Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾಜಿ ಕ್ರಿಕೆಟಿಗ ಚಂದ್ರಶೇಖರ್ ಆತ್ಮಹತ್ಯೆ...

ಮಾಜಿ ಕ್ರಿಕೆಟಿಗ ಚಂದ್ರಶೇಖರ್ ಆತ್ಮಹತ್ಯೆ ಹಿಂದೆ ಬೆಟ್ಟಿಂಗ್ ಜಾಲದ ಕರಿಛಾಯೆ: ಪೊಲೀಸರ ತನಿಖೆ

ವಾರ್ತಾಭಾರತಿವಾರ್ತಾಭಾರತಿ17 Sept 2019 11:34 PM IST
share
ಮಾಜಿ ಕ್ರಿಕೆಟಿಗ ಚಂದ್ರಶೇಖರ್ ಆತ್ಮಹತ್ಯೆ ಹಿಂದೆ ಬೆಟ್ಟಿಂಗ್ ಜಾಲದ ಕರಿಛಾಯೆ: ಪೊಲೀಸರ ತನಿಖೆ

ಚೆನ್ನೈ/ಮುಂಬೈ, ಸೆ.17: ತಮಿಳುನಾಡು ಪ್ರೀಮಿಯರ್ ಲೀಗ್(ಟಿಎನ್‌ಪಿಎಲ್)ದಿಢೀರನೇ ಭಾರತೀಯ ಕ್ರಿಕೆಟ್‌ನಲ್ಲಿ ವಿವಾದವನ್ನು ಸೃಷ್ಟಿಸಿದೆ. ಕಳೆದ ತಿಂಗಳು ಆತ್ಮಹತ್ಯೆ ಮಾಡಿಕೊಂಡಿರುವ ಟಿಎನ್‌ಪಿಎಲ್ ತಂಡದ ಮಾಲಕ, ಮಾಜಿ ಕ್ರಿಕೆಟಿಗ ವಿ.ಬಿ. ಚಂದ್ರಶೇಖರ್ ಅವರ ತಂಡ ಸೇರಿದಂತೆ ಹಲವು ತಂಡಗಳ ಮೇಲೆ ಬುಕ್ಕಿಗಳು ನಿಯಂತ್ರಣ ಸಾಧಿಸಿದ್ದಾರೆ ಎಂಬ ವರದಿ ಸೋಮವಾರ ಬಂದಿತ್ತು. ಈ ವರದಿಯಿಂದ ಚೆನ್ನೈ ಪೊಲೀಸರು ಎಚ್ಚೆತ್ತುಕೊಂಡಿದ್ದಾರೆ.

ಚಂದ್ರಶೇಖರ್ ಆತ್ಮಹತ್ಯೆ ಮಾಡಿಕೊಂಡ ಸಂದರ್ಭದಲ್ಲಿ ಚಂದ್ರಶೇಖರ್ ಅವರ ಆತ್ಮೀಯ ಮಿತ್ರರು ಹಾಗೂ ರಾಜ್ಯದ ಕ್ರಿಕೆಟಿಗರನ್ನು ವಿಚಾರಣೆ ನಡೆಸಿದಾಗ ಸಂಭಾವ್ಯ ಬೆಟ್ಟಿಂಗ್ ಜಾಲದ ಬಗ್ಗೆ ಮಾಹಿತಿ ಲಭಿಸಿತ್ತು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಕೆಲವರು ನೇರ ಸಂಬಂಧ ಹೊಂದಿರದೇ ಇದ್ದರೂ, ನಾವು ಕೆಲವು ಪ್ರಮುಖ ಅಂಶವನ್ನು ದಾಖಲಿಸಿಕೊಂಡಿದ್ದು, ಮುಂಬೈ ಹಾಗೂ ದಿಲ್ಲಿಯಲ್ಲಿರುವ ನಮ್ಮ ಸಹೋದ್ಯೋಗಿಗಳಿಗೆ ಈ ಮಾಹಿತಿಯನ್ನು ರವಾನಿಸಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

ಬಿಸಿಸಿಐನ ಭ್ರಷ್ಟಾಚಾರ ನಿಗ್ರಹ ಘಟಕ(ಎಸಿಯು)ದಿಂದ ವಿವರವಾದ ಪ್ರಾಥಮಿಕ ತನಿಖೆಗೆ ಒಳಗಾಗಿರುವ ಬೆಟ್ಟಿಂಗ್ ಹಗರಣಕ್ಕೆ ಸಂಬಂಧಿಸಿ ತಮಿಳುನಾಡು ಕ್ರಿಕೆಟ್ ಸಂಸ್ಥೆ(ಟಿಎನ್‌ಸಿಎ) ಹಲವಾರು ಅನಾಮಧೇಯ ಪತ್ರಗಳನ್ನು ಸ್ವೀಕರಿಸಿದೆ. ವಾಟ್ಸ್‌ಆ್ಯಪ್ ಗ್ರೂಪ್‌ಗಳಲ್ಲಿ ಹರಿದಾಡುತ್ತಿರುವ ಕೆಲವು ಹೆಸರುಗಳು ಪ್ರಕರಣದತ್ತ ನಮ್ಮ ದೃಷ್ಟಿ ಹರಿಸುವಂತೆ ಮಾಡಿದೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.

ನಿರ್ದಿಷ್ಟ ಆಟಗಾರರನ್ನು ಬುಕ್ಕಿಗಳು ಸಂಪರ್ಕಿಸಿದ್ದಾರೆ. ಆ ವಿಚಾರವನ್ನು ಆಟಗಾರರು ನಮ್ಮ ಗಮನಕ್ಕೆ ತಂದಿದ್ದಾರೆ ಎಂದು ದೃಢಪಡಿಸಿರುವ ಎಸಿಯು, ಯಾವುದೇ ತಂಡದ ಆಟಗಾರ ಹಾಗೂ ಮಾಲಕರನ್ನು ತನಿಖೆಗೆ ಒಳಪಡಿಸಿಲ್ಲ ಎಂದಿದೆ.

ಆಟಗಾರರು ನೀಡಿದ ಮಾಹಿತಿಯ ಮೇರೆಗೆ ಆಟಗಾರರನ್ನು ಸಂಪರ್ಕಿಸಿದ ವ್ಯಕ್ತಿಯನ್ನು ಹುಡುಕಲು ಯತ್ನಿಸುತ್ತಿದ್ದೇವೆ. ಈ ಕುರಿತು ಮಾಹಿತಿ ನೀಡಿರುವ ಆಟಗಾರರನ್ನು ತನಿಖೆಗೆ ಒಳಪಡಿಸುವುದಿಲ್ಲ ಎಂದು ಎಸಿಯು ಮುಖ್ಯಸ್ಥ ಅಜಿತ್ ಸಿಂಗ್ ತಿಳಿಸಿದ್ದಾರೆ.

ನಾವು ದೂರನ್ನು ಸ್ವೀಕರಿಸಿದ ತಕ್ಷಣವೇ ತ್ರಿಸದಸ್ಯ ಸಮಿತಿಯನ್ನು ತನಿಖೆಗಾಗಿ ನೇಮಿಸಿದ್ದೇವೆ. ನಮಗೆ ಲಭಿಸಿದ ಮಾಹಿತಿ ಸಲ್ಲಿಕೆಯಾಗುವ ತನಕ ವಿವರವನ್ನು ನೀಡಲಾರೆವು. ಸಮಿತಿಯಲ್ಲಿ ಪೊಲೀಸ್ ಅಧಿಕಾರಿ ಹಾಗೂ ಹಿರಿಯ ವಕೀಲರಿದ್ದಾರೆ. ಆಗಸ್ಟ್ 15ರಂದು ನಾಲ್ಕನೇ ಆವೃತ್ತಿಯ ಟಿಎನ್‌ಪಿಎಲ್ ಫೈನಲ್ ಪಂದ್ಯ ನಡೆದ ಮರುದಿನವೇ ಸಮಿತಿ ರಚಿಸಲಾಗಿತ್ತು. ಮುಂದಿನ ವಾರ ವರದಿ ಕೈಸೇರುವ ನಿರೀಕ್ಷೆಯಲ್ಲಿದ್ದೇವೆ ಎಂದು ಟಿಎನ್‌ಪಿಎಲ್ ಆಡಳಿತ ಮಂಡಳಿಯ ಅಧ್ಯಕ್ಷ ರಾಮನ್ ಹೇಳಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X