Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ವಿದ್ಯಾರ್ಥಿಗಳಿಗಾಗಿ ಮೂಲ ವಿಜ್ಞಾನ

ವಿದ್ಯಾರ್ಥಿಗಳಿಗಾಗಿ ಮೂಲ ವಿಜ್ಞಾನ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ18 Sept 2019 12:02 AM IST
share
ವಿದ್ಯಾರ್ಥಿಗಳಿಗಾಗಿ ಮೂಲ ವಿಜ್ಞಾನ

‘‘ಮೂಲ ವಿಜ್ಞಾನವನ್ನು ನಿರ್ಲಕ್ಷಿಸಿ ತಂತ್ರಜ್ಞಾನವನ್ನು ಪೋಷಿಸುವುದೆಂದರೆ, ಕಟ್ಟದ ಬುನಾದಿಯ ವೆಚ್ಚದಲ್ಲಿ ಕಡಿತ ಮಾಡಿ, ಮಹಡಿಗಳ ಸಂಖ್ಯೆ ಹೆಚ್ಚಿಸಿದಂತೆ. ಅಂತಹ ಸೌಧ ಕುಸಿದು ಬೀಳಲು ಹೆಚ್ಚು ಕಾಲ ಬೇಕಾಗಿಲ್ಲ’’ ನೊಬೆಲ್ ಪ್ರಶಸ್ತಿ ವಿಜೇತ ಬ್ರಿಟಿಷ್ ವಿಜ್ಞಾನಿ ಸರ್ ಜಾರ್ಜ್ ಪೋರ್ಟರ್ ಅವರ ಮಾತು ಇದು. ಇಂದು ತಂತ್ರಜ್ಞಾನಗಳಿಗೆ ಸಿಕ್ಕಿದಷ್ಟು ಆದ್ಯತೆ ಮೂಲ ವಿಜ್ಞಾನಕ್ಕೆ ಸಿಗದೇ ಇರುವ ಕಾಲ. ಈ ನಿಟ್ಟಿನಲ್ಲಿ ಈತನ ಮಾತುಗಳನ್ನು ನಾವು ಅಗತ್ಯವಾಗಿ ನೆನೆಯಬೇಕಾಗಿದೆ. ಈ ಕಾರಣಕ್ಕಾಗಿ ಮೂಲ ವಿಜ್ಞಾನಕ್ಕೆ ಆದ್ಯತೆ ನೀಡುವ ದೃಷ್ಟಿಯಿಂದ ನವಕರ್ನಾಟಕ ಪ್ರಕಾಶನವು ‘ಮೂಲ ವಿಜ್ಞಾನ- ಭಿನ್ನವಾಗಿ ಯೋಚಿಸಿ’ ಸರಣಿ ಪುಸ್ತಕ ಮಾಲೆಯನ್ನು ಹೊರತಂದಿದೆ. ಅದರ ಮೊದಲ ಭಾಗ ಭೌತ ವಿಜ್ಞಾನ. ಪ್ರೊ. ಡಿ. ಆರ್. ಬಳೂರಗಿ ಅವರು ಈ ಕೃತಿಯನ್ನು ಬರೆದಿದ್ದಾರೆ. ವಿಭಿನ್ನ ಚಿಂತನೆಗಳ ಮೂಲ ವಿಜ್ಞಾನವನ್ನು ಪ್ರಾಥಮಿಕ, ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಹಾಗೂ ಶಿಕ್ಷಕರಿಗೆ ಬೋಧನೆಗೆ ಉಪಯೋಗವಾಗುವಂತೆ ಸರಳವಾಗಿ ವಿವರಿಸುವ ಪುಸ್ತಕಗಳ ಮಾಲಿಕೆ ಇದು.

 ವಿಜ್ಞಾನವನ್ನು ತಳಮಟ್ಟದಲ್ಲಿಯೇ ಚೆನ್ನಾಗಿ ಗ್ರಹಿಸಿಕೊಂಡಾಗ ವಿದ್ಯಾರ್ಥಿಗೆ ಮುಂದೆ ವಿಜ್ಞಾನದ ಯಾವುದೇ ವಿಷಯ ಕಗ್ಗಂಟಾಗಿ ಕಾಣಿಸದೆ ಇನ್ನೂ ಹೆಚ್ಚು ಆಸಕ್ತಿದಾಯಕವೆನಿಸುವುದರಲ್ಲಿ ಸಂದೇಹವಿಲ್ಲ. ಇಂದು ವಿಜ್ಞಾನ-ತಂತ್ರಜ್ಞಾನಗಳಲ್ಲಿ, ಸಂಶೋಧನಾ ಕ್ಷೇತ್ರಗಳಲ್ಲಿ ಅಸಾಧಾರಣ ಪ್ರಗತಿ ಕಾಣಲು ಮೂಲ ವಿಜ್ಞಾನದ ಪರಿಕಲ್ಪನೆಗಳೇ ಕಾರಣ. ವಿದ್ಯಾರ್ಥಿಗಳಲ್ಲಿ ಮೂಡಬಹುದಾದ - ಏನು? ಯಾಕೆ? ಹೀಗೇಕೆ? ಎಂಬಂತಹ ಪ್ರಶ್ನೆಗಳಿಗೆ ಈ ಮಾಲಿಕೆಯಲ್ಲಿ ಉತ್ತರಗಳಿವೆ. ಈಗಾಗಲೇ 40 ಜನಪ್ರಿಯ ವಿಜ್ಞಾನ ಕೃತಿಗಳನ್ನು ಬರೆದಿರುವ ಪ್ರೊ. ಡಿ. ಆರ್. ಬಳೂರಗಿ, ಭೌತ ವಿಜ್ಞಾನದ ಪ್ರಾಧ್ಯಾಪಕರಾಗಿ, ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಬೆಳಗಾವಿ ವಿಜ್ಞಾನ ಕೇಂದ್ರದ ಸ್ಥಾಪಕ ನಿರ್ದೇಶಕರಾಗಿ, ಬಾಲವಿಜ್ಞಾನ ಪತ್ರಿಕೆಯ ಸಂಪಾದಕ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದರು. ಭೌತ ವಿಜ್ಞಾನದ ಪರಿಕಲ್ಪನೆಗಳ ಕುರಿತಂತೆ ಪ್ರಾಥಮಿಕ ಮಾಹಿತಿಯನ್ನು ಸರಳವಾಗಿ, ವಿದ್ಯಾರ್ಥಿಗಳಿಗೆ ಅರ್ಥವಾಗುವಂತೆ ಈ ಕೃತಿಯಲ್ಲಿ ಅವರು ಮಂಡಿಸಿದ್ದಾರೆ.

ವಿಸ್ತೀರ್ಣ ಮತ್ತು ಗಾತ್ರ, ದ್ರವ್ಯರಾಶಿ ಮತ್ತು ತೂಕ, ಭಾರ ಮತ್ತು ಹಗುರ, ತೇಲುವುದು ಮತ್ತು ಮುಳುಗುವುದು, ಆರ್ಕಿಮಿಡೀಸ್ ಮತ್ತು ಚಿನ್ನದ ಕಿರೀಟ, ಶಕ್ತಿ ಮತ್ತು ಬಲ, ನ್ಯೂಟನ್ ಮತ್ತು ಜೌಲ್, ವೇಗ ಮತ್ತು ವೇಗೋತ್ಕರ್ಷ, ಸಂವೇಗ ಮತ್ತು ಆವೇಗ, ಗೆಲಿಲಿಯೋ ಮತ್ತು ಪೀಸಾದ ವಾಲುಗೋಪುರ, ಉಷ್ಣತೆ ಮತ್ತು ಉಷ್ಣ, ಶಬ್ದದ ತೀವ್ರತೆ ಮತ್ತು ಪ್ರಬಲತೆ, ಎವರೆಸ್ಟ್ ಶಿಖರ ಮತ್ತು ಅದರ ಎತ್ತರ, ತೂಕ ಮತ್ತು ತೂಕರಾಹಿತ್ಯ...ಹೀಗೆ 14 ವಿಷಯಗಳನ್ನು ಎತ್ತಿ ಅದನ್ನು ಸರಳವಾಗಿ ವಿವರಿಸಿದ್ದಾರೆ.

96 ಪುಟಗಳ ಈ ಕೃತಿಯ ಮುಖಬೆಲೆ 90 ರೂ. ಆಸಕ್ತರು 080-22161900 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X