Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕದಿಕೆ ಟ್ರಸ್ಟ್‌ನ ಉತ್ತಮ ನೇಕಾರ...

ಕದಿಕೆ ಟ್ರಸ್ಟ್‌ನ ಉತ್ತಮ ನೇಕಾರ ಪ್ರಶಸ್ತಿಗೆ 72ರ ಹರೆಯದ ಮೋಹಿನಿ ಶೆಟ್ಟಿಗಾರ್ ಆಯ್ಕೆ

ಇಂದು ಕಿನ್ನಿಗೋಳಿಯಲ್ಲಿ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ18 Sept 2019 8:14 PM IST
share
ಕದಿಕೆ ಟ್ರಸ್ಟ್‌ನ ಉತ್ತಮ ನೇಕಾರ ಪ್ರಶಸ್ತಿಗೆ 72ರ ಹರೆಯದ ಮೋಹಿನಿ ಶೆಟ್ಟಿಗಾರ್ ಆಯ್ಕೆ

ಉಡುಪಿ, ಸೆ.18: ನಿರೀಕ್ಷೆಗಿಂತ ವೇಗವಾಗಿ ನಶಿಸುತ್ತಿರುವ ನೇಕಾರಿಕೆ ವೃತ್ತಿಯ ಪುನರುಜ್ಜೀವನಕ್ಕಾಗಿ ಶ್ರಮಿಸುತ್ತಿರುವ ಕಾರ್ಕಳದ ಕದಿಕೆ ಟ್ರಸ್ಟ್ ಕಳೆದೆರಡು ವರ್ಷಗಳಿಂದ ಕರಾವಳಿಯ ಉತ್ತಮ ನೇಕಾರರನ್ನು ಗುರುತಿಸಿ ಗೌರವಿಸಲು ನೀಡುತ್ತಿರುವ ‘ಉತ್ತಮ ನೇಕಾರ ಪುರಸ್ಕಾರ’ಕ್ಕೆ ಈ ಬಾರಿ ಮೋಹಿನಿ ಶೆಟ್ಟಿಗಾರ ಇವರನ್ನು ಆಯ್ಕೆ ಮಾಡಲಾಗಿದೆ. ತಮ್ಮ ವಿವಾಹದ ನಂತರ ಪತಿಯ ಮನೆಯಲ್ಲಿ ನೇಕಾರಿಕೆಯನ್ನು ಕಲಿತ ಮೋಹಿನಿ ಶೆಟ್ಟಿಗಾರ್, ಕಳೆದ 52 ವರ್ಷಗಳಿಂದ ನೇಕಾರಿಕೆಯನ್ನು ಬಹಳ ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಇವರು ನೇಯುವ ಸುಂದರವಾದ ಉಡುಪಿ ಸೀರೆಗಳು ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದಿವೆ.

ತಮ್ಮ ವಿವಾಹದ ನಂತರ ಪತಿಯ ಮನೆಯಲ್ಲಿ ನೇಕಾರಿಕೆಯನ್ನು ಕಲಿತ ಮೋಹಿನಿ ಶೆಟ್ಟಿಗಾರ್, ಕಳೆದ 52 ವರ್ಷಗಳಿಂದ ನೇಕಾರಿಕೆಯನ್ನು ಬಹಳ ಶ್ರದ್ಧೆಯಿಂದ ಮಾಡುತ್ತಿದ್ದಾರೆ. ಇವರು ನೇಯುವ ಸುಂದರವಾದ ಉಡುಪಿ ಸೀರೆಗಳು ಎಲ್ಲರಿಂದಲೂ ಮೆಚ್ಚುಗೆಯನ್ನು ಪಡೆದಿವೆ. 72ರ ಈ ಇಳಿವಯಸ್ಸಿನಲ್ಲೂ ಲವಲವಿಕೆಯಿಂದ ಕೆಲಸ ಮಾಡುತ್ತಾ ಸಹ ನೇಕಾರರಿಗೂ ಕೆಲಸದಲ್ಲಿ ಸಹಾಯ ಮಾಡುತ್ತಿದ್ದಾರೆ. ನೇಕಾರಿಕೆ ತರಬೇತಿ ಸಂದರ್ಭದಲ್ಲಿ ತಮ್ಮ ಜ್ಞಾನವನ್ನು ಪ್ರೀತಿಯಿಂದ ಕಿರಿಯರಿಗೆ ದಾರೆ ಎರೆದಿದ್ದಾರೆ. ಇತ್ತೀಚಿಗೆ ತಮ್ಮ ಮಗಳನ್ನು ಸಹ ನೇಕಾರಿಕೆ ಕೆಲಸಕ್ಕೆ ಸೇರುವಂತೆ ಪ್ರೇರೇಪಿಸಿದ್ದಾರೆ.

ಈ ಕಾಯಕ ಯೋಗಿಯನ್ನು ಗೌರವಿಸುವ ಕಾರ್ಯಕ್ರಮ ಕದಿಕೆ ಟ್ರಸ್ಟ್ ಹಾಗೂ ತಾಳಿಪಾಡಿ ನೇಕಾರರ ಸಂಘದ ವತಿಯಿಂದ ನಾಳೆ ಗುರುವಾರ ಅಪರಾಹ್ನ 12:00 ಗಂಟೆಗೆ ಕಿನ್ನಿಗೋಳಿಯ ನೇಕಾರ ಸಭಾಭವನದಲ್ಲಿ ನಡೆಯಲಿದೆ.

ಕಾರ್ಯಕ್ರಮದಲ್ಲಿ ಸನ್ಮಾನಿತಗೊಳ್ಳುವ ಇನ್ನೊಬ್ಬ ಕಾಯಕಯೋಗಿ ನೇಕಾರ 70ರ ಹರೆಯದ ಸಂಜೀವ ಶೆಟ್ಟಿಗಾರ್. ಎಂಟು ವರ್ಷಗಳ ಹಿಂದಿನವರೆಗೆ ದಿನಗೂಲಿ ನೌಕರಿಯಲ್ಲಿ ತೋಟಗಾರಿಕಾ ಕೆಲಸ ಮಾಡಿಕೊಂಡಿದ್ದ ಇವರು, ಮತ್ತೆ ಕೈಮಗ್ಗದ ಕೆಲಸಕ್ಕೆ ಮರಳಿದ್ದರು. ಕದಿಕೆ ಟ್ರಸ್ಟ್ ಹಾಗೂ ನೇಕಾರರ ಸಂಘದ ಸತತ ಪ್ರಯತ್ನದಿಂದ ಅವರು ತನ್ನ ಕುಲಕಸಬನ್ನು ಮತ್ತೆ ಪ್ರಾರಂಭಿಸಿದ್ದರು.

ಇವರು ಸ್ವಾಭಾವಿಕ ಬಣ್ಣವನ್ನು ಬಳಸಿ ಮಾಡುವ ಅಪರೂಪದ 80 ನಂ. ನೂಲಿನ ಸೀರೆಯನ್ನು ನೆಯ್ಯುತಿದ್ದಾರೆ. ಇದರಲ್ಲೂ ವಿವಿಧ ಬಣ್ಣಗಳ ಸಂಯೋಜನೆಯಲ್ಲಿ ಹಾಗೂ ವಿವಿಧ ವಿನ್ಯಾಸಗಳಲ್ಲಿ 80ನಂ. ಸೀರೆಯನ್ನು ತಯಾರಿಸುತಿದ್ದು, ಇದು ಕದಿಕೆ ಟ್ರಸ್ಟ್ ಮೂಲಕ ಭಾರೀ ಜನಪ್ರಿಯತೆಯನ್ನು ಪಡೆದುಕೊಂಡಿದೆ.

ಇದೀಗ ನಾಳೆ ಅವರನ್ನು ಕದಿಕೆ ಟ್ರಸ್ಟ್ ಹಾಗೂ ತಾಳಿಪಾಡಿ ನೌಕರರ ಸಂಘ ಜಂಟಿಯಾಗಿ ಸನ್ಮಾನಿಸಲಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X