Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸರ್ಕಾರಿ ಕೊಠಡಿಗಳಲ್ಲಿಯೇ...

ಸರ್ಕಾರಿ ಕೊಠಡಿಗಳಲ್ಲಿಯೇ ಉಳಿದುಕೊಂಡಿವೆಯೇ ನೆರೆ ದೇಣಿಗೆ ಸಾಮಗ್ರಿಗಳು !?

ವಾರ್ತಾಭಾರತಿವಾರ್ತಾಭಾರತಿ17 Sept 2019 11:51 PM IST
share
ಸರ್ಕಾರಿ ಕೊಠಡಿಗಳಲ್ಲಿಯೇ ಉಳಿದುಕೊಂಡಿವೆಯೇ ನೆರೆ ದೇಣಿಗೆ ಸಾಮಗ್ರಿಗಳು !?

ಶಿವಮೊಗ್ಗ, ಸೆ. 17: ನೆರೆ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ, ನಾಗರಿಕರು ಹಾಗೂ ವಿವಿಧ ಸಂಘಸಂಸ್ಥೆಗಳು ಸ್ಥಳೀಯಾಡಳಿತಗಳಿಗೆ ನೀಡಿದ್ದ ಸಾಮಗ್ರಿಗಳು ಜಿಲ್ಲೆಯ ಕೆಲವೆಡೆ ಸರ್ಕಾರಿ ಕಚೇರಿಗಳ ಕೊಠಡಿಗಳಲ್ಲಿಯೇ ಉಳಿದುಕೊಂಡಿರುವ ದೂರುಗಳು ಕೇಳಿಬರುತ್ತಿದೆ. 

ಪ್ರಸ್ತುತ ಜಿಲ್ಲೆಯಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದೆ. ಉಕ್ಕಿ ಹರಿಯುತ್ತಿದ್ದ ನದಿ, ಹಳ್ಳಕೊಳ್ಳಗಳು ಶಾಂತವಾಗಿವೆ. ಪ್ರವಾಹ ಸ್ಥಿತಿ ಸಂಪೂರ್ಣ ನಿಯಂತ್ರಣದಲ್ಲಿದೆ. ಸಂತ್ರಸ್ತರಿಗೆ ತೆರೆಯಲಾಗಿದ್ದ ಪುನರ್ವಸತಿ ಕೇಂದ್ರಗಳು ಈಗ ಇಲ್ಲವಾಗಿವೆ.  

ಇದರಿಂದ ತಾಲೂಕು ಹಾಗೂ ಸ್ಥಳೀಯಾಡಳಿತಗಳಿಗೆ ನಾಗರೀಕರು ನೀಡಿದ್ದ ನೆರವಿನ ದೇಣಿಗೆ, ಕಚೇರಿಗಳ ಕೊಠಡಿಗಳಲ್ಲಿಯೇ ಉಳಿದುಕೊಂಡಿದೆ. ಕೆಲ ಸಾಮಗ್ರಿಗಳು ಹಾಳಾಗುವ ಸ್ಥಿತಿಗೆ ತಲುಪಿದೆ. ಯಾವ ರೀತಿಯಲ್ಲಿ ಸಾಮಗ್ರಿ ವಿಲೇ ಮಾಡಬೇಕು ಎಂಬುವುದು ಅಧಿಕಾರಿಗಳಿಗೆ ತೋಚದಂತಾಗಿದೆ ಎಂಬ ಮಾಹಿತಿಗಳು ಕೇಳಿಬರುತ್ತಿವೆ. 

ಈ ಹಿಂದೆ ತಾಲೂಕು ಕಚೇರಿ ಹಾಗೂ ಸ್ಥಳೀಯಾಡಳಿತಗಳಿಗೆ ನಾಗರಿಕರು, ಸಂಘಸಂಸ್ಥೆಗಳು ನೀಡುತ್ತಿದ್ದ ನೆರವಿನ ಸಾಮಗ್ರಿಗಳನ್ನು ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಹಾಗೂ ಪುನರ್ವಸತಿ ಕೇಂದ್ರಗಳಲ್ಲಿ ತಂಗಿದ್ದ ಸಂತ್ರಸ್ತರಿಗೆ ವಿತರಿಸಿದ್ದರು. ಆದರೆ ಪುನರ್ವಸತಿ ಕೇಂದ್ರಗಳನ್ನು ಮುಚ್ಚಿದ ನಂತರ ಹಾಗೂ ಪ್ರವಾಹ ಸ್ಥಿತಿ ನಿಯಂತ್ರಣಗೊಂಡ ತದನಂತರ, ಕೆಲವೆಡೆ ಸಂಗ್ರಹವಾದ ನೆರವಿನ ಸಾಮಗ್ರಿಗಳು ಸರ್ಕಾರಿ ಕಚೇರಿಗಳ ಕೊಠಡಿಗಳಲ್ಲಿಯೇ ಉಳಿದುಕೊಂಡಿವೆ ಎಂಬ ಮಾಹಿತಿಗಳು ಆಡಳಿತ ವಲಯದಿಂದ ಕೇಳಿಬರುತ್ತಿದೆ. 

ಇದಕ್ಕೆ ನಿದರ್ಶನ ಎಂಬಂತೆ, ಶಿವಮೊಗ್ಗ ತಹಶೀಲ್ದಾರ್ ಕಚೇರಿಯಲ್ಲಿ ತೆರೆಯಲಾಗಿದ್ದ ವಿಪತ್ತು ಪರಿಹಾರ ಸ್ವೀಕೃತಿ ಕೇಂದ್ರದಲ್ಲಿ ನಾಗರಿಕರು ನೀಡಿದ್ದ ಕೆಲ ದೇಣಿಗೆ ಸಾಮಗ್ರಿಗಳು ವಿಲೇಯಾಗದೆ ಹಾಗೆಯೇ ಉಳಿದುಕೊಂಡಿವೆ. ಅಕ್ಕಿ, ಎಣ್ಣೆ ಪ್ಯಾಕೆಟ್, ಬೆಡ್‍ಶೀಟ್, ಬಿಸ್ಕೇಟ್ ಮತ್ತೀತರ ವಸ್ತುಗಳು ಕೊಠಡಿಯಲ್ಲಿವೆ ಎಂಬ ಮಾಹಿತಿ ಕೇಳಿಬಂದಿದೆ. 

ಉಳಿದಂತೆ ನೆರೆ ಸಾಮಗ್ರಿಗಳ ವಿತರಣೆಯಲ್ಲಿ ಶಿವಮೊಗ್ಗ ಮಹಾನಗರ ಪಾಲಿಕೆ ಆಡಳಿತ ಮುಂದಿದೆ. ಆಯುಕ್ತರಾಗಿದ್ದ ಚಾರುಲತಾ ಸೋಮಲ್‍ರವರ ಕಾಳಜಿಯ ಕಾರಣದಿಂದ ದೊಡ್ಡ ಪ್ರಮಾಣದಲ್ಲಿ ಸಂಗ್ರಹವಾಗಿದ್ದ ಸಾಮಗ್ರಿಗಳು ನೆರೆ ಸಂತ್ರಸ್ತರಿಗೆ ತಲುಪಿವೆ. ಲಭ್ಯ ಮಾಹಿತಿ ಅನುಸಾರ ಪಾಲಿಕೆಯಲ್ಲಿ ಗ್ಯಾಸ್ ಸ್ಟೌವ್‍ಗಳು ಉಳಿದಿವೆ. ಅರ್ಹರನ್ನು ಗುರುತಿಸುವ ಕಾರ್ಯ ನಡೆಯುತ್ತಿದ್ದು, ವಿತರಣೆ ಇನ್ನಷ್ಟೆ ಆಗಬೇಕಾಗಿದೆ ಎಂದು ತಿಳಿದುಬಂದಿದೆ. 

ಗಮನಹರಿಸಲಿ: ಜಿಲ್ಲೆಯ ತಾಲೂಕು ಹಾಗೂ ಸ್ಥಳೀಯಾಡಳಿತಗಳಲ್ಲಿ ತೆರೆಯಲಾಗಿದ್ದ ಪರಿಹಾರ ಸ್ವೀಕೃತಿ ಕೇಂದ್ರಗಳಲ್ಲಿ ನಾಗರೀಕರು ನೀಡಿದ್ದ ನೆರವಿನ ಸಾಮಗ್ರಿಗಳು ಸಮರ್ಪಕವಾಗಿ ವಿಲೇ ಮಾಡಲಾಗಿದೆಯೇ? ಒಂದು ವೇಳೆ ಸಾಮಗ್ರಿಗಳು ಉಳಿದುಕೊಂಡಿದ್ದರೆ, ಅವುಗಳ ಸದ್ಭಳಕೆ ಮಾಡುವತ್ತ ಜಿಲ್ಲಾಡಳಿತ ಅಗತ್ಯ ಗಮನಹರಿಸಬೇಕಾಗಿದೆ. 

ಭಾರೀ ಅನಾಹುತ: ಕಳೆದ ತಿಂಗಳ ಆಗಸ್ಟ್ ಮೊದಲೆರೆಡು ವಾರದಲ್ಲಿ, ಶಿವಮೊಗ್ಗ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಬಿದ್ದ ಧಾರಾಕಾರ ಮಳೆಯಿಂದ ಹಲವೆಡೆ ಪ್ರವಾಹ ಸ್ಥಿತಿ ಉಂಟಾಗಿತ್ತು. ಶಿವಮೊಗ್ಗ ನಗರದಲ್ಲಿ ಹಲವು ಬಡಾವಣೆಗಳು ಜಲಾವೃತವಾಗಿದ್ದವು. ನೂರಾರು ಮನೆಗಳು ಕುಸಿದು ಬಿದ್ದಿದ್ದವು. ಸಾವಿರಾರು ಜನ ಸಂತ್ರಸ್ತರಾಗಿದ್ದರು. 

ಮತ್ತೊಂದೆಡೆ, ಸಂಕಷ್ಟದಲ್ಲಿದ್ದ ಸಂತ್ರಸ್ತರಿಗೆ ಆಡಳಿತ ವಲಯ ಮಾತ್ರವಲ್ಲದೆ ಸಾರ್ವಜನಿಕ ವಲಯದಿಂದ ನೆರವಿನ ಮಹಾಪೂರವೇ ಹರಿದುಬಂದಿತ್ತು. ತಾಲೂಕು ಕಚೇರಿ, ಮಹಾನಗರ ಪಾಲಿಕೆಯಲ್ಲಿ ಪರಿಹಾರ ಸ್ವೀಕೃತಿ ಕೇಂದ್ರಗಳನ್ನು ತೆರೆಯಲಾಗಿತ್ತು. ಈ ಕೇಂದ್ರಗಳಿಗೆ ನಾಗರೀಕರು-ಸಂಘಸಂಸ್ಥೆಗಳು ಬಟ್ಟೆ, ಔಷಧಿ, ಬೆಡ್‍ಶೀಟ್, ಚಾಪೆ ಮತ್ತೀತರ ಸಾಮಗ್ರಿಗಳನ್ನು ದೇಣಿಗೆ ನೀಡಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X