Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪ್ರತಿಭಟನೆಗೆ ಅನುಮತಿ ಕಡ್ಡಾಯಕ್ಕೆ...

ಪ್ರತಿಭಟನೆಗೆ ಅನುಮತಿ ಕಡ್ಡಾಯಕ್ಕೆ ವಾಟಾಳ್ ನಾಗರಾಜ್ ವಿರೋಧ

ವಾರ್ತಾಭಾರತಿವಾರ್ತಾಭಾರತಿ16 Sept 2019 7:50 PM IST
share
ಪ್ರತಿಭಟನೆಗೆ ಅನುಮತಿ ಕಡ್ಡಾಯಕ್ಕೆ ವಾಟಾಳ್ ನಾಗರಾಜ್ ವಿರೋಧ

ಬೆಂಗಳೂರು, ಸೆ. 16: ಚಳವಳಿಗಳನ್ನು ನಡೆಸಲು ವಾರದ ಮುಂಚೆಯೇ ಅರ್ಜಿ ಹಾಕಬೇಕು ಸೇರಿದಂತೆ ವಿವಿಧ ಷರತ್ತುಗಳನ್ನು ಚಳವಳಿಗಾರರ ಮೇಲೆ ವಿಧಿಸಿರುವುದನ್ನು ಹಿಂತೆಗೆದುಕೊಳ್ಳಬೇಕೆಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾರೇ ಚಳವಳಿ ಮಾಡಿದರೂ ಏಳು ದಿನಕ್ಕೆ ಮುಂಚಿತವಾಗಿ ಅನುಮತಿಯನ್ನು ಪಡೆಯಬೇಕು ಎಂದು ಹೇಳಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ. 2009ರ ಕಾನೂನನ್ನು ಜಾರಿ ಮಾಡಬೇಕೆಂದು ಪೊಲೀಸ್ ಆಯುಕ್ತರು ತರಾತುರಿಯಲ್ಲಿ ಹೇಳಿದ್ದಾರೆ. ಆದರೆ ಚಳವಳಿ ನಡೆಸಲು ಅರ್ಜಿ ಹಾಕುವುದರ ಸಾಧಕ ಬಾಧಕಗಳ ಬಗ್ಗೆ ಯೋಚನೆ ಮಾಡಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಅಲ್ಲದೆ, ಪೊಲೀಸರಿಗೆ ಎಲ್ಲಿ ಚಳವಳಿ ಮಾಡುತ್ತೇವೆಂದು ಸ್ಥಳ ತಿಳಿಸಬೇಕು. ಆ ಸ್ಥಳವನ್ನು ಪೊಲೀಸರು ಬಂದು ಪರಿಶೀಲನೆ ನಡೆಸಬೇಕು. ಸ್ಥಳ ಪ್ರತಿಭಟನೆ ನಡೆಸಲು ಯೋಗ್ಯವಾಗಿ ಇರುವುದೇ ಎಂದು ತೀರ್ಮಾನ ತೆಗೆದುಕೊಳ್ಳಬೇಕು. ತದನಂತರ ನೀವು ಚಳವಳಿ ಮಾಡಬೇಕಾ, ಬೇಡವಾ ಎಂದು ತಿಳಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಹೊಸ ನಿಯಮದ ಪ್ರಕಾರ ಪ್ರತಿಭಟನೆ ಮಾಡುವ ಮುನ್ನ ಅರ್ಜಿಯನ್ನು ಭರ್ತಿ ಮಾಡಬೇಕು. ಆದರೆ ಅರ್ಜಿಯನ್ನು ಕಾನೂನು ತಜ್ಞರ ಸಲಹೆ ಪಡೆದು ಭರ್ತಿ ಮಾಡುವಂತೆ ರೂಪಿಸಲಾಗಿದೆ. ಏಕೆಂದರೆ ಅರ್ಜಿ ಅಷ್ಟು ಸುಲಭವಾಗಿ ಅರ್ಥವಾಗುವಂತೆ ಇಲ್ಲ. ಇದು ಪ್ರಜೆಗಳ ದನಿಯನ್ನು ಕುಗ್ಗಿಸುವ ಕ್ರಮವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಹಿಂದಿನ ದಿನಗಳಲ್ಲಿ ನಡೆಸುತ್ತಿದ್ದ ರೈತ, ಕಮ್ಯುನಿಸ್ಟ್, ವಿದ್ಯಾರ್ಥಿ, ದಲಿತ ಹಾಗೂ ನಾಡು, ನುಡಿಗಾಗಿ ಕನ್ನಡ ಪರ ಚಳವಳಿಗಳು ಸರಕಾರವನ್ನೇ ನಡುಗಿಸುವಂತೆ ಇರುತ್ತಿದ್ದವು. ಇನ್ನು ಪೊಲೀಸರಿಗೆ ಚಳವಳಿಯನ್ನು ನಿಭಾಯಿಸುವುದೇ ಸವಾಲಾಗಿರುತ್ತಿತ್ತು ಎಂದು ವಿವರಿಸಿದರು.

ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಜನರ ಮೇಲೆ ನಿರಂತರವಾಗಿ ದಬ್ಭಾಳಿಕೆ ಮಾಡುತ್ತಿದೆ. ಸರಕಾರದ ವಿರುದ್ಧ ಚಳವಳಿಯನ್ನು ಮಾಡಲೇಬಾರದು. ಚಳವಳಿಯ ಹೆಸರನ್ನೇ ಎತ್ತಬಾರದು ಎಂಬ ಧೋರಣೆ ಸರಿಯಾದುದಲ್ಲ. ಪೊಲೀಸರು ಹೇಳಿದ ಮಾತನ್ನು ಕೇಳಬೇಕು ಎಂದು ಸರಕಾರ ಪರೋಕ್ಷವಾಗಿ ಹೇಳಿದಂತೆ ಇದೆ. ಇನ್ನು ಈ ಪರಿಸ್ಥಿತಿ ಮುಂದೆ ಪತ್ರಿಕಾ ರಂಗಕ್ಕೂ ಬರುತ್ತದೆ ಎಂದು ಹೇಳಿದರು.

ರಾಜ್ಯದಲ್ಲಿ ಇತ್ತೀಚೆಗೆ ಚಳವಳಿಗಳೇ ಅಪರೂಪವಾಗುತ್ತಿವೆ. ಇಂತಹ ಸಮಯದಲ್ಲಿ ಅಸಮಾನತೆ ಹಾಗೂ ಅನ್ಯಾಯದ ವಿರುದ್ಧ ಹೋರಾಡುವುದಕ್ಕೆ ಅರ್ಜಿ ಹಾಕಬೇಕು ಎಂದಿರುವುದು ಜನರ ದನಿಯನ್ನು ಅಡಗಿಸುವ ಕ್ರಮವಾಗಿದೆ.

-ವಾಟಾಳ್ ನಾಗರಾಜ್, ಕನ್ನಡ ಒಕ್ಕೂಟದ ಅಧ್ಯಕ್ಷ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X