Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದ ಆರ್ಥಿಕ ಪ್ರಗತಿ ನಿರೀಕ್ಷೆಗಿಂತಲೂ...

ಭಾರತದ ಆರ್ಥಿಕ ಪ್ರಗತಿ ನಿರೀಕ್ಷೆಗಿಂತಲೂ ದುರ್ಬಲ: ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ

ವಾರ್ತಾಭಾರತಿವಾರ್ತಾಭಾರತಿ13 Sept 2019 1:51 PM IST
share
ಭಾರತದ ಆರ್ಥಿಕ ಪ್ರಗತಿ ನಿರೀಕ್ಷೆಗಿಂತಲೂ ದುರ್ಬಲ: ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ

ವಿಶ್ವಸಂಸ್ಥೆ, ಸೆ.13: ಕಾರ್ಪೊರೇಟ್ ಮತ್ತು ಪರಿಸರ ನಿಯಂತ್ರಣದ ಅನಿಶ್ಚಿತತೆ ಮುಂತಾದ ಕಾರಣಗಳಿಂದ ಭಾರತದ ಆರ್ಥಿಕ ಅಭಿವೃದ್ಧಿ ನಿರೀಕ್ಷೆಗಿಂತಲೂ ಅತೀ ಕಡಿಮೆ ಪ್ರಮಾಣದಲ್ಲಿದೆ ಎಂದು ಅಂತರಾಷ್ಟ್ರೀಯ ಹಣಕಾಸು ಸಂಸ್ಥೆ(ಐಎಂಎಫ್) ಗುರುವಾರ ಹೇಳಿದೆ.

ಆಗಸ್ಟ್ 30ರಂದು ಬಿಡುಗಡೆಗೊಳಿಸಿರುವ ಅಂಕಿಅಂಶದ ಪ್ರಕಾರ , ಎಪ್ರಿಲ್‌ನಿಂದ ಜೂನ್‌ವರೆಗಿನ ತ್ರೈಮಾಸಿಕ ಅವಧಿಯಲ್ಲಿ ಜಿಡಿಪಿ ಶೇ.5ಕ್ಕೆ ಕುಸಿದಿದ್ದು ಕಳೆದ 6 ವರ್ಷದಲ್ಲೇ ಇದು ಅತ್ಯಂತ ಕನಿಷ್ಟವಾಗಿದೆ. ಕಲ್ಲಿದ್ದಲು, ಕಚ್ಛಾ ತೈಲ, ನೈಸರ್ಗಿಕ ಅನಿಲ, ರಿಫೈನರಿ ಉತ್ಪನ್ನಗಳು, ರಸಗೊಬ್ಬರ, ಸ್ಟೀಲ್, ಸಿಮೆಂಟ್ ಮತ್ತು ವಿದ್ಯುಚ್ಛಕ್ತಿ - ಈ ಎಂಟು ಪ್ರಮುಖ ಕ್ಷೇತ್ರಗಳಲ್ಲಿ ಅಭಿವೃದ್ಧಿ ದರ ಜುಲೈಯಲ್ಲಿ ಶೇ.2.1ಕ್ಕೆ ಕುಸಿದಿದೆ(ಕಳೆದ ವರ್ಷದ ಇದೇ ಅವಧಿಯಲ್ಲಿ ಶೇ.7.3 ಅಭಿವೃದ್ಧಿ ದರ ದಾಖಲಾಗಿತ್ತು) ಎಂದು ವಾಣಿಜ್ಯ ಸಚಿವಾಲಯದ ಹೇಳಿಕೆ ತಿಳಿಸಿದೆ.

ಭಾರತದ ಇತ್ತೀಚಿನ ಜಿಡಿಪಿಯು ಅಭಿವೃದ್ಧಿಯ ಮಂದಗತಿಯನ್ನು ತೋರಿಸುತ್ತದೆ. ಇದು ನಿರೀಕ್ಷೆಗಿಂತ ಅತೀ ಕಡಿಮೆಯಾಗಿದೆ ಎಂದು ಐಎಂಎಫ್ ವಕ್ತಾರ ಗೆರ್ರಿ ರೈಸ್ ಹೇಳಿದ್ದಾರೆ. ಉತ್ಪಾದನೆಯಲ್ಲಿ ಆಗಿರುವ ಕುಸಿತ ಮತ್ತು ಒಟ್ಟು ಬಳಕೆಯಲ್ಲಿ ಆಗಿರುವ ಕುಸಿತದಿಂದ ಭಾರತದ ಜಿಡಿಪಿ ಶೇ.5ಕ್ಕೆ ಕುಸಿದಿದೆ. ಇದಕ್ಕೆ ಕಾರ್ಪೊರೇಟ್ ಮತ್ತು ಪರಿಸರ ನಿಯಂತ್ರಣದ ಅನಿಶ್ಚಿತತೆಯ ಜೊತೆಗೆ ಭಾರತದ ಬ್ಯಾಂಕೇತರ ಹಣಕಾಸು ಸಂಸ್ಥೆಗಳ ನಿಧಾನಗತಿಯ ನಿರ್ವಹಣೆ ಈ ಕುಸಿತಕ್ಕೆ ಕಾರಣವಾಗಿದೆ ಎಂದವರು ವಿಶ್ಲೇಷಿಸಿದ್ದಾರೆ. ಜಿಡಿಪಿ ಅಂಕಿ ಅಂಶವನ್ನು ತಾನು ಪರಿಶೀಲಿಸುತ್ತಿದ್ದೇನೆ. ಮುಂಬರುವ ಜಾಗತಿಕ ಆರ್ಥಿಕ ವರದಿಯಲ್ಲಿ ಈ ವೌಲ್ಯಮಾಪನವನ್ನು ನವೀಕರಿಸಲಾಗುತ್ತದೆ ಎಂದು ಐಎಂಎಫ್ ತಿಳಿಸಿದೆ.

2019-20ರಲ್ಲಿ ಭಾರತದ ಅಭಿವೃದ್ಧಿ ದರ ಶೇ.7.3ರಷ್ಟಾಗಲಿದೆ ಎಂದು ಐಎಂಎಫ್ ಎಪ್ರಿಲ್‌ನಲ್ಲಿ ಮುನ್ಸೂಚನೆ ನೀಡಿತ್ತು. ಬಳಿಕ ಜುಲೈಯಲ್ಲಿ ಇದನ್ನು ಪರಿಷ್ಕರಿಸಿ, ಅಭಿವೃದ್ಧಿ ದರ ಶೇ.7ಕ್ಕೆ ಕುಸಿಯುವ ನಿರೀಕ್ಷೆಯಿದೆ ಎಂದು ತಿಳಿಸಿತ್ತು. ಭಾರತದ ಆರ್ಥಿಕತೆ 2019ರಲ್ಲಿ ಶೇ.7ರ ದರದಲ್ಲಿ ಮತ್ತು 2020ರಲ್ಲಿ ಶೇ.7.2ರ ದರದಲ್ಲಿ ಪ್ರಗತಿ ಹೊಂದಲಿದೆ ಎಂದು ಐಎಂಎಫ್ ತಿಳಿಸಿತ್ತು. ಆದರೆ ದೇಶೀಯ ಬೇಡಿಕೆ ಕುಸಿದಿರುವುದು ಆರ್ಥಿಕ ಅಭಿವೃದ್ಧಿಯ ಮೇಲೆ ಪರಿಣಾಮ ಬೀರಿದೆ. ಆರ್ಥಿಕ ಅಭಿವೃದ್ಧಿ ಕುಸಿಯುತ್ತಿರುವ ಬಗ್ಗೆ ಭಾರತ ಗಮನ ಹರಿಸಬೇಕಾಗಿದೆ ಎಂದು ಐಎಂಎಫ್ ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X