Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗಣಪತಿ ವಿಸರ್ಜನೆ ವೇಳೆ ದುರಂತ: 40 ಮಂದಿ...

ಗಣಪತಿ ವಿಸರ್ಜನೆ ವೇಳೆ ದುರಂತ: 40 ಮಂದಿ ಜಲಸಮಾಧಿ

ವಾರ್ತಾಭಾರತಿವಾರ್ತಾಭಾರತಿ14 Sept 2019 9:12 AM IST
share
ಗಣಪತಿ ವಿಸರ್ಜನೆ ವೇಳೆ ದುರಂತ: 40 ಮಂದಿ ಜಲಸಮಾಧಿ

ಮುಂಬೈ: ಮಹಾರಾಷ್ಟ್ರ, ಮಧ್ಯಪ್ರದೇಶ, ದೆಹಲಿ ಹಾಗೂ ಉತ್ತರ ಪ್ರದೇಶದಲ್ಲಿ ಕಳೆದ 24 ಗಂಟೆಗಳಲ್ಲಿ ಗಣಪತಿ ವಿಸರ್ಜನೆ ವೇಳೆ 40 ಮಂದಿ ಜಲಸಮಾಧಿಯಾಗಿದ್ದಾರೆ.

ಅತಿದೊಡ್ಡ ದುರಂತ ಭೋಪಾಲ್‌ನಲ್ಲಿ ಸಂಭವಿಸಿದ್ದು, ಬೃಹತ್ ಗಣೇಶ ವಿಗ್ರಹವನ್ನು ಒಯ್ಯಲು ಕಟ್ಟಿದ್ದ ಎರಡು ದೋಣಿಗಳು ಶುಕ್ರವಾರ ಲೋವರ್‌ಲೇಕ್‌ನಲ್ಲಿ ಅವಘಡಕ್ಕೀಡಾದಾಗ 11 ಮಂದಿ ಜೀವ ಕಳೆದುಕೊಂಡರು. ಭೋಪಾಲ್‌ನಲ್ಲಿ ಕಳೆದ 10 ವರ್ಷಗಳಲ್ಲಿ ಗಣೇಶೋತ್ಸವ ವೇಳೆ ನಡೆದ ಅತಿದೊಡ್ಡ ದುರಂತ ಇದಾಗಿದೆ.

ಮಹಾರಾಷ್ಟ್ರದ 11 ಜಿಲ್ಲೆಗಳಲ್ಲಿ ಒಟ್ಟು 23 ಮಂದಿ ಮುಳುಗಿ ಸತ್ತಿದ್ದಾರೆ. ದೆಹಲಿಯಲ್ಲಿ ನಾಲ್ವರು ಹಾಗೂ ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿ ಇಬ್ಬರು ಜಲಸಮಾಧಿಯಾಗಿದ್ದಾರೆ.

ಭೋಪಾಲ್ ದುರಂತದಲ್ಲಿ ಮಡಿದ ಎಲ್ಲರೂ 100 ಕ್ವಾಟ್ರಸ್ ಪ್ರದೇಶದವರಾಗಿದ್ದು, ಹಿಂದಿನ ದಿನ ರಾತ್ರಿ ವಿಸರ್ಜನಾ ಮೆರವಣಿಯಲ್ಲಿ ಸಂಭ್ರಮಿಸಿದ್ದ ನಗರದಲ್ಲಿ ಮರುದಿನ ಶವಯಾತ್ರೆ ನಡೆಸಬೇಕಾದ ಪರಿಸ್ಥಿತಿ ಉಂಟಾಯಿತು. ಮೃತಪಟ್ಟವರಲ್ಲಿ 12 ವರ್ಷದ ಪರ್ವೇಝ್ ಸೇರಿದ್ದು, ಬಾಲಕನ ಶವ ಸಂಸ್ಕಾರವನ್ನು ಶುಕ್ರವಾರ ನೆರವೇರಿಸಿದರು.

ಭೋಪಾಲ್ ದುರಂತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿ ಶೋಕ ವ್ಯಕ್ತಪಡಿಸಿದ್ದು, ಘಟನೆ ಸಂಬಂಧ ಎಎಸ್‌ಐ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಮೃತರ ಕುಟುಂಬಗಳಿಗೆ ತಲಾ 11 ಲಕ್ಷ ರೂ. ಪರಿಹಾರ ಘೋಷಿಸಿರುವ ಮುಖ್ಯಮಂತ್ರಿ ಕಮಲ್‌ನಾಥ್, ಘಟನೆ ಬಗ್ಗೆ ನ್ಯಾಯಾಂಗ ತನಿಖೆಗೆ ಆದೇಶಿಸಿದ್ದಾರೆ.

ಹೆಚ್ಚು ಕುಣಿದು ಕುಪ್ಪಳಿಸದಂತೆ ಹಾಗೂ ಸುಮ್ಮನೆ ಕೂರುವಂತೆ ಗಣಪತಿ ವಿಸರ್ಜನೆಗೆ ತೆರಳಿದ್ದ ಗುಂಪಿಗೆ ಮನವಿ ಮಾಡಿಕೊಳ್ಳುತ್ತಿರುವುದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ವೀಡಿಯೊದಲ್ಲಿ ಕೇಳಿ ಬರುತ್ತಿದೆ. ದೋಣಿಗಳು ಸರೋವರದ ದಂಡೆಯಿಂದ ಕೇವಲ 50 ಅಡಿ ಕ್ರಮಿಸಿದ್ದಾಗ ಈ ದುರಂತ ಸಂಭವಿಸಿದೆ.

ಮಹಾರಾಷ್ಟ್ರದ ಪುಣೆ, ನಾಗ್ಪುರ, ಮುಂಬೈ, ಅಮರಾವತಿ, ನಾಸಿಕ್, ಥಾಣೆ, ಸಿಂಧುದುರ್ಗ, ರತ್ನಗಿರಿ, ಧೂಲೆ, ಭಂದಾರಾ, ನಾಂದೇಡ್, ಅಹ್ಮದ್‌ನಗರ, ಅಕೋಲಾ ಹಾಗೂ ಸತಾರಾ ಜಿಲ್ಲೆಗಳಲ್ಲಿ ಒಟ್ಟು 23 ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X