Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಸಿಂಧು ಸಹಿತ 11 ಕ್ರೀಡಾಪಟುಗಳಿಗೆ ಪದ್ಮ...

ಸಿಂಧು ಸಹಿತ 11 ಕ್ರೀಡಾಪಟುಗಳಿಗೆ ಪದ್ಮ ಪ್ರಶಸ್ತಿ

ಪದ್ಮ ವಿಭೂಷಣಕ್ಕೆ ಶಿಫಾರಸುಗೊಂಡ ಮೊದಲ ಮಹಿಳಾ ಅಥ್ಲೀಟ್ ಮೇರಿ ಕೋಮ್

ವಾರ್ತಾಭಾರತಿವಾರ್ತಾಭಾರತಿ12 Sept 2019 11:32 PM IST
share
ಸಿಂಧು ಸಹಿತ 11 ಕ್ರೀಡಾಪಟುಗಳಿಗೆ ಪದ್ಮ ಪ್ರಶಸ್ತಿ

ಹೊಸದಿಲ್ಲಿ, ಸೆ.12: ಆರು ಬಾರಿಯ ವಿಶ್ವ ಚಾಂಪಿಯನ್ ಎಂ.ಸಿ. ಮೇರಿಕೋಮ್‌ರನ್ನು ಪದ್ಮ ವಿಭೂಷಣ ಹಾಗೂ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧುರನ್ನು ಪದ್ಮ ಭೂಷಣ ಪ್ರಶಸ್ತಿಗೆ ಭಾರತೀಯ ಕ್ರೀಡಾ ಸಚಿವಾಲಯ ಇಂದು ಶಿಫಾರಸು ಮಾಡಿದೆ. ಮೇರಿಕೋಮ್, ಸಿಂಧು ಸಹಿತ ಒಟ್ಟು 11 ಕ್ರೀಡಾಪಟುಗಳು ಪದ್ಮಪ್ರಶಸ್ತಿ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಪದ್ಮ ಪ್ರಶಸ್ತಿ ಪಟ್ಟಿಯಲ್ಲಿ ಏಳು ಮಹಿಳಾ ಕ್ರೀಡಾಪಟುಗಳಿದ್ದು, ಕೊನೆಯ ಕ್ಷಣದಲ್ಲಿ ಆರ್ಚರ್ ತರುಣ್ ದೀಪ್‌ರಾಯ್ ಹಾಗೂ ಹಾಕಿ ಒಲಿಂಪಿಯನ್ ಎಂ.ಪಿ. ಗಣೇಶ್ ಹೆಸರನ್ನು ಪದ್ಮಶ್ರೀ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ. ಮಣಿಪುರದ ಬಾಕ್ಸರ್ ಮೇರಿಕೋಮ್ ‘ಭಾರತ ರತ್ನ’ ಬಳಿಕ ದೇಶದ ಅತ್ಯುನ್ನತ ನಾಗರಿಕ ಗೌರವವಾದ ಪದ್ಮವಿಭೂಷಣಕ್ಕೆ ಕ್ರೀಡಾ ಸಚಿವಾಲಯದಿಂದ ಶಿಫಾರಸುಗೊಂಡಿರುವ ಭಾರತದ ಮೊದಲ ಅಥ್ಲೀಟ್ ಎನಿಸಿಕೊಂಡಿದ್ದಾರೆ. ಮೇರಿ ದಾಖಲೆ ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ ಆಗಿದ್ದಾರೆ.

36ರ ಹರೆಯದ ಮೇರಿಕೋಮ್ ಪದ್ಮ ವಿಭೂಷಣ ಸ್ವೀಕರಿಸಲಿರುವ ಭಾರತದ ನಾಲ್ಕನೇ ಕ್ರೀಡಾಪಟು ಎಂಬ ಕೀರ್ತಿಗೆ ಭಾಜನರಾಗಲು ಸಜ್ಜಾಗಿದ್ದಾರೆ. ಚೆಸ್ ದಿಗ್ಗಜ ವಿಶ್ವನಾಥನ್ ಆನಂದ್(2007),ಕ್ರಿಕೆಟ್ ಲೆಜೆಂಡ್ ಸಚಿನ್ ತೆಂಡುಲ್ಕರ್(2008) ಹಾಗೂ ಪರ್ವತಾರೋಹಿ ಸರ್ ಎಡ್ಮಂಡ್ ಹಿಲರಿ(2008)ಈ ಹಿಂದೆ ಪದ್ಮವಿಭೂಷಣ ಪ್ರಶಸ್ತಿಗೆ ಪಾತ್ರರಾಗಿದ್ದರು. ಮೇರಿಕೋಮ್ 2013ರಲ್ಲಿ ಪದ್ಮಭೂಷಣ ಹಾಗೂ 2006ರಲ್ಲಿ ಪದ್ಮ ಶ್ರೀ ಗೌರವಕ್ಕೆ ಪಾತ್ರರಾಗಿದ್ದರು.

ಆಗಸ್ಟ್‌ನಲ್ಲಿ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್ ಜಯಿಸಿದ ಭಾರತದ ಮೊದಲ ಅಥ್ಲೀಟ್ ಆಗಿರುವ ಸಿಂಧು ದೇಶದ ಮೂರನೇ ಉನ್ನತ ನಾಗರಿಕ ಗೌರವ ಪದ್ಮಭೂಷಣಕ್ಕೆ ಶಿಫಾರಸುಗೊಂಡಿದ್ದಾರೆ. 24ರ ಹರೆಯದ ಹೈದರಾಬಾದ್ ಆಟಗಾರ್ತಿ ಸಿಂಧು 2015ರಲ್ಲಿ ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ್ದರು. 2017ರಲ್ಲಿ ಸಿಂಧು ಹೆಸರನ್ನು ಪದ್ಮಭೂಷಣಕ್ಕೆ ಶಿಫಾರಸು ಮಾಡಲಾಗಿತ್ತು. ಆದರೆ, ಅವರು ಅಂತಿಮ ಪಟ್ಟಿಯಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದರು.

ಇದೇ ವೇಳೆ, ಆರ್ಚರ್ ತರುಣ್‌ದೀಪ್, ಹಾಕಿ ಒಲಿಂಪಿಯನ್ ಎಂ.ಪಿ. ಗಣೇಶ್, ಕುಸ್ತಿಪಟು ವಿನೇಶ್ ಪೋಗಾಟ್, ಟೇಬಲ್ ಟೆನಿಸ್ ಸ್ಟಾರ್ ಮಣಿಕಾ ಬಾತ್ರಾ, ಕ್ರಿಕೆಟ್ ನಾಯಕಿ ಹರ್ಮನ್‌ಪ್ರೀತ್ ಕೌರ್(ಟಿ-20), ಮಹಿಳಾ ಹಾಕಿ ನಾಯಕಿ ರಾಣಿ ರಾಂಪಾಲ್, ಮಾಜಿ ಶೂಟರ್ ಸುಮಾ ಶಿರೂರ್ ಹಾಗೂ ಪರ್ವರೋಹಿಗಳಾದ, ಅವಳಿ ಸಹೋದರಿಯರಾದ ತಾಶಿ ಹಾಗೂ ನಂಗ್ಶಿ ಮಲಿಕ್ ಹೆಸರುಗಳನ್ನು ದೇಶದ ನಾಲ್ಕನೇ ನಾಗರಿಕ ಗೌರವ ಪದ್ಮಶ್ರೀಗೆ ಶಿಫಾರಸು ಮಾಡಿ ಕಳುಹಿಸಿಕೊಡಲಾಗಿದೆ.

ಈ ವರ್ಷ ಹಾಲೆಂಡ್‌ನಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ರಿಕರ್ವ್ ಟೀಮ್ ಪರ ಬೆಳ್ಳಿ ಪದಕ ಜಯಿಸಿದ್ದ ರಾಯ್ ಹಾಗೂ 1972ರ ಮ್ಯೂನಿಚ್ ಒಲಿಂಪಿಕ್ಸ್‌ನಲ್ಲಿ ಕಂಚು ಜಯಿಸಿದ್ದ ಗಣೇಶ್ ಹೆಸರನ್ನು ತಡವಾಗಿ ಪಟ್ಟಿಗೆ ಸೇರಿಸಲಾಗಿದ್ದು, ಈ ಇಬ್ಬರ ಹೆಸರನ್ನು ಕ್ರೀಡಾ ಸಚಿವ ಕಿರಣ್ ರಿಜಿಜು ಇನ್ನಷ್ಟೇ ಮಾನ್ಯ ಮಾಡಬೇಕಾಗಿದೆ. ಶಿಫಾರಸುಗಳ ಪಟ್ಟಿಯನ್ನು ಪದ್ಮ ಪ್ರಶಸ್ತಿ ಸಮಿತಿಗೆ ಕಳುಹಿಸಿಕೊಡಲಾಗಿದೆ. ಮುಂದಿನ ವರ್ಷ ನಡೆಯಲಿರುವ ಗಣರಾಜ್ಯೋತ್ಸವಕ್ಕಿಂತ ಮೊದಲು ಪ್ರಶಸ್ತಿಗೆ ಆಯ್ಕೆಯಾಗಿರುವ ಅಥ್ಲೀಟ್‌ಗಳ ಹೆಸರನ್ನು ಸಮಿತಿ ಘೋಷಿಸಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X