Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಧಿ 370ರ ರದ್ದತಿ ವಿರುದ್ಧದ ಅರ್ಜಿಯ...

ವಿಧಿ 370ರ ರದ್ದತಿ ವಿರುದ್ಧದ ಅರ್ಜಿಯ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ವಾರ್ತಾಭಾರತಿವಾರ್ತಾಭಾರತಿ16 Sept 2019 9:00 PM IST
share
ವಿಧಿ 370ರ ರದ್ದತಿ ವಿರುದ್ಧದ ಅರ್ಜಿಯ ವಿಚಾರಣೆಗೆ ಸುಪ್ರೀಂ ಒಪ್ಪಿಗೆ

ಹೊಸದಿಲ್ಲಿ,ಸೆ.16: ಜಮ್ಮು-ಕಾಶ್ಮೀರದಲ್ಲಿ ರಾಷ್ಟ್ರಪತಿ ಆಳ್ವಿಕೆಯ ಹೇರಿಕೆ ಮತ್ತು ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ವಿಧಿ 370ರ ರದ್ದತಿಯನ್ನು ಪ್ರಶ್ನಿಸಿ ಜಮ್ಮು-ಕಾಶ್ಮೀರ ಪೀಪಲ್ಸ್ ಕಾನ್‌ಫರೆನ್ಸ್ (ಜೆಕೆಪಿಸಿ) ಸಲ್ಲಿಸಿರುವ ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಲು ಸರ್ವೋಚ್ಚ ನ್ಯಾಯಾಲಯವು ಸೋಮವಾರ ಒಪ್ಪಿಕೊಂಡಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಹಾಗೂ ನ್ಯಾಯಮೂರ್ತಿಗಳಾದ ಎಸ್.ಎ.ಬೋಬ್ಡೆ ಮತ್ತು ಎಸ್.ಎ.ನಝೀರ್ ಅವರನ್ನೊಳಗೊಂಡ ಪೀಠವು ರಾಜ್ಯದಲ್ಲಿ ವಿಧಿ 370ನ್ನು ರದ್ದುಗೊಳಿಸಿರುವ ರಾಷ್ಟ್ರಪತಿಗಳ ಆದೇಶದ ಸಿಂಧುತ್ವ ಪರಿಶೀಲನೆಗಾಗಿ ಐವರು ನ್ಯಾಯಾಧೀಶರ ಸಂವಿಧಾನ ಪೀಠಕ್ಕೆ ಒಪ್ಪಿಸಲಾಗಿರುವ ಅರ್ಜಿಗಳೊಂದಿಗೆ ಜೆಕೆಪಿಸಿಯ ಅರ್ಜಿಯನ್ನು ಸೇರಿಸಿತು.

ವಿಧಿ 370ರ ರದ್ದತಿ ಕುರಿತು ಹೊಸ ಅರ್ಜಿಗಳನ್ನು ಅಂಗೀಕರಿಸಲು ನಿರಾಕರಿಸಿದ ಪೀಠವು,ಈ ವಿಷಯದಲ್ಲಿ ಅರ್ಜಿಗಳ ಸಂಖ್ಯೆಯನ್ನು ತಾನು ಹೆಚ್ಚಿಸುವುದಿಲ್ಲ ಎಂದು ತಿಳಿಸಿತು.

ಈ ವಿಷಯದಲ್ಲಿ ವಾದಿಸಲು ಬಯಸುವವರು ದಾವೆಯಲ್ಲಿ ಸೇರಿಕೊಳ್ಳಲು ಅರ್ಜಿಗಳನ್ನು ಸಲ್ಲಿಸಬಹುದು ಎಂದು ನ್ಯಾಯಾಲಯವು ಹೇಳಿತು.

ಅಕ್ಟೋಬರ್ ಮೊದಲ ವಾರದಲ್ಲಿ ಸಂವಿಧಾನ ಪೀಠದಿಂದ ವಿಚಾರಣೆ ನಿಗದಿಯಾಗಿರುವ ಹಲವಾರು ಅರ್ಜಿಗಳನ್ನು ಪ್ರಸ್ತಾಪಿಸಿದ ಪೀಠವು,ನಾವು ಶಾಸಕಾಂಗ ಕ್ರಮದ ಸಿಂಧುತ್ವವನ್ನು ಪರಿಶೀಲಿಸಲಿದ್ದೇವೆ ಎಂದು ತಿಳಿಸಿತು.

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನವನ್ನು ಹಿಂದೆಗೆದುಕೊಳ್ಳುವ ಮತ್ತು ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ವಿಭಜಿಸುವ ಕೇಂದ್ರದ ನಿರ್ಧಾರಗಳನ್ನು ಪ್ರಶ್ನಿಸಿರುವ ಜೆಕೆಪಿಸಿ,ರಾಜ್ಯ ಪುನರ್ಘಟನೆ ಕಾಯ್ದೆ ಮತ್ತು ರಾಷ್ಟ್ರಪತಿಗಳ ಆದೇಶಗಳನ್ನು ಸಂವಿಧಾನಬಾಹಿರ ಮತ್ತು ಅಸಿಂಧು ಎಂದು ಘೋಷಿಸಲು ನಿರ್ದೇಶವನ್ನು ಕೋರಿದೆ.

 ಜೆಕೆಪಿಸಿ ರಾಜ್ಯದ ಸಾಂವಿಧಾನಿಕ ಸ್ಥಾನಮಾನದಲ್ಲಿ ಮಾಡಲಾಗಿರುವ ಬದಲಾವಣೆಗಳಿಗೆ ಕಾನೂನು ಸವಾಲು ಒಡ್ಡಿರುವ ಎರಡನೇ ಪಕ್ಷವಾಗಿದೆ. ಇದಕ್ಕೂ ಮುನ್ನ ಎನ್‌ಸಿ ಸಂಸದರಾದ ಮುಹಮ್ಮದ್ ಅಕ್ಬರ್ ಲೋನೆ ಮತ್ತು ಹಸ್ನೈನ್ ಮಸೂದಿ ಅವರು ಪಕ್ಷದ ಪರವಾಗಿ ಸುಪ್ರೀಂ ಮೆಟ್ಟಿಲನ್ನೇರಿದ್ದರು.

 ಜಮ್ಮು-ಕಾಶ್ಮೀರ ರಾಜ್ಯಪಾಲರು ಇಡೀ ದೇಶವನ್ನು ಅಂಧಕಾರದಲ್ಲಿಟ್ಟಿದ್ದರು. ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ಇಂತಹ ತೀವ್ರ ಕ್ರಮವನ್ನು ಕೈಗೊಳ್ಳುವ ಬಗ್ಗೆ ದೇಶಕ್ಕೆ ಮಾಹಿತಿ ನೀಡಲಾಗಿರಲಿಲ್ಲ ಎಂದು ಜೆಕೆಪಿಸಿ ತನ್ನ ಅರ್ಜಿಯಲ್ಲಿ ತಿಳಿಸಿದೆ.

ಸಂಸತ್ತು ಅಂಗೀಕರಿಸಿರುವ ಜಮ್ಮು-ಕಾಶ್ಮೀರ ಪುನರ್ಘಟನೆ ಕಾಯ್ದೆಯನ್ನು ಪ್ರಶ್ನಿಸಿರುವ ಅದು,ದೇಶದ ಇತಿಹಾಸದಲ್ಲೆಂದೂ ವಿಧಿ 3ರಡಿ ಪುನರ್ಘಟನೆ ನಡೆದಿಲ್ಲ ,ಇದು ನಮ್ಮ ಸಂವಿಧಾನ ಮತ್ತು ರಾಜ್ಯವೊಂದರ ಜನತೆಯ ಸ್ವಾತಂತ್ರ್ಯದ ಮೇಲೆ ರಾಜಾರೋಷ ದಾಳಿಯನ್ನು ತೋರಿಸುತ್ತಿದೆ ಎಂದಿದೆ. ಜಮ್ಮು-ಕಾಶ್ಮೀರವು ಪ್ರತ್ಯೇಕ ಸಂವಿಧಾನವನ್ನು ಹೊಂದಿತ್ತು ಮತ್ತು ರಾಜ್ಯಕ್ಕಾಗಿ ಕಾನೂನು ರೂಪಿಸುವ ಸೀಮಿತ ಅಧಿಕಾರ ಮಾತ್ರ ಸಂಸತ್ತಿಗಿತ್ತು ಎಂದು ಪ್ರತಿಪಾದಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X