Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ಮಾರ್ಟ್‍ಸಿಟಿ ಯೋಜನೆ ವಿಳಂಬಕ್ಕೆ...

ಸ್ಮಾರ್ಟ್‍ಸಿಟಿ ಯೋಜನೆ ವಿಳಂಬಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣ: ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ: ನಗರಾಭಿವೃದ್ಧಿ ಯೋಜನೆಗಳ ಪ್ರಗತಿ ಪರೀಶೀಲನಾ ಸಭೆ

ವಾರ್ತಾಭಾರತಿವಾರ್ತಾಭಾರತಿ12 Sept 2019 11:01 PM IST
share
ಸ್ಮಾರ್ಟ್‍ಸಿಟಿ ಯೋಜನೆ ವಿಳಂಬಕ್ಕೆ ಅಧಿಕಾರಿಗಳ ಬೇಜವಾಬ್ದಾರಿ ಕಾರಣ: ಸಂಸದ ಜಿ.ಎಂ.ಸಿದ್ದೇಶ್ವರ

ದಾವಣಗೆರೆ, ಸೆ.12: ಅಧಿಕಾರಿಗಳ ಬೇಜಾವಾಬ್ದಾರಿತನದಿಂದಾಗಿ ಸ್ಮಾರ್ಟ್‍ಸಿಟಿ ಯೋಜನೆ ವಿಳಂಬವಾಗಿದೆ ಎಂದು ಸಂಸದ ಜಿ.ಎಂ.ಸಿದ್ದೇಶ್ವರ ಬೇಸರ ವ್ಯಕ್ತಪಡಿಸಿದರು. 

ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಗರಾಭಿವೃದ್ಧಿ ಯೋಜನೆಗಳ ಕುರಿತು ಪ್ರಗತಿ ಪರೀಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸ್ಮಾರ್ಟ್‍ಸಿಟಿ ಯೋಜನೆಯನ್ನು ಘೋಷಿಸಿ ಐದು ವರ್ಷಗಳು ಕಳೆದಿವೆ. ಮೊದಲ ಹಂತದಲ್ಲಿಯೇ ದಾವಣಗೆರೆ ನಗರ ಯೋಜನೆಗೆ ಒಳಪಟ್ಟಿತ್ತು. ನಂತರ ಸಾಕಷ್ಟು ಅನುದಾನ ಕೂಡ ಬಂದಿದೆ. ಆದರೂ ಯಾವುದೇ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡಿಲ್ಲ. ಅದಕ್ಕಾಗಿಯೇ ಅಧಿಕಾರಿಗಳಿದ್ದಾರೆ. ಎಂಡಿ ಇದ್ದಾರೆ, ಸಮಿತಿ ಇದೆ, ಮೇಲಾಗಿ ಹಣ ಇದೆ, ಸರ್ಕಾರ ಇದೆ. ಇದೆಲ್ಲದರ ನಡುವೆಯೂ ಕೇಂದ್ರದಿಂದ ಬಿಡುಗಡೆಯಾಗಿರುವ 396 ಕೋಟಿ ರೂ. ಗಳಲ್ಲಿ ಕೇವಲ 114 ಕೋಟಿ ರೂ. ವೆಚ್ಚ ಮಾಡಿದ್ದೀರಿ. ಉಳಿದ ಹಣವನ್ನು ಏನು ಮಾಡುತ್ತೀರಿ ? ನಿಮಗೆ ಜವಾಬ್ದಾರಿ ಇದ್ದರೆ ಹೀಗೆ ಮಾಡುತ್ತಿರಲಿಲ್ಲ. ಕೇವಲ ಸಬೂಬು ಹೇಳುತ್ತಲೇ ಕಾಲ ಕಳೆಯುತ್ತಿದ್ದೀರಿ ಎಂದು ತರಾಟೆಗೆ ತಗೆದುಕೊಂಡರು. 

ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶರೀಫ್ ಯೋಜನೆಯಡಿ ಅಭಿವೃದ್ಧಿ ಕುಂಠಿತಗೊಂಡಿರುವ ಕುರಿತು ನೀಡಿದ ಸ್ಪಷ್ಟನೆಗೆ ಅಸಮಾಧಾನ ವ್ಯಕ್ತಪಡಿಸಿದ ಸಂಸದರು, ಕೆಲವು ನಿರ್ಧಾರಗಳನ್ನು ನೀವೆ ಕೈಗೊಳ್ಳುತ್ತೀರಿ. ನಾನು ಮತ್ತು ಸಂಬಂಧಿಸಿದ ಶಾಸಕರ ಗಮನಕ್ಕೆ ತರುವುದೇ ಇಲ್ಲ. ಸಮಸ್ಯೆಗಳ ಬಗ್ಗೆ ನಮ್ಮ ಗಮನಕ್ಕೆ ತಂದರೆ ನಾವು ಕೂಡ ಅವುಗಳ ಪರಿಹಾರಕ್ಕೆ ಮುಂದಾಗುತ್ತೇವೆ ಎಂದು ಹೇಳಿದರು. 

ಶಾಸಕ ಎಸ್.ಎ.ರವೀಂದ್ರನಾಥ್ ಮಾತನಾಡಿ, ನಗರದಲ್ಲಿ ಬೀದಿ ದೀಪಗಳೇ ಇಲ್ಲದಂತಾಗಿದೆ. ಈ ಊರಲ್ಲಿ ಬೆಳಕು ಹಾಕುವವರೇ ಇಲ್ಲವಾಗಿದೆ. ಈ ಬಗ್ಗೆ ಸಾಕಷ್ಟು ಜನರಿಂದ ದೂರುಗಳು ಬಂದಿವೆ. ಲೈಟುಗಳನ್ನು ಹಾಕಿದರೂ ಅವುಗಳು ಗಾಳಿಗೆ ಅಲುಗಾಡಿ ಮತ್ತೆ ಹಾಳಾಗುತ್ತಿವೆ ಎಂದು ದೂರಿದರು. 

ಪಾಲಿಕೆ ಮೇಯರ್ ಮಂಜುನಾಥ್ ಬಳ್ಳಾರಿ ಮಾತನಾಡಿ, ನಗರದಲ್ಲಿ ಬೀದಿ ದೀಪಗಳ ಅಳವಡಿಕೆಗೆ ಟೆಂಡರ್ ಕರೆಯಲಾಗಿದೆ. ಮುಂದಿನ ತಿಂಗಳು ಟೆಂಡರ್ ಅಂತಿಮಗೊಳ್ಳಲಿದ್ದು, ಶೀಘ್ರವೇ ಬೀದಿ ದೀಪ ಅಳವಡಿಸಲಾಗುವುದು ಎಂದರು.   

ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಮಾತನಾಡಿ, ಮಂಡಕ್ಕಿ ಭಟ್ಟಿಗಳ ಸ್ಥಳಾಂತರಕ್ಕೆ ಈಗಾಗಲೇ ಅರಸಾಪುರ ಮತ್ತು ಕರಿಲಕ್ಕೇನಹಳ್ಳಿ ಬಳಿ ಜಮೀನು ಗುರುತಿಸುವ ಕೆಲಸ ನಡೆಯುತ್ತಿದೆ. ಮೊದಲು ಮಂಡಕ್ಕಿ ಭಟ್ಟಿ ಮಾಲಕರು ಸ್ಥಳಾಂತರಕ್ಕೆ ಒಪ್ಪಿಗೆ ನೀಡಿರಲಿಲ್ಲ. ಆದರೆ ಶಾಸಕ ಡಾ.ಶಾಮನೂರು ಶಿವಶಂಕರಪ್ಪ ಅವರು ಮನವೊಲಿಸಿದ ಮೇಲೆ ಕೆಲವರು ಸ್ಥಳಕ್ಕೆ ಹೋಗಿ ನೋಡಿಕೊಂಡು ಬಂದು ಒಪ್ಪಿಗೆ ನೀಡಿದ್ದಾರೆ. ಭಟ್ಟಿಗಳ ಸ್ಥಳಾಂತರ ನಡೆಯುವುದು ಖಚಿತ ಎಂದರು. 

ಇದಕ್ಕೆ ಪ್ರತಿಕ್ರಿಯಿಸಿದ ಸಂಸದ ಜಿ.ಎಂ.ಸಿದ್ದೇಶ್ವರ್ ಮೊದಲು ಮಂಡಕ್ಕಿ ಭಟ್ಟಿಗಳ ಸ್ಥಳಾಂತರವಾಗಬೇಕು. ಅವುಗಳಿಂದ ವಾಯು ಮಾಲಿನ್ಯ ಸಾಕಷ್ಟು ಪ್ರಮಾಣದಲ್ಲಿ ಆಗುತ್ತಿದ್ದು, ಹೊಸದಾಗಿ ಭೂಮಿ ಖರೀದಿಸಿ ಮೊದಲು ಭಟ್ಟಿಗಳ ಸ್ಥಳಾಂತರಕ್ಕೆ ಆದ್ಯತೆ ನೀಡಿ ಎಂದು ತಾಕೀತು ಮಾಡಿದರು.  

ಸಭೆಯಲ್ಲಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಹೆಚ್ಚುವರಿ ಜಿಲ್ಲಾಧಿಕಾರಿ ಪದ್ಮಾಬಸವಂತಪ್ಪ, ದೂಡಾ ಆಯುಕ್ತ ಆದಪ್ಪ ಸೇರಿದಂತೆ ವಿವಿಧ  ಇಲಾಖೆಗಳ ಅಧಿಕಾರಿಗಳ ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X