Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಒಂದು ತಿಂಗಳ ಕಾಲ ಅರ್ಧದಷ್ಟು ಸೌದಿ ತೈಲ...

ಒಂದು ತಿಂಗಳ ಕಾಲ ಅರ್ಧದಷ್ಟು ಸೌದಿ ತೈಲ ಪೂರೈಕೆಯಲ್ಲಿ ವ್ಯತ್ಯಯ

ವಾರ್ತಾಭಾರತಿವಾರ್ತಾಭಾರತಿ17 Sept 2019 10:15 PM IST
share
ಒಂದು ತಿಂಗಳ ಕಾಲ ಅರ್ಧದಷ್ಟು ಸೌದಿ ತೈಲ ಪೂರೈಕೆಯಲ್ಲಿ ವ್ಯತ್ಯಯ

ದುಬೈ, ಸೆ. 17: ಕಳೆದ ವಾರಾಂತ್ಯದಲ್ಲಿ ಸೌದಿ ಅರೇಬಿಯದ ತೈಲ ಸ್ಥಾವರಗಳ ಮೇಲೆ ನಡೆದ ದಾಳಿಯಿಂದಾಗಿ ತೈಲ ಉತ್ಪಾದನೆಯು ಸುಮಾರು ಅರ್ಧಕ್ಕೆ ಇಳಿದಿರುವ ಹಿನ್ನೆಲೆಯಲ್ಲಿ, ಒಂದು ತಿಂಗಳ ಕಾಲ ಸೌದಿ ತೈಲ ಪೂರೈಕೆಯಲ್ಲಿ ದಿನಕ್ಕೆ ಸುಮಾರು 30 ಲಕ್ಷ ಬ್ಯಾರೆಲ್ ಖೋತಾವಾಗಲಿದೆ.

ನಷ್ಟವಾಗಿರುವ ಉತ್ಪಾದನೆಯನ್ನು ಮರಳಿ ಗಳಿಸಲು ‘ಒಪೆಕ್’ ಸಂಘಟನೆಯ ಪ್ರಮುಖ ದೇಶ ಸೌದಿ ಅರೇಬಿಯಕ್ಕೆ ಯಾವಾಗ ಸಾಧ್ಯವಾಗಬಹುದು ಎಂಬ ಬಗ್ಗೆ ಜಾಗತಿಕ ಮಾರುಕಟ್ಟೆಯಲ್ಲಿ ಅಸ್ಥಿರತೆ ನೆಲೆಸಿರುವ ಹಿನ್ನೆಲೆಯಲ್ಲಿ, ಮಂಗಳವಾರ ತೈಲ ಬೆಲೆಯಲ್ಲಿ ಕೊಂಚ ಕಡಿತವಾದ ಬೆನ್ನಿಗೇ ‘ಎಸ್ ಆ್ಯಂಡ್ ಪಿ ಪ್ಲಾಟ್ಸ್’ ಸಂಸ್ಥೆ ಹೇಳಿದೆ.

ಜಗತ್ತಿನ ಅತಿ ದೊಡ್ಡ ತೈಲ ಸಂಸ್ಕರಣೆ ಸ್ಥಾವರ ಅಬ್ಕಾಯಿಕ್ ಮತ್ತು ಖುರೈಸ್ ತೈಲ ಕ್ಷೇತ್ರದ ಮೇಲೆ ಶನಿವಾರ ನಡೆದ ಡ್ರೋನ್ ದಾಳಿಯ ಬಳಿಕ, ದಿನಕ್ಕೆ 57 ಲಕ್ಷ ಬ್ಯಾರೆಲ್ ತೈಲ ಉತ್ಪಾದನೆ ಕುಂಠಿತಗೊಂಡಿದೆ. ಇದು ಜಾಗತಿಕ ಉತ್ಪಾದನೆಯ 6 ಶೇಕಡದಷ್ಟಾಗುತ್ತದೆ.

‘‘ಈ ಹಂತದಲ್ಲಿ, ಕನಿಷ್ಠ ಒಂದು ತಿಂಗಳ ಕಾಲ ದಿನಕ್ಕೆ ಸುಮಾರು 30 ಲಕ್ಷ ಬ್ಯಾರೆಲ್ ಸೌದಿ ಅರೇಬಿಯ ತೈಲ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಹುದು ಎಂದನಿಸುತ್ತದೆ’’ ಎಂದು ‘ಎಸ್ ಆ್ಯಂಡ್ ಪಿ ಪ್ಲಾಟ್ಸ್’ ವರದಿಯೊಂದರಲ್ಲಿ ಹೇಳಿದೆ.

ಸೌದಿ ಅರೇಬಿಯವು ದಿನಕ್ಕೆ ಸುಮಾರು 99 ಲಕ್ಷ ಬ್ಯಾರೆಲ್ ತೈಲವನ್ನು ಉತ್ಪಾದಿಸುತ್ತದೆ ಹಾಗೂ ಈ ಪೈಕಿ ಸುಮಾರು 70 ಲಕ್ಷ ಬ್ಯಾರೆಲ್ ತೈಲವನ್ನು ರಫ್ತು ಮಾಡುತ್ತದೆ.

► ನಮಗೆ ಮಧ್ಯಪ್ರಾಚ್ಯದ ತೈಲ ಅಗತ್ಯವಿಲ್ಲ: ಟ್ರಂಪ್

ಅಮೆರಿಕ ಈಗ ದೊಡ್ಡ ತೈಲ ಉತ್ಪಾದಕ ದೇಶವಾಗಿದ್ದು, ಅದಕ್ಕೆ ಮಧ್ಯ ಪ್ರಾಚ್ಯದ ತೈಲ ಅಗತ್ಯವಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೋಮವಾರ ಹೇಳಿದ್ದಾರೆ.

‘‘ಒಟ್ಟಾರೆಯಾಗಿ, ನಾವು ಈಗಲೂ ಸ್ವಲ್ಪ ತೈಲವನ್ನು ಆಮದು ಮಾಡುತ್ತಿದ್ದೇವೆ ಹಾಗೂ ಜಾಗತಿಕ ಮಾರುಕಟ್ಟೆಯ ಪರಿಣಾಮಗಳು ನಮಗೆ ತಟ್ಟುವುದಿಲ್ಲ’’ ಎಂದು ಅವರು ಟ್ವೀಟ್ ಮಾಡಿದ್ದಾರೆ.

► ತನಿಖೆಯಲ್ಲಿ ಭಾಗವಹಿಸುವಂತೆ ಜಾಗತಿಕ ಪರಿಣತರಿಗೆ ಸೌದಿ ಕರೆ

  ತೈಲ ಸ್ಥಾವರಗಳ ಮೇಲೆ ನಡೆದ ದಾಳಿಯ ತನಿಖೆಯಲ್ಲಿ ಭಾಗವಹಿಸುವಂತೆ ಸೌದಿ ಅರೇಬಿಯವು ವಿಶ್ವಸಂಸ್ಥೆಯ ಪರಿಣತರು ಸೇರಿದಂತೆ ಅಂತರ್‌ರಾಷ್ಟ್ರೀಯ ಪರಿಣತರನ್ನು ಆಹ್ವಾನಿಸುತ್ತದೆ ಹಾಗೂ ಈ ದಾಳಿಯ ಹಿಂದೆ ಇರುವವರನ್ನು ಖಂಡಿಸುವಂತೆ ಜಗತ್ತಿಗೆ ಕರೆ ನೀಡುತ್ತದೆ ಎಂದು ಸೌದಿ ಅರೇಬಿಯದ ವಿದೇಶ ಸಚಿವಾಲಯ ಸೋಮವಾರ ಹೇಳಿದೆ.

ದಾಳಿಯಲ್ಲಿ ಇರಾನ್‌ನ ಶಸ್ತ್ರಗಳನ್ನು ಬಳಸಲಾಗಿದೆ ಎನ್ನುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ವಿದೇಶ ಸಚಿವಾಲಯದ ಹೇಳಿಕೆಯೊಂದು ತಿಳಿಸಿದೆ.

‘‘ತನ್ನ ಜಮೀನು ಮತ್ತು ಜನರನ್ನು ರಕ್ಷಿಸುವ ಹಾಗೂ ಈ ದಾಳಿಗಳಿಗೆ ಪ್ರತಿಕ್ರಿಯಿಸುವ ಸಾಮರ್ಥ್ಯವನ್ನು ಸೌದಿ ಅರೇಬಿಯ ಹೊಂದಿದೆ’’ ಎಂದು ಅದು ಹೇಳಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X