Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ:...

ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ: ಬೆಳೆಗಾರರಿಗೆ ಸಂಕಷ್ಟ

ವಾರ್ತಾಭಾರತಿವಾರ್ತಾಭಾರತಿ13 Sept 2019 11:48 PM IST
share
ದಕ್ಷಿಣ ಕೊಡಗಿನಲ್ಲಿ ಕಾಡಾನೆ ಹಾವಳಿ: ಬೆಳೆಗಾರರಿಗೆ ಸಂಕಷ್ಟ

ಮಡಿಕೇರಿ, ಸೆ.13 : ಮಹಾಮಳೆಯ ಪ್ರವಾಹದಿಂದ ಕಂಗೆಟ್ಟಿದ್ದ ದಕ್ಷಿಣ ಕೊಡಗಿನ ರೈತರಿಗೆ ಹಾಗೂ ಬೆಳೆಗಾರರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಕಳೆದ ಮೂರು ದಿನಗಳಿಂದ ಕಾಡಾನೆಗಳ ಹಿಂಡು ವಿರಾಜಪೇಟೆ ತಾಲೂಕಿನ ವಿವಿಧೆಡೆ ಲಗ್ಗೆ ಇಟ್ಟಿದ್ದು, ಕೃಷಿ ಮತ್ತು ತೋಟಗಾರಿಕಾ ಕ್ಷೇತ್ರಕ್ಕೆ ಅಪಾರ ನಷ್ಟ ಉಂಟಾಗಿದೆ.  

ಶ್ರೀಮಂಗಲ ಗ್ರಾ.ಪಂ. ವ್ಯಾಪ್ತಿಯ ಕುರ್ಚಿ ಗ್ರಾಮದ ಎ.ಬಿ. ನಾಚಪ್ಪ ಮತ್ತು ಎ.ಟಿ. ಬೊಳ್ಳಮ್ಮ ಅವರ ತೋಟದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಹಿಂಡು ಫಸಲು ಇರುವ ಕಾಫಿ ಗಿಡಗಳನ್ನು ಬುಡ ಸಹಿತ ತುಳಿದು ಹಾಕಿದೆ, ಅಡಿಕೆ, ಕಾಳು ಮೆಣಸು ಫಸಲನ್ನು ಕೂಡ ನಾಶ ಮಾಡಿವೆ.

ಅತಿವೃಷ್ಟಿಯಿಂದ ಭಾರೀ ನಷ್ಟ ಉಂಟಾಗಿರುವ ಬೆನ್ನಲ್ಲೇ ಅಳಿದುಳಿದ ಬೆಳೆಯನ್ನು ಕಾಡಾನೆಗಳು ನುಗ್ಗಿ ನಾಶಪಡಿಸುತ್ತಿದ್ದು, ಇದರಿಂದ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಬೆಳೆಗಾರ ಎ.ಬಿ.ನಾಚಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳು ಭೇಟಿ ನೀಡಿ ಸೂಕ್ತ ಬೆಳೆ ನಷ್ಟ ಪರಿಹಾರ ನೀಡಬೇಕೆಂದು ಒತ್ತಾಯಿಸಿದರು.

ಮತ್ತೊಂದೆಡೆ ವೀರಾಜಪೇಟೆ ತಾಲೂಕಿನ ಪಾಲಿಬೆಟ್ಟ, ಅಮ್ಮತ್ತಿ, ಸಿದಾಪುರ ಭಾಗದಲ್ಲೂ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಅಪಾರ ಪ್ರಮಾಣದ ಕೃಷಿ ಫಸಲು ನಾಶದೊಂದಿಗೆ ಕಾರ್ಮಿಕರು, ರೈತರು ಕಂಗಾಲಾಗಿದ್ದಾರೆ.

ಕೃಷಿಯನ್ನೇ ನಂಬಿ ಬದುಕುತ್ತಿರುವ ಸಣ್ಣ ರೈತರು  ಬೆಳೆದ ಭತ್ತ, ಕಾಫಿ, ತೆಂಗು, ಬಾಳೆ, ಅಡಕೆ ಸೇರಿದಂತೆ ಇತರ ಕೃಷಿ ಫಸಲುಗಳನ್ನು ಕಾಡಾನೆಗಳು ತುಳಿದು, ತಿಂದು ನಾಶ ಮಾಡುವ ಮೂಲಕ ಭಾರೀ ಪ್ರಮಾಣದಲ್ಲಿ ನಷ್ಟ ಉಂಟು ಮಾಡಿವೆ. ರಾತ್ರಿ ಮಾತ್ರವಲ್ಲದೆ, ಹಾಡಹಗಲಿನಲ್ಲೂ ಕಾಣಿಸಿಕೊಳ್ಳುತ್ತಿರುವ ಕಾಡಾನೆಗಳ ಹಿಂಡಿನ ಭಯದಿಂದ ಕಾರ್ಮಿಕರು, ಬೆಳೆಗಾರರು, ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ರಸ್ತೆಯಲ್ಲಿ ನಡೆದಾಡಲೂ ಸಾಧ್ಯವಾಗದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಬ್ಯಾಂಕ್ ಹಾಗೂ ಕೈ ಸಾಲ ಮಾಡಿ ಬೆಳೆಸಿದ ಕೃಷಿಯನ್ನು ಕಾಡಾನೆಗಳು ತುಳಿದು ತಿಂದು ನಾಶ ಮಾಡುವ ಮೂಲಕ ಬೆಳೆಗಾರರನ್ನು ಸಂಕಷ್ಟಕ್ಕೀಡು ಮಾಡಿವೆ.

ಇದರಿಂದ ರೈತರು ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗದೆ  ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ತಿಳಿಸಿರುವ ಕೃಷಿಕರು ಸರಕಾರ ಹಾಗೂ ಅರಣ್ಯ ಇಲಾಖೆ ರೈತರಿಗೆ ಹೆಚ್ಚಿನ ಮೊತ್ತದಲ್ಲಿ ಪರಿಹಾರ ನೀಡುವ ಮೂಲಕ ಕಾಡಾನೆ ಹಾವಳಿಯನ್ನು ಶಾಶ್ವತವಾಗಿ ತಡೆಗಟ್ಟಬೇಕು. ಇಲ್ಲವಾದಲ್ಲಿ ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಜಿಲ್ಲಾ ಪಂಚಾಯತ್ ಸದಸ್ಯ ಮುಕೊಂಡ ವಿಜು ಸುಬ್ರಮಣಿ ಅವರು ಕಾಡಾನೆ ದಾಳಿಯಿಂದ ಕೃಷಿ ಫಸಲು ನಾಶಪಡಿಸಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅರಣ್ಯ ಇಲಾಖೆಯಿಂದ ರೈತರ ಕೃಷಿ ಫಸಲು ನಾಶಕ್ಕೆ ಹೆಚ್ಚು ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.

ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ವಿಜು ಸುಬ್ರಮಣಿ ಅವರು, ಜಿಲ್ಲಾ ಪಂಚಾಯತ್ ಕ್ಷೇತ್ರದ ಹೊಸೂರು, ಬೆಟ್ಟಗೇರಿ, ಕಳತ್ಮಾಡು, ಬಿಳುಗುಂದ, ಅಮ್ಮತ್ತಿ, ಹೊಸ್ಕೇರಿ ,ಮೇಕೂರು, ಪಾಲಿಬೆಟ್ಟ ಭಾಗದಲ್ಲಿ ಕಾಡಾನೆ ಹಾವಳಿ ಮಿತಿ ಮೀರಿದ್ದು ಹಲವು ವರ್ಷಗಳಿಂದ ಬೆಳೆಗಾರರು, ಕಾರ್ಮಿಕರು, ಸಾರ್ವಜನಿಕರು ಸಂಕಷ್ಟಕ್ಕೊಳಗಾಗಿದ್ದಾರೆ. ಛತ್ತೀಸ್‍ಗಢ ರಾಜ್ಯದಲ್ಲಿ ಕಾಡಾನೆ ಹಾವಳಿ ನಿಯಂತ್ರಣಕ್ಕೆ ಶಾಶ್ವತ ಕ್ರಮಕೈಗೊಂಡಿರುವ ಮಾದರಿಯಲ್ಲೇ ಜಿಲ್ಲೆಯಲ್ಲೂ ಅನುಸರಿಸಬೇಕಾಗಿರುವದರಿಂದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳು ಶಾಶ್ವತ ಯೋಜನೆಯ ಬಗ್ಗೆ ಮನವಿ ಸಲ್ಲಿಸಬೇಕಾಗಿದೆ ಎಂದರು.

ತಾಲೂಕು ಪಂಚಾಯತ್ ಸದಸ್ಯ ಅಜಿತ್ ಕರುಂಬಯ್ಯ ಮಾತನಾಡಿ, ಕಾಡಾನೆ ಹಾವಳಿ ನಿಯಂತ್ರಿಸಲು ಅರಣ್ಯ ಇಲಾಖೆ ವಿಫಲವಾಗಿದೆ. ಕಾಡಾನೆಗಳನ್ನು ಕಾಡಿಗಟ್ಟುವಲ್ಲಿ ನಿರ್ಲಕ್ಷ್ಯ ತೋರುತ್ತಿರುವ ಹಿನ್ನೆಲೆಯಲ್ಲಿ ರೈತರು ಬೆಳೆದ ಕೃಷಿ ಫಸಲು ನಾಶವಾಗುತ್ತಿದೆ. ಕೂಡಲೇ ಕಾಡಾನೆಗಳನ್ನು ಕಾಡಿಗಟ್ಟಲು ಕ್ರಮವಹಿಸದಿದ್ದಲ್ಲಿ ಬೆಳೆಗಾರರೊಂದಿಗೆ ಸೇರಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. 

ಹೊಸೂರು ಗ್ರಾಮ ಪಂಚಾಯತ್ ಅಧ್ಯಕ್ಷ ಗೋಪಿಚಿಣ್ಣಪ್ಪ, ಸ್ಥಳೀಯರಾದ ನವೀನ್, ಈಶ್ವರ ಕೂಡ ಕಾಡಾನೆ ಹಾವಳಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X