Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು...

ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ17 Sept 2019 7:06 PM IST
share
ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯಿಂದ ಪ್ರತಿಭಟನೆ

ಭಟ್ಕಳ: ಶರಾವತಿ ಅಭಯಾರಣ್ಯ ವ್ಯಾಪ್ತಿಗೆ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಭಾಗವನ್ನು ಸೇರಿಸುವುದನ್ನು ಕೈಬಿಡುವ ಕುರಿತು ಉತ್ತರ ಕನ್ನಡ ಜಿಲ್ಲಾ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ವತಿಯಿಂದ ಪ್ರತಿಭಟನೆಯನ್ನು ನಡೆಸಿ ಸಹಾಯಕ ಆಯುಕ್ತರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು.

ಮನವಿಯಲ್ಲಿ ಈಗಾಗಲೆ ಅಸ್ಥಿತ್ವದಲ್ಲಿರುವ ಶರಾವತಿ ಅಭಯಾರಣ್ಯಕ್ಕೆ ಉತ್ತರ ಕನ್ನಡ ಜಿಲ್ಲೆಯ ಅಘನಾಶಿನಿ ಕಣಿವೆಯ 30 ಸಾವಿರ ಹೆಕ್ಟೇರ್ ಅರಣ್ಯ ಪ್ರದೇಶವನ್ನು ಸೇರ್ಪಡೆ ಮಾಡಿ ರಾಜ್ಯ ವನ್ಯಜೀವಿ ಅರಣ್ಯ ಇಲಾಖೆಯು ಅದೇಶ ಹೊರಡಿಸಿದ್ದರಿಂದ  ಅರಣ್ಯ ಭೂಮಿಯನ್ನು ವಾಸ್ತವ್ಯ, ಸಾಗುವಳಿ, ಅವಲಂಬನೆಗಾಗಿ ಸ್ಥಳಿಯ ಅರಣ್ಯವಾಸಿಗಳು ತಲೆತಲಾಂತರದಿಂದ ಅರಣ್ಯ ಪ್ರದೇಶಗಳ ಮೇಲೆ ಅವಲಂಬಿತವಾಗಿರುವವರಿಗೆ ತೀವ್ರ ತೊಂದರೆಯಾಗಲಿದೆ. ಅರಣ್ಯವಾಸಿಗಳ ಅನುಭೋಗ, ಸ್ವತಂತ್ರ ಹಾಗೂ ಭೂಮಿಯ ಹಕ್ಕಿನಿಂದ ವಂಚಿತರಾಗುವ ಸಂದರ್ಬ ಬಂದೊದಗಿದೆ.

ಜಿಲ್ಲೆಯ ಅಘನಾಶಿನಿ ಕಣಿವೆಯಲ್ಲಿನ ಅರಣ್ಯ ಪ್ರದೇಶ, ಶರಾವತಿ ಅಭಯಾರಣ್ಯ ಸಿಂಗಳೀಕ ಇನ್ನಿತರ ವಿನಾಶದ ಅಂಚಿನ ವನ್ಯ ಜೀವಿಗಳ ಉಳಿವಿನ ಸಲುವಾಗಿ ಶರಾವತಿ ಅಭ್ಯಾರಣ್ಯವನ್ನು 1978ರಲ್ಲೇ ರಚಿಸಲಾಗಿದೆ. ಇದರ ವ್ಯಾಪ್ತಿ 43 ಸಾವಿರ ಹೆಕ್ಟೇರ್ ಇದೆ. ಇದಕ್ಕೆ ಶಿವಮೊಗ್ಗ ಜಿಲ್ಲೆಯ 4 ಸಾವಿರ ಹೆಕ್ಟೇರ್ ಹಾಗೂ ಉತ್ತರ ಕನ್ನಡ ಜಿಲ್ಲೆಯ 44 ಸಾವಿರ ಹೆಕ್ಟೇರ್ ಅರಣ್ಯ ಸೇರ್ಪಡೆ ಮಾಡುವುದರಿಂದ ಅರಣ್ಯ ವನ್ಯಜೀವಿ ಸಂರಕ್ಷಣೆಗೆ ಇನ್ನಷ್ಟು ಸಹಾಯ ಮಾಡುತ್ತದೆ ಎಂದು ಹೇಳಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಅಘನಾಶಿನಿ ಕಣಿವೆಯ ಅರಣ್ಯ ಭೂಮಿಯನ್ನು ಅಘನಾಶಿನಿ ಸಿಂಗಳಿಕ ಸಂರಕ್ಷಿತ ಪ್ರದೇಶವೆಂದು ಘೋಷಿಸಿ ಕಾರ್ಯ ನಿರ್ವಹಿಸುತ್ತಿರುವ ಹಿನ್ನಲೆಯಲ್ಲಿ ಹೆಚ್ಚುವರಿಯಾಗಿ ಶಿವಮೊಗ್ಗದಲ್ಲಿ ಶರಾವತಿ ಅಭಯಾರಣ್ಯಕ್ಕೆ ಉತ್ತರ ಕನ್ನಡ ಜಿಲ್ಲೆಯ ಪ್ರದೇಶವನ್ನು ಸೇರ್ಪಡೆ ಮಾಡುವುದಕ್ಕೆ ಅರಣ್ಯವಾಸಿಗಳ ಸಂಪೂರ್ಣ ವಿರೋಧ ಇರುವುದಲ್ಲದೇ ಸದ್ರಿ ಯೋಜನೆಯನ್ನು ತಕ್ಷಣ ಕೈಬಿಡಬೇಕೆಂದು ಹೋರಾಟಗಾರರ ವೇದಿಕೆ ಅಗ್ರಹಿಸುತ್ತಿದೆ ಎಂದು ತಿಳಿಸಲಾಗಿದೆ. 

ಮನವಿ ನೀಡುವ ಸಂದರ್ಭದಲ್ಲಿ ಮಾತನಾಡಿದ ಜಿಲ್ಲಾ ಅರಣ್ಯ ಹಕ್ಕು ಹೋರಾಟ ಸಮಿತಿಯ ಅಧ್ಯಕ್ಷ ಎ. ರವೀಂದ್ರ ನಾಯ್ಕ ಅವರು ನಮ್ಮ ಜಿಲ್ಲೆಯ ಅರಣ್ಯ ಭೂಮಿಯನ್ನು ಶಿವಮೊಗ್ಗ ಜಿಲ್ಲಾ ಶರಾವತಿ ಅಭಯಾರಣ್ಯಕ್ಕೆ ಸೇರಿಸುವುದರಿಂದ ಇಲ್ಲಿನ ಜನರ ಜನಜೀವನದ ಮೇಲೆ ತೀವ್ರವಾದ ಪರಿಸ್ಥಿತಿ ಎದುರಾಗುವುದಿದ್ದು ಅರಣ್ಯ ಅತಿಕ್ರಮಣದಾರರಿಗೆ ಹಕ್ಕು ದೊರೆಯುವುದು ಕಷ್ಟಸಾಧ್ಯವಾಗುವುದು.  ಅಲ್ಲದೇ ಇನ್ನು ಮುಂದೆ ಯಾವುದೇ ಸಣ್ಣಪುಟ್ಟ ಪರವಾನಿಗೆ ಬೇಕೆಂದರೂ ಕೂಡಾ ಶಿವಮೊಗ್ಗಕ್ಕೆ ಅಲೆಯ ಬೇಕಾಗುವುದು.  ಅರಣ್ಯ ಅತಿಕ್ರಮಣದಾರರು ತಮ್ಮ ಹಕ್ಕಿನಿಂದ ವಂಚಿತರಾಗಲಿದ್ದಾರೆ ಎಂದರಲ್ಲದೇ ಈ ಪ್ರದೇಶವು ಸಿಂಗಳೀಕ ಸಂರಕ್ಷಿತ ಪ್ರದೇಶವಾದ್ದರಿಂದ ಮತ್ತೆ ಅಭಯಾರಣ್ಯಕ್ಕೆ ಸೇರಿಸುವುದು ಅಗತ್ಯವಿಲ್ಲವಾಗಿದೆ. ಈ ರೀತಿಯಾಗಿ ಸರಕಾರ ಮುಂದುವರಿದರೆ ಮುಂದೆ ಉಗ್ರ ಹೋರಾಟ ಕೈಗೆತ್ತಿಕೊಳ್ಳಲಾಗುವುದು ಎಂದರು.

ಈ ಸಂದರ್ಭದಲ್ಲಿ ಮಾತನಾಡಿದ ತಾಲೂಕಾ ಅರಣ್ಯ ಅತಿಕ್ರಮಣದಾರರ ಹೊರಾಟ ಸಮಿತಿ ಅಧ್ಯಕ್ಷ ರಾಮಾ ಮೊಗೇರ ಅವರು ತಾಲೂಕಿನ ಅತಿಕ್ರಮಣದಾರರ ಮೂಲಭೂತ ಹಕ್ಕಿಗೇ ಕೊಡಲಿ ಏಟು ಕೊಡಲು ಹೊರಟಿರುವುದನ್ನು ಎಲ್ಲಾ ಅತಿಕ್ರಮಣದಾರರು ಒಕ್ಕೊರಲಿನಿಂದ ಖಂಡಿಸುತ್ತಾರೆ. ಇಲ್ಲಿಯ ತನಕ ಜನ ಪ್ರತಿನಿಧಿಗಳು, ಶಾಸಕರು, ಮಂತ್ರಿಗಳು ಯಾರೂ ಕೂಡಾ ಅತಿಕ್ರಮಣದಾರರ ಸಹಾಯಕ್ಕೆ ಬಂದಿಲ್ಲ. ಅತಿಕ್ರಮಣದಾರರ ಸಮಸ್ಯೆಗಳನ್ನು ಕೇಳಲಿಕ್ಕೂ ಕೂಡಾ ಜನ ಪ್ರತಿನಿಧಿಗಳಿಗೆ ಸಮಯವಿಲ್ಲ ಎನ್ನುವಂತಾಗಿದೆ ಎಂದರು.

ರಾಜ್ಯಪಾಲರಿಗೆ ಬರೆದ ಮನವಿಯನ್ನು ಜಿಲ್ಲಾ ಸಂಚಾಲಕ ದೇವರಾಜ ಮರಾಠಿ ಓದಿದರು. ಸಹಾಯಕ ಕಮಿಷನರ್ ಅವರ ಅನುಪಸ್ಥಿತಿಯಲ್ಲಿ ಕಚೇರಿ ಸಹಾಯಕ ಎಲ್. ಎ. ಭಟ್ಟ ಅವರು ಮನವಿಯನ್ನು ಸ್ವೀಕರಿಸಿದರು.

ಅತಿಕ್ರಮಣ ಹೋರಾಟಗಾರರ ವೇದಿಕೆಯ ಸುಲೇಮಾನ್ ಸಾಬ್, ಅಬ್ದುಲ್ ಖಯ್ಯೂಮ್, ರಿಜ್ವಾನ್, ಎಫ್.ಕೆ. ಮೊಗೇರ, ಇನಾಯತುಲ್ಲಾ ಶಾಬಂದ್ರಿ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X