Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ತಲಪಾಡಿ: ಭಿಕ್ಷಾಟಣೆ ನಿರತ ತಾಯಿ...

ತಲಪಾಡಿ: ಭಿಕ್ಷಾಟಣೆ ನಿರತ ತಾಯಿ ಮಕ್ಕಳನ್ನು ರಕ್ಷಣೆ

ಚೈಲ್ಡ್‌ಲೈನ್-ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾರ್ಯಾಚರಣೆ

ವಾರ್ತಾಭಾರತಿವಾರ್ತಾಭಾರತಿ18 Sept 2019 7:21 PM IST
share

ಮಂಗಳೂರು,ಸೆ.18: ನಗರ ಹೊರವಲಯದ ತಲಪಾಡಿ ಟೋಲ್‌ಗೇಟ್ ಬಳಿ ಹೆಣ್ಣು ಮಗುವನ್ನು ಹಿಡಿದುಕೊಂಡು ಭಿಕ್ಷೆ ಬೇಡುತ್ತಿದ್ದ ಸಕಲೇಶಪುರ ಮೂಲದ 35 ವರ್ಷ ಪ್ರಾಯದ ಸಂಗೀತಾ ಎಂಬಾಕೆಯನ್ನು ‘ಚೈಲ್ಡ್‌ಲೈನ್-1098’ ಮತ್ತು ಜಿಲ್ಲಾಮಕ್ಕಳ ರಕ್ಷಣಾ ಘಟಕದ ಸಿಬ್ಬಂದಿಯು ಬುಧವಾರ ರಕ್ಷಿಸಿದೆ. ಈ ತಾಯಿ-ಮಗುವಿನ ಜೊತೆಗೆ 2 ವರ್ಷ ಪ್ರಾಯದ ಗಂಡು ಮಗುವನ್ನು ಕೂಡ ರಕ್ಷಿಸಲಾಗಿದೆ.

ತಮಿಳುನಾಡು ಮೂಲದ ಮಹಿಳೆಯೊಂದು 3 ತಿಂಗಳ ಹೆಣ್ಣು ಮಗುವನ್ನು ಹಿಡಿದುಕೊಂಡು ತಲಪಾಡಿ ಟೋಲ್‌ಗೇಟ್ ಬಳಿ ಭಿಕ್ಷಾಟಣೆ ನಡೆಸುತ್ತಿದ್ದಾರೆ ಹಾಗೂ ಮಗು ಆಕೆಯದ್ದೇ ಎಂಬುದರ ಬಗ್ಗೆ ಸಂಶಯವಿದೆ ಎಂಬ ಸಾರ್ವಜನಿಕ ಮಾಹಿತಿಯ ಹಿನ್ನಲೆಯಲ್ಲಿ ಚೈಲ್ಡ್‌ಲೈನ್ ಮತ್ತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಯನ್ನೊಳಗೊಂಡ ತಂಡ ಸ್ಥಳಕ್ಕೆ ತೆರಳಿ ಸಂಗೀತಾ ಮತ್ತು ಇಬ್ಬರು ಮಕ್ಕಳನ್ನು ರಕ್ಷಿಸಿದೆ.

ನಗರದ ಬೋಂದೆಲ್ ಬಳಿ ಈ ಮಹಿಳೆಯು ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಈ ಸಂದರ್ಭ ಕಾವೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಯಿತು. ತಕ್ಷಣ ಪೊಲೀಸರು ಕಾರ್ಯಾಚರಣೆ ನಡೆಸಿ ಮಹಿಳೆಯ ಜೊತೆಗೆ ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಯ ಮುಂದೆ ಹಾಜರುಪಡಿಸಿದರು. ಮಹಿಳೆಯ ಬಳಿ ಸೂಕ್ತ ದಾಖಲೆಗಳು ಇಲ್ಲದ ಕಾರಣ ತಾಯಿಯ ಜೊತೆಗೆ ಮಕ್ಕಳಿಗೂ ಸ್ವಾಧಾರ ಕೇಂದ್ರದಲ್ಲಿ ಸಮಿತಿಯ ಆದೇಶದಂತೆ ಪುನರ್ವಸತಿಯನ್ನು ಕಲ್ಪಿಸಲಾಗಿದೆ.

ಕಾರ್ಯಾಚರಣೆಯಲ್ಲಿ ಚೈಲ್ಡ್‌ಲೈನ್‌ನ ದ.ಕ.ಜಿಲ್ಲಾ ಕೇಂದ್ರ ಸಂಯೋಜಕ ದೀಕ್ಷಿತ್ ಅಚ್ರಪ್ಪಾಡಿ, ಸದಸ್ಯರಾದ ಅಸುಂತಾ ಮತ್ತು ಆಶಾಲತಾ ಹಾಗೂ ಜಿಲ್ಲಾಮಕ್ಕಳ ರಕ್ಷಣಾ ಘಟಕದ ಸುರೇಖಾ, ಸಂಧ್ಯಾ, ಮಿಥುನ್ ಪಾಲ್ಗೊಂಡಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X