Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮುಕೇಶ್ ಅಂಬಾನಿ ಹೇಳಿಕೆಗೆ ಫೇಸ್ ಬುಕ್...

ಮುಕೇಶ್ ಅಂಬಾನಿ ಹೇಳಿಕೆಗೆ ಫೇಸ್ ಬುಕ್ ವಿರೋಧ

ವಾರ್ತಾಭಾರತಿವಾರ್ತಾಭಾರತಿ12 Sept 2019 11:22 PM IST
share
ಮುಕೇಶ್ ಅಂಬಾನಿ ಹೇಳಿಕೆಗೆ ಫೇಸ್ ಬುಕ್ ವಿರೋಧ

ಹೊಸದಿಲ್ಲಿ, ಸೆ.12: ದತ್ತಾಂಶ(ಡೇಟಾ)ವು ಹೊಸ ತೈಲದಂತೆ ಅಮೂಲ್ಯವಾಗಿದ್ದು, ಭಾರತೀಯ ಬಳಕೆದಾರರ ದತ್ತಾಂಶ ಮಾಹಿತಿಯನ್ನು ಸಂರಕ್ಷಿಸಬೇಕು ಎಂಬ ಉದ್ಯಮಿ ಮುಕೇಶ್ ಅಂಬಾನಿ ಹೇಳಿಕೆಯನ್ನು ವಿರೋಧಿಸಿರುವ ಫೇಸ್‌ಬುಕ್ ಸಂಸ್ಥೆ, ದತ್ತಾಂಶದ ಮುಕ್ತ ಹರಿವಿಗೆ ಭಾರತ ಅವಕಾಶ ಮಾಡಿಕೊಡಬೇಕು ಎಂದಿದೆ.

ಇಂಟರ್‌ನೆಟ್ ಹಾಗೂ ಸಾಮಾಜಿಕ ಮಾಧ್ಯಮದಲ್ಲಿ ಭಾರತೀಯ ಬಳಕೆದಾರರು ಸಂಗ್ರಹಿಸುವ ದತ್ತಾಂಶ ಮಾಹಿತಿಯನ್ನು ಸಂರಕ್ಷಿಸಬೇಕು. ದೇಶಕ್ಕೆ ಸಂಬಂಧಿಸಿದ ದತ್ತಾಂಶ ಮಾಹಿತಿಯ ಮಾಲಕತ್ವ ಭಾರತದ ಜನರಲ್ಲಿರಬೇಕು ಮತ್ತು ಅವರೇ ನಿಯಂತ್ರಿಸಬೇಕು ಎಂದು ಮುಕೇಶ್ ಅಂಬಾನಿ ಹೇಳಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯಿಸಿರುವ ಫೇಸ್‌ಬುಕ್ ಉಪಾಧ್ಯಕ್ಷ (ಜಾಗತಿಕ ವ್ಯವಹಾರ ಮತ್ತು ಸಂವಹನ) ನಿಕ್ ಕ್ಲೆಗ್, ಭಾರತದಲ್ಲಿ ಹಾಗೂ ವಿಶ್ವದಲ್ಲಿ ಹಲವರು ದತ್ತಾಂಶವು ಹೊಸ ತೈಲದಂತೆ ಎಂದು ಭಾವಿಸುತ್ತಾರೆ. ದೇಶದೊಳಗೆ ತೈಲದ ಅಪಾರ ಸಂಗ್ರಹವಿದ್ದರೆ ಸಮೃದ್ಧಿಗೆ ಪೂರಕ ಎಂಬುದು ಈ ಚಿಂತನೆಯ ಸಾರಾಂಶ. ಆದರೆ ತೈಲವನ್ನು ದತ್ತಾಂಶದೊಂದಿಗೆ ಹೋಲಿಸುವುದು ತಪ್ಪು ಗ್ರಹಿಕೆಯಾಗಿದೆ. ಇದನ್ನು ಬೇಕಿದ್ದರೆ ನೀರಿನೊಂದಿಗೆ ಹೋಲಿಸಬಹುದು. ಜಾಗತಿಕ ಇಂಟರ್‌ನೆಟ್ ಹರಿವು, ಉಬ್ಬರವಿಳಿತವಿರುವ, ಗಡಿಗಳ ಚೌಕಟ್ಟು ಇರದ ಬೃಹತ್ ಸಾಗರವಾಗಿದೆ ಎಂದಿದ್ದಾರೆ.

ದತ್ತಾಂಶ ಮಾಹಿತಿ ಹಂಚಿಕೊಳ್ಳುವುದು ದೇಶದ ಭದ್ರತೆಯ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಗಂಭೀರ ಅಪರಾಧ ಮತ್ತು ಭಯೋತ್ಪಾದಕ ಕೃತ್ಯಗಳನ್ನು ನಿರ್ಮೂಲನಗೊಳಿಸುವ ಉದ್ದೇಶದ ಪ್ರಮುಖ ಜಾಗತಿಕ ದತ್ತಾಂಶ ಮಾಹಿತಿ ಪ್ರಕ್ರಿಯೆಗಳನ್ನು ಭಾರತ ಸ್ವಯಂ ತಡೆಹಿಡಿದಿದೆ. ಭಾರತವು ವೈಯಕ್ತಿಕ ಹಕ್ಕುಗಳನ್ನು ಗೌರವಿಸುವ, ಸ್ಪರ್ಧೆ ಮತ್ತು ನೂತನ ನಾವೀನ್ಯತೆಯನ್ನು ಪ್ರೋತ್ಸಾಹಿಸುವ ಮತ್ತು ಎಲ್ಲರಿಗೂ ಮುಕ್ತವಾಗಿರುವ ಮತ್ತು ಎಲ್ಲರಿಗೂ ಪ್ರವೇಶಿಸಬಹುದಾದ ಹೊಸ ಸಿದ್ಧವಿನ್ಯಾಸದ ಪುಟವನ್ನು ಇಂಟರ್‌ನೆಟ್‌ಗೆ ರೂಪಿಸಬೇಕು. ಪರಿಮಿತ ವಸ್ತುವಿನಂತೆ ದತ್ತಾಂಶವನ್ನು ಸಂಗ್ರಹಿಸಿದರೆ ದತ್ತಾಂಶದ ವೌಲ್ಯ ಅರಿವಿಗೆ ಬರುವುದಿಲ್ಲ. ಅದನ್ನು ಹೊಸ ಶೋಧನೆಗೆ ಮುಕ್ತವಾಗಿಸಿದರೆ ವೌಲ್ಯ ಹೆಚ್ಚುತ್ತದೆ. ಇದರಿಂದ ಭಾರತಕ್ಕೆ ಹೆಚ್ಚಿನ ಸಂಪತ್ತು ಒದಗುವ ಸಾಧ್ಯತೆಯಿದೆ ಎಂದವರು ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X