Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ...

ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ ಬಿಬಿಎಂಪಿಯಲ್ಲೇ ಇಲ್ಲ !

ವಾರ್ತಾಭಾರತಿವಾರ್ತಾಭಾರತಿ13 Sept 2019 8:36 PM IST
share
ರಸ್ತೆ ಗುಂಡಿ ಮುಚ್ಚಿರುವ ಮಾಹಿತಿ ಬಿಬಿಎಂಪಿಯಲ್ಲೇ ಇಲ್ಲ !

ಬೆಂಗಳೂರು, ಸೆ.13: ರಾಜಧಾನಿಯ ರಸ್ತೆ ಗುಂಡಿಗಳನ್ನು ಮುಚ್ಚುವಂತೆ ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿದ ಮೇಲೆ ಇಲ್ಲಿಯವರೆಗೂ ಎಷ್ಟು ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಮಾಹಿತಿ ಪಾಲಿಕೆ ಬಳಿಯೇ ಇಲ್ಲವಾಗಿದೆ.

ನಗರದ ಪ್ರಮುಖ ರಸ್ತೆಗಳಲ್ಲಿ ಮತ್ತೆ ಗುಂಡಿಗಳು ಕಾಣಿಸಿದ್ದು, ವಾಹನ ಸವಾರರು ಮತ್ತೆ ತೊಂದರೆ ಎದುರಿಸುವಂತಾಗಿದೆ. ಬಿಬಿಎಂಪಿ ತರಾತುರಿಯಲ್ಲಿ ರಸ್ತೆ ಗುಂಡಿ ಮುಚ್ಚುವ ಭರದಲ್ಲಿ ಗುಣಮಟ್ಟ ಕಾಯ್ದುಕೊಂಡಿಲ್ಲ ಎಂಬ ಆರೋಪವೂ ಕೇಳಿದೆ. ಬಿಬಿಎಂಪಿ ವ್ಯಾಪ್ತಿಯ 401ಕಿ.ಮೀ. ಉದ್ದದ ರಸ್ತೆಯಲ್ಲಿ ಗುಂಡಿಗಳಿವೆ ಎಂದು ಇತ್ತೀಚೆಗೆ ಹೈಕೋರ್ಟ್‌ಗೆ ಬಿಬಿಎಂಪಿ ಮಾಹಿತಿ ನೀಡಿತ್ತು. ಆದರೆ ಬಿಬಿಎಂಪಿ ಈವರೆಗೂ ಎಷ್ಟು ಗುಂಡಿ ಮುಚ್ಚಲಾಗಿದೆ ಎಂಬ ಅಂಕಿ- ಅಂಶಗಳನ್ನು ಬಹಿರಂಗಗೊಳಿಸುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ನಗರದಲ್ಲಿರುವ ಎಲ್ಲ ರಸ್ತೆಗಳಲ್ಲಿರುವ ಗುಂಡಿಗಳನ್ನು ಮುಚ್ಚಲಾಗಿದೆ ಎಂದು ಹೇಳುತ್ತಿರುವ ಬಿಬಿಎಂಪಿ ವಿರುದ್ಧ ಕಳಪೆ ಕಾಮಗಾರಿಯ ಆರೋಪಗಳು ಕೇಳಿಬರುತ್ತಿವೆ. ಈ ಸಂಬಂಧ ರಸ್ತೆ ಗುಂಡಿಗಳು ಹೆಚ್ಚಿವೆ ಎಂಬ ದೂರುಗಳು ಬಂದಿವೆ. ಅಲ್ಲದೆ ಬಿಬಿಎಂಪಿ ರಸ್ತೆ ಗುಂಡಿಗಳನ್ನು ಮುಚ್ಚಿದ ಬಳಿಕ, ಕಾಮಗಾರಿ ಗುಣಮಟ್ಟದ್ದಾಗಿದೆಯೇ ಎಂದು ಪರಿಶೀಲನೆ ಕೂಡ ನಡೆಸುತ್ತಿಲ್ಲ. ಹೀಗಾಗಿ ರಸ್ತೆಗುಂಡಿಗಳು ಮತ್ತೆ ಯಥಾಸ್ಥಿತಿಗೆ ತಲುಪಿವೆ. ಇದರಿಂದಾಗಿ ಸಾರ್ವಜನಿಕರು ಧೂಳು, ಗುಂಡಿಗಳಿಂದಾಗಿ ಸಾರ್ವಜನಿಕರು ಕಿರಿಕಿರಿ ಅನುಭವಿಸುವಂತಾಗಿದೆ.

ಬಿಬಿಎಂಪಿಯ ವ್ಯಾಪ್ತಿಯಲ್ಲಿ 470 ಪ್ರಮುಖ ರಸ್ತೆಗಳಿದ್ದು, 1,344.84 ಕಿ.ಮೀ ಉದ್ದವಿದೆ. ಇದರಲ್ಲಿ 401 ಕಿ.ಮೀ ಉದ್ದದ 108 ರಸ್ತೆಗಳು ರಸ್ತೆಗುಂಡಿಗಳಿಂದ ಕೂಡಿವೆ. 106.68 ಕಿ.ಮೀ ರಸ್ತೆಯಲ್ಲಿ ಬೆಸ್ಕಾಂ, ಗೇಲ್, ಜಲಮಂಡಳಿ ಹಾಗೂ ಕೆಪಿಟಿಸಿಎಲ್ ಸಂಸ್ಥೆಗಳು ವಿವಿಧ ಅಭಿವೃದ್ಧಿ ಕಾರಣಕ್ಕಾಗಿ ರಸ್ತೆಗಳನ್ನು ಅಗೆದಿವೆ. ಇನ್ನು 943.74 ಕಿ.ಮೀ ರಸ್ತೆಗಳು ಗುಂಡಿ ಮುಕ್ತವಾಗಿವೆ ಎಂದು ಪಾಲಿಕೆ ಹೈಕೋರ್ಟ್‌ಗೆ ಮಾಹಿತಿ ನೀಡಿದೆ.

ಬಿಬಿಎಂಪಿಯ ಅಧಿಕೃತ ವೆಬ್‌ಸೈಟ್ ಪ್ರಕಾರ ಮಹದೇವಪುರ ಹಾಗೂ ಯಲಹಂಕ ವಲಯದಲ್ಲಿ ಒಂದೇ ಒಂದು ರಸ್ತೆಗುಂಡಿ ಇಲ್ಲ ಎಂದು ಪ್ರಕಟಿಸಲಾಗಿದೆ. ಆದರೆ, ವೆಬ್‌ಸೈಟ್‌ನಲ್ಲಿರುವುದು ಕಳೆದ ವರ್ಷದ ರಸ್ತೆಗುಂಡಿಗಳ ವಿವರ. ದಕ್ಷಿಣ ವಲಯದಲ್ಲಿ ನವೆಂಬರ್ 2, ದಾಸರಹಳ್ಳಿ ಹಾಗೂ ಆರ್‌ಆರ್ ನಗರದಲ್ಲಿ ಅಕ್ಟೋಬರ್ 26, ಬೊಮ್ಮನಹಳ್ಳಿಯಲ್ಲಿ ನವೆಂಬರ್ 2ರವರೆಗಿನ ರಸ್ತೆಗುಂಡಿಗಳ ವಿವರ ಮಾತ್ರ ಇದೆ. ಅದೇ ರೀತಿ ಯಲಹಂಕ ಮತ್ತು ಮಹದೇವಪುರದಲ್ಲಿ ರಸ್ತೆಗುಂಡಿಗಳೇ ಇಲ್ಲ ಎಂದು ಕ್ಲೀನ್‌ಚಿಟ್ ನೀಡಿದೆ. ಬಿಬಿಎಂಪಿಯ ಫಿಕ್ಸ್ ಮೈ ಸ್ಟ್ರೀಟ್ ಆ್ಯಪ್ ಕೇವಲ ದೂರು ದಾಖಲಿಸಿಕೊಳ್ಳುವುದಕ್ಕಷ್ಟೇ ಸೀಮಿತವಾಗಿದೆ. ದೂರು ದಾಖಲಿಸಿದರೂ ಬಿಬಿಎಂಪಿ ರಸ್ತೆಗುಂಡಿಗಳನ್ನು ಮುಚ್ಚುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ.

ಬಿಬಿಎಂಪಿ ವೆಬ್‌ಸೈಟ್ ಮಾಹಿತಿ ಹಳೆಯದು

ರಸ್ತೆ ಗುಂಡಿಗಳನ್ನು ಮುಚ್ಚಿರುವುದರ ಕುರಿತು ಅಧಿಕಾರಿಗಳನ್ನು ವಿಚಾರಿಸಿದರೆ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಮಾಹಿತಿಯಿದೆ ಎಂದು ಹೇಳಿ ಕೈತೊಳೆದುಕೊಳ್ಳುತ್ತಾರೆ. ಆದರೆ ವೆಬ್‌ಸೈಟ್‌ನಲ್ಲಿ ಹಳೆಯ ಅಂಕಿ ಅಂಶ ಹಾಕಿದ್ದು, ಇದೇ ವರ್ಷದ ಮಾಹಿತಿ ಎಂದು ಬಿಂಬಿಸಿದೆ. ಜತೆಗೆ ಕೆಲವು ವಲಯಗಳ ರಸ್ತೆಗಳಲ್ಲಿ ಗುಂಡಿಗಳೇ ಇಲ್ಲ ಎಂದು ಮಾಹಿತಿಯಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X