Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೂರು ಪದಗಳ ಅರ್ಥ ಹೊಮ್ಮಿಸುವ ಒಂದು...

ನೂರು ಪದಗಳ ಅರ್ಥ ಹೊಮ್ಮಿಸುವ ಒಂದು ಚಿತ್ರ: ಯಡಿಯೂರಪ್ಪ

ಚಿತ್ರಕಲಾ ಪರಿಷತ್ ನಲ್ಲಿ ನೆರೆ ಹಾವಳಿ ಕುರಿತ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ18 Sept 2019 8:05 PM IST
share
ನೂರು ಪದಗಳ ಅರ್ಥ ಹೊಮ್ಮಿಸುವ ಒಂದು ಚಿತ್ರ: ಯಡಿಯೂರಪ್ಪ

ಬೆಂಗಳೂರು, ಸೆ.18: ಮಾತಿನಲ್ಲಿ ಹೇಳಲಾಗದ ನೂರಾರು ಪದಗಳ ಅರ್ಥವನ್ನು ಒಂದು ಚಿತ್ರದ ಮೂಲಕ ಅಭಿವ್ಯಕ್ತಗೊಳಿಸಬಹುದಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬುಧವಾರ ನಗರದ ಚಿತ್ರಕಲಾ ಪರಿಷತ್ ನಲ್ಲಿ ಕರ್ನಾಟಕ ಫೋಟೋ ಜರ್ನಲಿಸ್ಟ್ ಅಸೋಸಿಯೇಶನ್‌ನಿಂದ ಆಯೋಜಿಸಿದ್ದ ನೂತನ ಸಂಘದ ಉದ್ಘಾಟನಾ ಸಮಾರಂಭ ಹಾಗೂ ಕರ್ನಾಟಕದಲ್ಲಿ ಇತ್ತೀಚಿಗೆ ನೆರೆ ಹಾವಳಿ ಕುರಿತ ಛಾಯಾಚಿತ್ರ ಪ್ರದರ್ಶನ ಉದ್ಘಾಟನೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ನೂರು ಪದಗಳ ಅರ್ಥವನ್ನು ಒಂದೇ ಒಂದು ಛಾಯಾಚಿತ್ರ ಹೇಳಬಲ್ಲದು. ಯಾರಿಂದಲೂ ವರ್ಣಿಸಲು ಸಾಧ್ಯವಾಗದ್ದನ್ನು ಚಿತ್ರದ ಮೂಲಕ ಅಭಿವ್ಯಕ್ತಿಪಡಿಸಬಹುದಾಗಿದೆ. ಅಲ್ಲದೆ, ಮಾತಿನಲ್ಲಿ ಹೇಳಲಾಗದಂತಹ ವಾಸ್ತವವನ್ನು ಚಿತ್ರದಿಂದ ತಿಳಿಸಬಹುದಾಗಿದೆ ಎಂದು ಅವರು ತಿಳಿಸಿದರು.

ಪ್ರತಿ ಜಿಲ್ಲೆಗಳಲ್ಲಿ ನೆರೆಯಿಂದಾದ ಪರಿಸ್ಥಿತಿಯನ್ನು ಅಭಿವ್ಯಕ್ತಿಸುತ್ತಿರುವ ಇಂತಹ ಛಾಯಾಚಿತ್ರಗಳನ್ನು ಪ್ರದರ್ಶಿಸುವ ಮೂಲಕ ನೆರೆಯ ಪರಿಸ್ಥಿತಿಯನ್ನು ಜನರಿಗೆ ಮುಟ್ಟಿಸಬಹುದಾಗಿದೆ. ಇಂತಹ ಪರಿಸ್ಥಿತಿಗಳನ್ನು ತಮ್ಮ ಕ್ಯಾಮರಾಗಳಲ್ಲಿ ಸೆರೆಡಿದಿರುವ ಛಾಯಾ ಚಿತ್ರಗ್ರಾಹಕರ ಸಾಮರ್ಥ್ಯ ಹಾಗೂ ಪರಿಸ್ಥಿತಿಯನ್ನು ನಾವು ಅರ್ಥ ಮಾಡಿಕೊಳ್ಳಬೇಕಿದೆ ಎಂದರು.

ಛಾಯಾಚಿತ್ರಗಳನ್ನು ಕ್ಲಿಕ್ಕಿಸಿರುವ ಪರಿಸ್ಥಿತಿಯು ಬಹಳ ಗಂಭೀರವಾಗಿದೆ. ಪ್ರವಾಹವನ್ನು ಲೆಕ್ಕಿಸದೆ, ಪ್ರಾಣದ ಹಂಗನ್ನು ತೊರೆದು ಛಾಯಾಚಿತ್ರಕಾರರು ಜನರು ನೆರೆಯಿಂದ ಅನುಭವಿಸುತ್ತಿರುವ ಸಂಕಷ್ಟಗಳನ್ನು ಹಾಗೂ ಪ್ರಕೃತಿ ವಿಕೋಪದ ಸ್ಥಿತಿಗತಿಗಳನ್ನು ಛಾಯಾಚಿತ್ರದ ಮೂಲಕ ಸರಕಾರ ಹಾಗೂ ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ನುಡಿದರು.

ಛಾಯಾಚಿತ್ರ ಪ್ರದರ್ಶನದಲ್ಲಿ ನೆರೆ-ಬರ ಪರಿಸ್ಥಿತಿಯನ್ನು ಒಳಗೊಂಡ ನೂರಕ್ಕೂ ಹೆಚ್ಚು ಛಾಯಾಚಿತ್ರಗಳನ್ನು ಪ್ರದರ್ಶಿಸಲಾಗಿತ್ತು. ಅವುಗಳಲ್ಲಿ ಪ್ರಮುಖವಾಗಿ ನೆರೆ ಪರಿಸ್ಥಿತಿಯನ್ನು ಬಿಂಬಿಸುವ ಛಾಯಾಚಿತ್ರಗಳನ್ನು ಒಳಗೊಂಡಿದ್ದವು. ಛಾಯಾಚಿತ್ರಗಳನ್ನು ಸೆರೆ ಹಿಡಿದಿದ್ದ ಅನೇಕ ಜಿಲ್ಲೆಗಳ ಛಾಯಾಚಿತ್ರ ಗ್ರಾಹಕರನ್ನು ಈ ವೇಳೆ ಸಂಘದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ತಾರಾ ಅನೂರಾಧ, ಚಿತ್ರಕಲಾ ಪರಿಷತ್‌ನ ಅಧ್ಯಕ್ಷ ಬಿ.ಎಲ್.ಶಂಕರ್, ಬಿಜೆಪಿ ಸಂಸದ ಕರಡಿ ಸಂಗಣ್ಣ ಸೇರಿದಂತೆ ಹಲವರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X