Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ವಿನೇಶ್ ಪೋಗಟ್ ಪ್ರಶಸ್ತಿ ಕನಸು ಭಗ್ನ

ವಿನೇಶ್ ಪೋಗಟ್ ಪ್ರಶಸ್ತಿ ಕನಸು ಭಗ್ನ

► ವಿಶ್ವ ಕುಸ್ತಿ ಚಾಂಪಿಯನ್‌ಶಿಪ್ ► ಮೊದಲ ಸುತ್ತಿನಲ್ಲೇ ಹಾಲಿ ಚಾಂಪಿಯನ್ ಮುಕೆಡಾ ವಿರುದ್ಧ ಸೋಲು

ವಾರ್ತಾಭಾರತಿವಾರ್ತಾಭಾರತಿ17 Sept 2019 11:24 PM IST
share
ವಿನೇಶ್ ಪೋಗಟ್ ಪ್ರಶಸ್ತಿ ಕನಸು ಭಗ್ನ

ಕಝಖ್‌ಸ್ತಾನ, ಸೆ.17: ಭಾರತದ ಸ್ಟಾರ್ ಕುಸ್ತಿಪಟು ವಿನೇಶ್ ಪೋಗಟ್ ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಮಂಗಳವಾರ ಹಾಲಿ ಚಾಂಪಿಯನ್ ಜಪಾನ್‌ನ ಮಾಯು ಮುಕೈಡಾ ವಿರುದ್ಧ 0-7 ಅಂತರದಿಂದ ಸೋಲುಣ್ಣುವ ಮೂಲಕ ಪ್ರಶಸ್ತಿ ಗೆಲ್ಲುವ ಸ್ಪರ್ಧೆಯಿಂದ ಹೊರ ನಡೆದರು.

ವಿನೇಶ್ ಈ ಋತುವಿನಲ್ಲಿ ಸತತ ಎರಡನೇ ಬಾರಿ ಜಪಾನ್ ಕುಸ್ತಿಪಟು ಮುಕೈಡಾಗೆ ಸೋತಿದ್ದಾರೆ. ಚೀನಾದಲ್ಲಿ ನಡೆದ ಏಶ್ಯನ್ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿಯ ವಿಶ್ವ ಚಾಂಪಿಯನ್ ಮುಕೈಡಾಗೆ ವಿನೇಶ್ ಶರಣಾಗಿದ್ದರು.

ವಿನೇಶ್ ಕಾಮನ್‌ವೆಲ್ತ್ ಗೇಮ್ಸ್ ಹಾಗೂ ಏಶ್ಯನ್ ಗೇಮ್ಸ್‌ನಲ್ಲಿ ಚಾಂಪಿಯನ್‌ಪಟ್ಟಕ್ಕೇರಿದ್ದು, ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಈತನಕ ಪದಕ ಜಯಿಸಿಲ್ಲ. ಮುಕೈಡಾ ಫೈನಲ್‌ಗೆ ಪ್ರವೇಶಿಸಿದ್ದಾರೆ. ಈ ಹಿನ್ನೆಲೆಯಲ್ಲಿ ವಿನೇಶ್‌ಗೆ ಕಂಚಿನ ಪದಕಕ್ಕಾಗಿ ಸ್ಪರ್ಧಿಸುವ ಅವಕಾಶ ಲಭಿಸಿದೆ. ಮಾತ್ರವಲ್ಲ ಟೋಕಿಯೊ ಒಲಿಂಪಿಕ್ಸ್ ಕ್ವಾಲಿಫಿಕೇಶನ್‌ಗೂ ಅರ್ಹತೆ ಪಡೆಯಬಹುದು.

ರಿಪಿಚೇಜ್ ಸುತ್ತಿನಲ್ಲಿ ವಿನೇಶ್ ಮೂವರು ಕುಸ್ತಿಪಟುಗಳನ್ನು ಸೋಲಿಸಿದರೆ ಕಂಚು ಗೆಲ್ಲಬಹುದು.

53 ಕೆಜಿ ವಿಭಾಗದಲ್ಲಿ ಸ್ಪರ್ಧೆಗಿಳಿದ ವಿನೇಶ್ ಮೊದಲ ಸುತ್ತಿನ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ವಿಜೇತೆ ಸೋಫಿಯಾ ಮ್ಯಾಟ್‌ಸನ್‌ರನ್ನು 13-0 ಅಂತರದಿಂದ ಮಣಿಸಿ ಶಾಕ್ ನೀಡಿದರು. ಆದರೆ, ಬಹುನಿರೀಕ್ಷಿತ ವಿಶ್ವದ ನಂ.2ನೇ ಕುಸ್ತಿಪಟು ಮುಕೈಡಾ ವಿರುದ್ಧ ಪಂದ್ಯದಲ್ಲಿ ತನ್ನ ಎಂದಿನ ಶೈಲಿಯ ದಾಳಿ ನಡೆಸಲು ವಿಫಲವಾದ ವಿನೇಶ್ 0-7 ಅಂತರದಿಂದ ಸೋತಿದ್ದಾರೆ.

ಮೊದಲ 60-70 ಸೆಕೆಂಡ್‌ನಲ್ಲಿ ಸ್ಕೋರ್ ದಾಖಲಾಗಲಿಲ್ಲ. ವಿನೇಶ್ ಮೊದಲಿಗೆ ಪಾಯಿಂಟ್ ಕಳೆದುಕೊಂಡರು. ಆ ನಂತರ ಪ್ರಾಬಲ್ಯ ಸಾಧಿಸಿದ ಜಪಾನ್ ಕುಸ್ತಿಪಟು 7-0 ಮುನ್ನಡೆ ಸಾಧಿಸಿದರು. ವಿನೇಶ್ ಪ್ರತಿದಾಳಿ ನಡೆಸುವ ಅಗತ್ಯವಿತ್ತು. ಆದರೆ, ಮುಕೈಡಾ ಅದಕ್ಕೆ ಅವಕಾಶವನ್ನೇ ನೀಡದೇ ಬಂಡೆಗಲ್ಲಿನಂತೆ ನಿಂತರು. ವಿನೇಶ್ ಅವರು ಮುಕೈಡಾ ಎಡಗಾಲನ್ನು ಗಟ್ಟಿಯಾಗಿ ಹಿಡಿದುಕೊಂಡಿದ್ದರು. ಆದರೆ, ಅದನ್ನು ಪಾಯಿಂಟ್ಸ್ ಆಗಿ ಪರಿವರ್ತಿಸಲು ವಿಫಲರಾದರು. ಕಳೆದ ತಿಂಗಳು ಪೊಲೆಂಡ್ ಓಪನ್ ಪ್ರಶಸ್ತಿ ಜಯಿಸಿದ್ದ ವಿನೇಶ್ ಆರು ಬಾರಿಯ ವಿಶ್ವ ಚಾಂಪಿಯನ್ ಸೋಫಿಯಾರನ್ನು ಸೋಲಿಸಿದ್ದರು. ಮತ್ತೊಂದು ಒಲಿಂಪಿಕ್ಸ್ ವಿಭಾಗದಲ್ಲಿ ಸೀಮಾ ಬಿಸ್ಲಾ(50ಕೆಜಿ)ಮೂರು ಬಾರಿಯ ಒಲಿಂಪಿಕ್ಸ್ ಪದಕ ವಿಜೇತೆ ಮರಿಯಾ ಸ್ಟ್ಯಾಡ್‌ನಿಕ್ ವಿರುದ್ಧ 2-9 ಅಂತರದಿಂದ ಸೋತಿದ್ದಾರೆ. ಅಝರ್‌ಬೈಜಾನ್‌ನ ಸೀಮಾ ಸೆಮಿ ಫೈನಲ್‌ಗೆ ತಲುಪಿದ್ದು, ಸೀಮಾ ಈಗಲೂ ಸ್ಪರ್ಧಾಕಣದಲ್ಲಿ ಉಳಿದಿದ್ದಾರೆ.

ಒಲಿಂಪಿಕ್ಸ್‌ಯೇತರ ವಿಭಾಗದಲ್ಲಿ 72 ಕೆಜಿ ಕ್ವಾಲಿಫಿಕೇಶನ್ ಪಂದ್ಯದಲ್ಲಿ ಕೋಮಲ್ ಗೋಲೆ ಟರ್ಕಿಯ ಬೆಸ್ಟೆ ಅಲ್ಟಗ್ ವಿರುದ್ಧ 1-4 ಅಂತರದಿಂದ ಸೋತಿದ್ದಾರೆ. 55 ಕೆಜಿ ವಿಭಾಗದಲ್ಲಿ ಲಲಿತಾ ಮಂಗೋಲಿಯದ ಬೊಲೊರ್ಟುಯಾ ಬಾಟ್ ಒಚಿರ್‌ಗೆ 3-10 ಅಂತರದಿಂದ ಹೀನಾಯವಾಗಿ ಶರಣಾದರು. ಬೊಲೊರ್ಟುಯಾ ಹಾಗೂ ಅಲ್ಟಗ್ ಕ್ವಾರ್ಟರ್ ಫೈನಲ್‌ನಲ್ಲಿ ಮುಗ್ಗರಿಸಿದ ಹಿನ್ನೆಲೆಯಲ್ಲಿ ಲಲಿತಾ ಹಾಗೂ ಕೋಮಲ್ ಚಾಂಪಿಯನ್‌ಶಿಪ್‌ನಿಂದ ಹೊರಗುಳಿದಿದ್ದಾರೆ. *ಗ್ರೀಕೋ-ರೋಮನ್ ವಿಭಾಗದಲ್ಲಿ ಭಾರತದ ಸವಾಲು ಅಂತ್ಯ

130 ಕೆಜಿ ರಿಪಿಚೇಜ್ ಸುತ್ತಿನಲ್ಲಿ ಇಸ್ಟೋನಿಯದ ಹೆಕಿ ನಬಿ ವಿರುದ್ಧ ನವೀನ್ ಸೋಲುಂಡಿದ್ದಾರೆ.ಈ ಮೂಲಕ ಗ್ರೀಕೊ-ರೋಮ್ ಶೈಲಿಯ ಕುಸ್ತಿವಿಭಾಗದಲ್ಲಿ ಭಾರತದ ಸವಾಲು ಅಂತ್ಯವಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X