ಪಾಕ ಶಾಲೆಯಿರಲಿದ್ದು, 180 ಶೌಚಾಲಯ ಮತ್ತು ಸ್ನಾನದ ಕೊಠಡಿಗಳಿರಲಿವೆ. ದಿಗ್ಬಂಧನ ಶಿಬಿರದ ಸುತ್ತಲೂ ಕೆಂಪು ಬಣ್ಣ ಬಳಿಯಲಾಗಿರುವ ಕಂಪೌಂಡ್ ಗೋಡೆ ತಲೆಯೆತ್ತಿದ್ದು, ಈ ಹೊರಾಂಗಣ ಗೋಡೆ 20 ಅಡಿ ಎತ್ತರದಲ್ಲಿದ್ದರೆ ಒಳಗಿನ ಕಂಪೌಂಡ್ ಗೋಡೆ ಆರಡಿ ಎತ್ತರವಿದೆ. ಇಲ್ಲಿ ವೀಕ್ಷಣಾ ಗೋಪುರಗಳೂ ಇರಲಿವೆ.

ಇದು ಕಾರಾಗೃಹದಂತೆ ಕಾರ್ಯಾಚರಿಸದು ಎಂದು ಅಧಿಕಾರಿಗಳು ಹೇಳುತ್ತಾರೆ. ಇಲ್ಲಿ ಹಾಸ್ಟೆಲ್ ರೀತಿಯ ಕೊಠಡಿಗಳಿರಲಿದ್ದು, ಪ್ರತಿ ಕೊಠಡಿಯಲ್ಲಿ ನಾಲ್ಕರಿಂದ ಐದು ಮಂದಿ ವಾಸಿಸಲಿದ್ದು ಎಲ್ಲಾ ಕೊಠಡಿಗಳಿಗೂ ಬಾಗಿಲುಗಳು, ಉತ್ತಮ ಬೆಳಕಿನ ವ್ಯವಸ್ಥೆ ಹಾಗೂ ಕಿಟಿಕಿಗಳಿರಲಿವೆ ಎಂದು ಅವರು ತಿಳಿಸಿದ್ದಾರೆ.

ಮಕ್ಕಳಿರುವ ಮಹಿಳೆಯರು ಹಾಗೂ ಹೊಸ ತಾಯಂದಿರಿಗೆ ಇಲ್ಲಿ ವಿಶೇಷ ವ್ಯವಸ್ಥೆಯಿರಲಿದೆ. ಸ್ಥಳೀಯ ಶಾಲೆಗಳಲ್ಲಿ ಇಲ್ಲಿನ ಮಕ್ಕಳಿಗೆ  ಶಿಕ್ಷಣವೊದಗಿಸಲಾಗುವುದು. ಈ ಕೇಂದ್ರವನ್ನು 46 ಕೋಟಿ  ರೂ. ವೆಚ್ಚದಲ್ಲಿ ನಿರ್ಮಿಸಲಾಗುತ್ತಿದ್ದು, ಅಸ್ಸಾಂ ಪೊಲೀಸ್ ಹೌಸಿಂಗ್ ಕಾರ್ಪೊರೇಶನ್ ಲಿಮಿಟೆಡ್ ನಿರ್ಮಾಣದ ಹೊಣೆ ಹೊತ್ತಿದೆ.

ಪಟ್ಟಿಯಲ್ಲಿ ಹೆಸರಿಲ್ಲದವರಿಗೆ ಮತ್ತೆ ಅಪೀಲು ಸಲ್ಲಿಸಲು 120 ದಿನಗಳ ಕಾಲಾವಕಾಶ ನೀಡಲಾಗಿದ್ದು, ಅವರು ಕೊನೆಗೂ ತಮ್ಮ ಪೌರತ್ವ ಸಾಬೀತು ಪಡಿಸಲು ವಿಫಲವಾಗಿ ವಿದೇಶಿಯರೆಂದು ಘೋಷಿತರಾದಲ್ಲಿ ಮಾತ್ರ ಈ ಕೇಂದ್ರಕ್ಕೆ ಅವರನ್ನು ಮುಂದೆ ಸ್ಥಳಾಂತರಿಸಲಾಗುವುದು ಎಂದು ತಿಳಿದು ಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X