Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. 10 ಬ್ಯಾಂಕ್ ಗಳ ವಿಲೀನ ವಿರುದ್ಧ ಬ್ಯಾಂಕ್...

10 ಬ್ಯಾಂಕ್ ಗಳ ವಿಲೀನ ವಿರುದ್ಧ ಬ್ಯಾಂಕ್ ಅಧಿಕಾರಿಗಳ ಸಂಘದಿಂದ ರಾಷ್ಟ್ರಾದ್ಯಂತ ಬಂದ್ ಬೆದರಿಕೆ

ವಾರ್ತಾಭಾರತಿವಾರ್ತಾಭಾರತಿ12 Sept 2019 8:36 PM IST
share
10 ಬ್ಯಾಂಕ್ ಗಳ ವಿಲೀನ ವಿರುದ್ಧ ಬ್ಯಾಂಕ್ ಅಧಿಕಾರಿಗಳ ಸಂಘದಿಂದ ರಾಷ್ಟ್ರಾದ್ಯಂತ ಬಂದ್ ಬೆದರಿಕೆ

ಹೊಸದಿಲ್ಲಿ,ಸೆ.12: ಹತ್ತು ಸರಕಾರಿ ಸ್ವಾಮ್ಯದ ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ನಾಲ್ಕಕ್ಕೆ ಇಳಿಸುವ ಕೇಂದ್ರ ಸರಕಾರದ ನಿರ್ಧಾರದ ವಿರುದ್ಧ ಸೆಪ್ಟಂಬರ್ 26ರಿಂದ ಎರಡು ದಿನಗಳ ಬಂದ್ ಆಚರಿಸುವುದಾಗಿ ಸಾರ್ವಜನಿಕ ವಲಯದ ಬ್ಯಾಂಕ್‌ಗಳ ಅಧಿಕಾರಿಗಳ ನಾಲ್ಕು ಸಂಘಗಳು ಬೆದರಿಕೆ ಹಾಕಿವೆ.

ಬ್ಯಾಂಕಿಂಗ್ ಕ್ಷೇತ್ರದಲ್ಲಿ ವಿಲೀನಗಳು ಮತ್ತು ಸಂಯೋಜನೆಗಳ ವಿರುದ್ಧ ಪ್ರತಿಭಟಿಸಲು ಬಂದ್ ಆಚರಿಸಲು ಪ್ರಸ್ತಾವಿಸಲಾಗಿದೆ ಎಂದು ಅಧಿಕಾರಿಗಳ ಸಂಘ, ಭಾರತೀಯ ಬ್ಯಾಂಕ್‌ಗಳ ಸಂಘಕ್ಕೆ ನೀಡಿರುವ ನೋಟಿಸ್‌ನಲ್ಲಿ ತಿಳಿಸಿದೆ. ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಕೃತ ಬ್ಯಾಂಕ್‌ ಗಳು ನವೆಂಬರ್ ಎರಡನೇ ವಾರದಿಂದ ಅನಿರ್ದಿಷ್ಟಾವಧಿ ಬಂದ್ ಆಚರಿಸಲಿವೆ ಎಂದು ಸಂಘದ ನಾಯಕರು ತಿಳಿಸಿದ್ದಾರೆ.

ಕೇಂದ್ರ ಸರಕಾರ ಆಗಸ್ಟ್ 30ರಂದು ಸಾರ್ವಜನಿಕ ವಲಯದ ಹತ್ತು ಬ್ಯಾಂಕ್‌ಗಳನ್ನು ವಿಲೀನಗೊಳಿಸಿ ನಾಲ್ಕಕ್ಕೆ ಇಳಿಸುವ ಘೋಷಣೆ ಮಾಡಿತ್ತು. ಬಂದ್ ನೋಟಿಸನ್ನು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ (ಎಐಬಿಒಸಿ), ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ (ಎಐಬಿಒಎ), ಭಾರತೀಯ ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಕಾಂಗ್ರೆಸ್ (ಐಎನ್‌ಬಿಒಸಿ) ಮತ್ತು ರಾಷ್ಟ್ರೀಯ ಬ್ಯಾಂಕ್ ಅಧಿಕಾರಿಗಳ ಸಂಘಟನೆ (ಎನ್‌ಒಬಿಒ) ಜಂಟಿಯಾಗಿ ಜಾರಿ ಮಾಡಿದೆ. ವಾರದಲ್ಲಿ ಐದು ದಿನ ಕೆಲಸ, ನಗದು ವ್ಯವಹಾರ ಅವಧಿಯಲ್ಲಿ ಕಡಿತ ಮತ್ತು ನಿಯಂತ್ರಿತ ಕೆಲಸ ಸಮಯ ಸೇರಿದಂತೆ ಹಲವು ಬೇಡಿಕೆಗಳನ್ನು ಸಂಘಗಳು ಸರಕಾರದ ಮುಂದಿಟ್ಟಿದೆ.

ಕೇಂದ್ರ ಸರಕಾರ ಬ್ಯಾಂಕಿಂಗ್ ವಲಯದಲ್ಲಿ ನಡೆಸುತ್ತಿರುವ ವಿಲೀನ ಮತ್ತು ಸಂಯೋಜನೆಯ ವಿರುದ್ಧ ಹಾಗೂ ಉದ್ಯೋಗಿಗಳ ಇತರ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ದೇಶಾದ್ಯಂತವಿರುವ ರಾಷ್ಟ್ರೀಕೃತ ಬ್ಯಾಂಕ್‌ಗಳು ಸೆಪ್ಟಂಬರ್ 25ರ ಮಧ್ಯರಾತ್ರಿಯಿಂದ ಸೆಪ್ಟಂಬರ್ 27ರ ಮಧ್ಯರಾತ್ರಿವರೆಗೆ ಬಂದ್ ಆಚರಿಸಲಿದೆ ಎಂದು ಎಐಬಿಒಸಿಯ ಪ್ರಧಾನ ಕಾರ್ಯದರ್ಶಿ (ಚಂಡೀಗಡ) ದೀಪಲ್ ಕುಮಾರ್ ಶರ್ಮಾ ತಿಳಿಸಿದ್ದಾರೆ. ಈ ಸಂಯೋಜನೆ ಪ್ರಕ್ರಿಯೆಯ ಪ್ರಕಾರ, ಯುನೈಟೆಡ್ ಬ್ಯಾಂಕ್ ಆಫ್ ಇಂಡಿಯಾ ಮತ್ತು ಓರಿಯೆಂಟಲ್ ಬ್ಯಾಂಕ್ ಆಫ್ ಕಾಮರ್ಸನ್ನು ಪಂಜಾಬ್ ನ್ಯಾಶನಲ್ ಬ್ಯಾಂಕ್ ಜೊತೆ ವಿಲೀನಗೊಳಿಸಲಾಗುವುದು. ಆಮೂಲಕ ಪಿಎನ್‌ಬಿ ದೇಶದ ಸಾರ್ವಜನಿಕ ವಲಯದ ಎರಡನೇ ಬೃಹತ್ ಬ್ಯಾಂಕ್ ಆಗಲಿದೆ.

ಸಿಂಡಿಕೇಟ್ ಬ್ಯಾಂಕನ್ನು ಕೆನರಾ ಬ್ಯಾಂಕ್ ಜೊತೆ ಅಲಹಾಬಾದ್ ಬ್ಯಾಂಕನ್ನು ಇಂಡಿಯನ್ ಬ್ಯಾಂಕ್ ಜೊತೆ ವಿಲೀನಗೊಳಿಸಲಾಗುವುದು. ಆಂಧ್ರ ಬ್ಯಾಂಕ್, ಕಾರ್ಪೊರೇಶನ್ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾವನ್ನು ಪರಸ್ಪರ ಸಂಯೋಜಿಸಲಾಗುವುದು. 2017ರಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಜೊತೆ ಆರು ಬ್ಯಾಂಕ್‌ಗಳನ್ನು ವಿಲೀನಗೊಳಿಸಲಾಗಿತ್ತು. ಇದರಿಂದ ಎಸ್‌ಬಿಐ ಭಾರತದ ಅತೀದೊಡ್ಡ ಬ್ಯಾಂಕ್ ಆಗಿ ಹೊರಹೊಮ್ಮಿದೆ. ನಂತರದ ವರ್ಷದಲ್ಲಿ ವಿಜಯಾ ಬ್ಯಾಂಕ್ ಮತ್ತು ದೇನ ಬ್ಯಾಂಕನ್ನು ಬ್ಯಾಂಕ್ ಆಫ್ ಬರೋಡ ಜೊತೆ ವಿಲೀನಗೊಳಿಸಲಾಗಿತ್ತು. ಸರಕಾರಿ ಸ್ವಮ್ಯದ ಬ್ಯಾಂಕ್‌ಗಳನ್ನು ಜಾಗತಿಕ ಸ್ಪರ್ಧೆಗೆ ಸಮರ್ಥಗೊಳಿಸುವ ಉದ್ದೇಶದಿಂದ ಕೇಂದ್ರ ಸರಕಾರ 2017ರಲ್ಲಿ ವಿಲೀನ ಪ್ರಕ್ರಿಯೆಯ ಮೂಲಕ 19 ರಾಷ್ಟ್ರೀಕೃತ ಬ್ಯಾಂಕ್‌ಗಳನ್ನು 12ಕ್ಕೆ ಇಳಿಸಿತ್ತು. ಇದೀಗ ಆಗಸ್ಟ್ 30ರಂದು ಘೋಷಿಸಿರುವ ವಿಲೀನ ಮತ್ತು ಸಂಯೋಜನೆಯಲ್ಲಿ ಈ ಸಂಖ್ಯೆಯನ್ನು ನಾಲ್ಕಕ್ಕೆ ಇಳಿಸಲು ಸರಕಾರ ಚಿಂತಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X