Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮುಸ್ಲಿಮರ ಮತ ಪಡೆಯುವ ಶಾಸಕರು ಹಿಜಡಾಗಳು:...

ಮುಸ್ಲಿಮರ ಮತ ಪಡೆಯುವ ಶಾಸಕರು ಹಿಜಡಾಗಳು: ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

"ರಾಷ್ಟ್ರದ್ರೋಹಿಗಳು ಮಾತ್ರ ಬಿಜೆಪಿಗೆ ಮತ ನೀಡುವುದಿಲ್ಲ"

ವಾರ್ತಾಭಾರತಿವಾರ್ತಾಭಾರತಿ15 Sept 2019 1:35 PM IST
share
ಮುಸ್ಲಿಮರ ಮತ ಪಡೆಯುವ ಶಾಸಕರು ಹಿಜಡಾಗಳು: ಸಚಿವ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

ಬೆಂಗಳೂರು, ಸೆ.15: ಮುಸ್ಲಿಮರ ಮತಗಳನ್ನು ಪಡೆದು ಗೆಲುವು ಸಾಧಿಸುವ ಶಾಸಕರಲ್ಲಿ ‘ಹಿಜಡಾ’ತನ ಅಡಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ವಿವಾದಿತ ಹೇಳಿಕೆ ನೀಡಿದ್ದಾರೆ.

ರವಿವಾರ ನಗರದ ಪುರಭವನದಲ್ಲಿ ಶ್ರೀರಾಮಸೇನಾ(ಬೆಂಗಳೂರು)ಏರ್ಪಡಿಸಿದ್ದ, ನೂತನ ಪದಾಧಿಕಾರಿಗಳ ಅಧಿಕಾರ ಸ್ವೀಕರ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅನೇಕ ಶಾಸಕರು ಬಿಜೆಪಿ ಸೇರ್ಪಡೆಗಾಗಿ ತಯಾರಿದ್ದಾರೆ. ಆದರೆ, ಅವರ ಕ್ಷೇತ್ರಗಳಲ್ಲಿ ಮುಸ್ಲಿಮರ ಮತಗಳು ಹೆಚ್ಚಾಗಿರುವ ಕಾರಣ, ಕೈ ತಪ್ಪುವ ಭೀತಿ ಅವರಲ್ಲಿದೆ. ಇದು, ಆ ಶಾಸಕರಲ್ಲಿನ ಹಿಜಡಾತನದ ಸಂಕೇತ ಎಂದು ವಾಗ್ದಾಳಿ ನಡೆಸಿದರು.

ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಎಂದಿಗೂ ಸಹ ಓರ್ವ ಮುಸ್ಲಿಮ್ ವ್ಯಕ್ತಿಯ ಬಳಿಯೂ ನಮಸ್ಕಾರ ಹಾಕಿ ಮತ ಕೇಳಿಲ್ಲ. ಇದರ ಅವಶ್ಯತೆಯೂ ನನಗಿಲ್ಲ ಎಂದ ಅವರು, ಯಾರು ರಾಷ್ಟ್ರದ್ರೋಹಿ ತತ್ವ ಹೊಂದಿದ ವ್ಯಕ್ತಿಗಳು ಮಾತ್ರ ಬಿಜೆಪಿಗೆ ಮತ ನೀಡುವುದಿಲ್ಲ ಎಂದು ಅವರು ಹೇಳಿದರು.

ಹಿಂದೆ ನಮ್ಮ ಸರಕಾರದ ಅವಧಿಯಲ್ಲಿ ಗೋಹತ್ಯೆ ನಿಷೇಧ ಮಾಡಿದ್ದೆವು. ಆದರೆ, ಬಳಿಕ ಕಾಂಗ್ರೆಸ್ ಸರಕಾರ ಅದನ್ನು ರದ್ದುಗೊಳಿಸಿತ್ತು. ಇದೀಗ ನಮಗೆ ಅವಕಾಶ ಸಿಕ್ಕಿದ್ದು, ಗೋವಿನ ಸಂತತಿ ಉಳಿವಿಗೆ ನಿಷೇಧವನ್ನು ಪುನಃ ಜಾರಿ ಮಾಡುತ್ತೇವೆ ಎಂದು ಈಶ್ವರಪ್ಪ ತಿಳಿಸಿದರು.

ಹಿಂದುತ್ವ ಸೇನಾನಿಗಳ ತಯಾರಿಕ ಸಂಸ್ಥೆ ಶ್ರೀರಾಮ ಸೇನೆ ಆಗಿದೆ ಎಂದ ಅವರು, ಪಾಕಿಸ್ತಾನ ಮತ್ತು ಪಿಒಕೆ ಪ್ರದೇಶವನ್ನು ಮುಂದಿನ ದಿನಗಳಲ್ಲಿ ಭಾರತಕ್ಕೆ ವಶಕ್ಕೆ ಪಡೆಯಲಿದ್ದು, ನರೇಂದ್ರ ಮೋದಿ ಜೀವಾಂತವಾಗಿವವರೆಗೂ ಅವರೇ ಈ ದೇಶದ ಪ್ರಧಾನಿ ಆಗಿರುತ್ತಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಸೇರಿದಂತೆ ಪ್ರಮುಖರಿದ್ದರು.

ರೌಡಿ ಜತೆ ವೇದಿಕೆ, ಖಡ್ಗ ವಿತರಿಸಿದ ಸಚಿವ..!

ರಾಜಧಾನಿ ಬೆಂಗಳೂರಿನ ಕುಖ್ಯಾತ ಮಹಿಳಾ ರೌಡಿಶೀಟರ್ ಯಶಸ್ವಿನಿ ಗೌಡ ಜತೆ ವೇದಿಕೆ ಹಂಚಿಕೊಂಡು, ಶ್ರೀರಾಮ ಸೇನಾ ಪದಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಖಡ್ಗ ವಿತರಿಸಿದರು.

ಸುಲಿಗೆ, ಹಲ್ಲೆ, ಮೀಟರ್ ಬಡ್ಡಿ ದಂಧೆ ಸೇರಿದಂತೆ ಯಶಸ್ವಿನಿ ವಿರುದ್ಧ ನಗರದ ವಿವಿಧ ಠಾಣೆಗಳಲ್ಲಿ ಆರು ಪ್ರಕರಣಗಳು ದಾಖಲಾಗಿವೆ. ಅಲ್ಲದೆ, ಸುಬ್ರಹ್ಮಣ್ಯಪುರ ಠಾಣೆಯ ರೌಡಿಗಳ ಪಟ್ಟಿಯಲ್ಲೂ ಯಶಸ್ವಿಗೌಡ ಹೆಸರಿದೆ. ಆದರೆ, ರವಿವಾರ ಶ್ರೀರಾಮ ಸೇನಾ ಆಯೋಜಿಸಿದ್ದ, ಕಾರ್ಯಕ್ರಮದಲ್ಲಿ ಯಶಸ್ವಿಗೌಡ ಜತೆ ವೇದಿಕೆಯಲ್ಲಿ ಸಚಿವರು ಕುಳಿತಿದ್ದರು. ಬಳಿಕ ಆಕೆಯನ್ನು ಈಶ್ವರಪ್ಪ ಮುಂದೆ ಕರೆದು ಅವರಿಂದಲೇ ದೀಪ ಬೆಳಗಿಸಿದರು. 

‘ಲಕ್ಷ್ಮೀ ದೇವತೆ ಇದ್ದು, ಆರ್ಥಿಕವಾಗಿ ಕುಗ್ಗುವುದಿಲ್ಲ’

ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ವಿರುದ್ಧ ಆರ್ಥಿಕ ಸಂಪೂರ್ಣ ಕುಸಿಯುತ್ತಿರುವ ಅಲೆ ಬರುತ್ತದೆ. ಆದರೆ, ಮೋದಿ ಸಚಿವ ಸಂಪುಟದಲ್ಲೂ ಬಹಳಷ್ಟು ಮಂದಿ ಆರ್ಥಿಕ ತಜ್ಞರಿದ್ದಾರೆ.ಅಷ್ಟೇ ಅಲ್ಲದೆ, ಭಾರತದಲ್ಲಿ ಲಕ್ಷ್ಮೀ ದೇವತೆ ಇದ್ದಾಳೆ.ಹಾಗಾಗಿ, ಆರ್ಥಿಕತೆ ಕುಗ್ಗುವುದಿಲ್ಲ ಎಂದು ಬಾರ್ಕೂರು ಮಹಾ ಸಂಸ್ಥಾನದ ವಿಶ್ವ ಸಂತೋಷ ಭಾರತಿ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X