Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ದಕ್ಕದ...

ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ದಕ್ಕದ ಪಡಿತರ: ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ- ಆರೋಪ

ವಾರ್ತಾಭಾರತಿವಾರ್ತಾಭಾರತಿ16 Sept 2019 10:44 PM IST
share
ನ್ಯಾಯಬೆಲೆ ಅಂಗಡಿಗಳಲ್ಲಿ ಬಡವರಿಗೆ ದಕ್ಕದ ಪಡಿತರ: ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ನಿರ್ಲಕ್ಷ್ಯ- ಆರೋಪ

ಮೂಡಿಗೆರೆ, ಸೆ.16: ತಾಲೂಕಿನಾದ್ಯಂತ ನ್ಯಾಯಬೆಲೆ ಅಂಗಡಿಗಳಲ್ಲಿ ಬಡ ಪಡಿತರ ಚೀಟಿದಾರರು ಪಡಿತರಗಳನ್ನು ಪಡೆಯಲು ಭಾರೀ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಸರ್ವರ್ ಸಮಸ್ಯೆ, ಇಂಟರ್‍ನೆಟ್ ಸಮಸ್ಯೆಗಳಿಂದಾಗಿ ಬಡವರು ನ್ಯಾಯಬೆಲೆ ಅಂಗಡಿಗಳ ಎದುರು ಪ್ರತಿದಿನ ಕಾದು ಕಾದು ಹೈರಾಣಾಗುವಂತಾಗಿದೆ. ಈ ಸಮಸ್ಯೆಗಳನ್ನು ಬಗೆಹರಿಸಬೇಕಾದ ಕ್ಷೇತ್ರದ ಶಾಸಕರು, ಜನಪ್ರತಿನಿಧಗಳು ಕೂಡಲೇ ಈ ಸಮ್ಯೆಗಳನ್ನು ಬಗೆಹರಿಸಲು ಮುಂದಾಗಬೇಕೆಂದು ಎಸ್ಸಿ, ಎಸ್ಟಿ ಹಿತರಕ್ಷಣಾ ಸಮಿತಿ ಅಧ್ಯಕ್ಷ ಕೆ.ಕೆ.ರಾಮಯ್ಯ ಪತ್ರಿಕಾ ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ. 

ನ್ಯಾಯಬೆಲೆ ಅಂಗಡಿಗಳಲ್ಲಿ ಸರಕಾರ ಹೊಸ ಪಡಿತರ ವಿತರಣಾ ವ್ಯವಸ್ಥೆ ಜಾರಿ ಮಾಡಿದಾಗಿನಿಂದ ತಾಲೂಕಿನಾದ್ಯಂತ ಪಡಿತರ ಚೀಟಿದಾರರಿಗೆ ಸರಿಯಾಗಿ ಪಡಿತರಗಳು ಸಿಗುತ್ತಿಲ್ಲ. ಇಂಟರ್‍ನೆಟ್ ಸಮಸ್ಯೆಯಿಂದಾಗಿ ಈ ಹಿಂದೆ ಬಡಜನರು ನ್ಯಾಯಬೆಲೆ ಅಂಗಡಿಗಳ ಮುಂದೆ ಬೆಳಗಿನಿಂದ ಸಂಜೆವರೆಗೆ ಕಾದು ಬರಿಗೈಲಿ ಹಿಂದಿರುಗುವ ಪರಿಸ್ಥಿತಿ ಇತ್ತು. ಸದ್ಯ ಇಂಟರ್‍ನೆಟ್ ಸೌಲಭ್ಯ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಬೆರಳಚ್ಚು ಪಡೆಯುವ ಯಂತ್ರಕ್ಕೆ ಪಡಿತರ ಚೀಟಿದಾರರು ಬೆರಳಚ್ಚು ನೀಡಿದರೂ ಯಂತ್ರದಲ್ಲಿ ದಾಖಲಾಗುತ್ತಿಲ್ಲ. ಇದರಿಂದಾಗಿ ಗ್ರಾಮಸ್ಥರು ಸುಖಾಸುಮ್ಮನೆ ಕೆಲಸ ಕಾರ್ಯಬಿಟ್ಟು ನ್ಯಾಯಬೆಲೆ ಅಂಗಡಿಗಳಿಗೆ ಪ್ರತಿದಿನ ಅಲೆಯಬೇಕಾಗಿದೆ ಎಂದು ಅವರು ಆರೋಪಿಸಿದ್ದಾರೆ.

ತಾಲೂಕಿನ ಜನ್ನಾಪುರ ಗ್ರಾಮದಲ್ಲಿರುವ ನ್ಯಾಯಬೆಲೆ ಅಂಗಡಿಯಲ್ಲಿರುವ ಯಂತ್ರದಲ್ಲಿ ಸೋಮವಾರ ಬೆರಳಚ್ಚು ದಾಖಲಾಗದೆ ನೂರಾರು ಮಂದಿ ಪಡಿತರ ಚೀಟಿದಾರರಿಗೆ ಪಡಿತರ ಸಿಕ್ಕಿಲ್ಲ. ಇದರಿಂದ ಬೇಸತ್ತ ಕೆಲ ಗ್ರಾಮಸ್ಥರು ನ್ಯಾಯಬೆಲೆ ಅಂಗಡಿ ಸಿಬ್ಬಂದಿಗೆ ಹಲ್ಲೆ ಮಾಡಲು ಮುಂದಾಗಿದ್ದಾರೆಂದು ದೂರಿರುವ ಅವರು, ಇಂತಹ ಸಮಸ್ಯೆಗಳು ಇಕೆವೈಸಿ ಪಡಿತರ ವ್ಯವಸ್ಥೆ ಜಾರಿಯಾದಾಗಿನಿಂದ ತಾಲೂಕಿನಲ್ಲಿ ಸರ್ವೆ ಸಾಮಾನ್ಯವಾಗಿದೆ. ಇಂತಹ ಸಮಸ್ಯೆಗಳಿಂದಾಗಿ ನ್ಯಾಯಬೆಲೆ ಅಂಗಡಿಗಳ ಅಕ್ಕಿ, ರಾಗಿ, ಸೀಮೆಎಣ್ಣೆಯಂತಹ ದಿನನಿತ್ಯದ ಅಗತ್ಯ ವಸ್ತಯಗಳನ್ನೇ ನಂಬಿಕೊಂಡು ಬದುಕುತ್ತಿರುವ ಬಡಕುಟುಂಬಗಳಿಗೆ ಭಾರೀ ಅನ್ಯಾಯವಾಗುತ್ತಿದೆ. ತಾಲೂಕಿನ ಶಾಸಕ ಎಂ.ಪಿ.ಕುಮಾರಸ್ವಾಮಿ ಸೇರಿದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನ್ಯಾಯಬೆಲೆ ಅಂಗಡಿಗಳಲ್ಲಿನ ಇಂತಹ ಸಮಸ್ಯೆಗಳನ್ನು ಕೂಡಲೇ ಪರಿಹರಿಸಲು ಸರಕಾರದ ಮೇಲೆ ಒತ್ತಡ ಹೇರಬೇಕು. ಬಡಜನರು ಪಡಿತರ ವಸ್ತುಗಳಿಂದ ವಂಚಿತರಾಗುವುದನ್ನು ತಡೆಯಬೇಕೆಂದು ಕೆ.ಕೆ.ರಾಮಯ್ಯ ಒತ್ತಾಯಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X