Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಇಸ್ರೇಲ್ ಚುನಾವಣೆ: ಮತ್ತೆ ಅತಂತ್ರ...

ಇಸ್ರೇಲ್ ಚುನಾವಣೆ: ಮತ್ತೆ ಅತಂತ್ರ ಫಲಿತಾಂಶ

ಪ್ರಧಾನಿ ಬೆಂಜಮಿನ್ ನೆತನ್ಯಾಹುಗೆ ಹಿನ್ನಡೆ

ವಾರ್ತಾಭಾರತಿವಾರ್ತಾಭಾರತಿ18 Sept 2019 9:30 PM IST
share
ಇಸ್ರೇಲ್ ಚುನಾವಣೆ: ಮತ್ತೆ ಅತಂತ್ರ ಫಲಿತಾಂಶ

ಟೆಲ್ ಅವೀವ್ (ಇಸ್ರೇಲ್), ಸೆ. 18: ಇಸ್ರೇಲ್‌ನಲ್ಲಿ ಮಂಗಳವಾರ ನಡೆದ ಸಂಸದೀಯ ಚುನಾವಣೆಯ ಆಂಶಿಕ ಫಲಿತಾಂಶ ಬುಧವಾರ ಹೊರಬಿದ್ದಿದ್ದು, 91 ಶೇಕಡ ಮತಗಳ ಎಣಿಕೆ ಮುಗಿದಾಗ ಬೆನ್ನಿ ಗಾಂಟ್ಝ್ ಅವರ ಬ್ಲೂ ಆ್ಯಂಡ್ ವೈಟ್ ಪಕ್ಷದ ನೇತೃತ್ವದ ಕಹೋಲ್ ಲಾವನ್ ಒಕ್ಕೂಟವು ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಲಿಕುಡ್ ಪಕ್ಷಕ್ಕಿಂತ ಮುಂದಿದೆ.

ಸಂಸತ್ತು ‘ಕ್ನೆಸೆಟ್’ನಲ್ಲಿ ಬಹುಮತ ಪಡೆಯುವ ನಿಟ್ಟಿನಲ್ಲಿ ಯಾವುದೇ ಪಕ್ಷವು ಮುಂದುವರಿಯುತ್ತಿಲ್ಲ ಎನ್ನುವುದನ್ನು ಫಲಿತಾಂಶವು ತೋರಿಸಿದೆ.

ಲಭ್ಯವಾಗಿರುವ ಫಲಿತಾಶಂದ ಪ್ರಕಾರ, ಕಹೋಲ್ ಲಾವನ್ ಸಂಸತ್ತಿನ 120 ಸ್ಥಾನಗಳ ಪೈಕಿ 32ನ್ನು ಗೆದ್ದುಕೊಂಡಿದ್ದರೆ, ಲಿಕುಡ್ ಪಕ್ಷವು 31 ಸ್ಥಾನಗಳೊಂದಿಗೆ ಅದರ ಬೆನ್ನ ಹಿಂದೆಯೇ ಇದೆ.

ನೆತನ್ಯಾಹು ಅವರ ಬಲಪಂಥೀಯ ಮತ್ತು ಕಡು ಸಾಂಪ್ರದಾಯಿಕ ಪಕ್ಷಗಳ ಒಕ್ಕೂಟವು 55 ಸ್ಥಾನಗಳನ್ನು ಗಳಿಸಿದೆ. ಅದೇ ವೇಳೆ, ಬೆನ್ನಿ ಗಾಂಟ್ಝ್‌ರ ಮಧ್ಯ-ಎಡ ಪಕ್ಷಗಳ ಒಕ್ಕೂಟವು 56 ಸ್ಥಾನಗಳನ್ನು ಪಡೆದಿದೆ.

ಅವಿಗ್ಡರ್ ಲೈಬರ್‌ಮನ್ ಅವರ ಯಿಸ್ರೇಲ್ ಬೈಟೀನು ಪಕ್ಷವು 9 ಸ್ಥಾನಗಳಲ್ಲಿ ಮುಂದಿದೆ ಹಾಗೂ ಅದು ಮುಂದಿನ ಸರಕಾರದ ಕಿಂಗ್‌ಮೇಕರ್ ಆಗಬಹುದಾಗಿದೆ.

ಅವಿಗ್ಡರ್ ಲೈಬರ್‌ಮನ್ ಬುಧವಾರ ಬೆಳಗ್ಗೆ ಯಿಸ್ರೇಲ್ ಬೈಟೀನು, ಲಿಕುಡ್ ಮತ್ತು ಕಹೋಲ್ ಲಾವನ್ ಒಕ್ಕೂಟಗಳನ್ನು ಒಳಗೊಂಡ ‘ವಿಶಾಲ ಉದಾರವಾದಿ ಏಕತಾ ಸರಕಾರ’ವೊಂದರ ರಚನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಸಂಸತ್ತಿಗೆ ಪ್ರವೇಶ ಪಡೆದಿರುವ ಮೂರನೇ ಅತಿ ದೊಡ್ಡ ಘಟಕವೆಂದರೆ ‘ಜಾಯಿಂಟ್ ಲಿಸ್ಟ್ ಆಫ್ ಅರಬ್’ ಪಕ್ಷಗಳು. ಅವುಗಳು 13 ಸ್ಥಾನಗಳನ್ನು ಪಡೆದಿವೆ.

ಈ ವರ್ಷದ ಎಪ್ರಿಲ್‌ನಲ್ಲಿ ಸಂಸತ್ತಿಗೆ ನಡೆದ ಚುನಾವಣೆಯಲ್ಲೂ ಅತಂತ್ರ ಫಲಿತಾಂಶ ಬಂದಿತ್ತು. ಅಂದು ಸರಕಾರವೊಂದನ್ನು ರಚಿಸಲು ಬೆಂಜಮಿನ್ ನೆತನ್ಯಾಹು ವಿಫಲವಾದ ಹಿನ್ನೆಲೆಯಲ್ಲಿ, ಮೇ 30ರಂದು ಸ್ವತಃ ಸಂಸತ್ತು ತನ್ನನ್ನು ತಾನು ವಿಸರ್ಜನೆಗೊಳಿಸಿತ್ತು. ಅದರ ಪರಿಣಾಮವಾಗಿ ಮಂಗಳವಾರ ಮರುಚುನಾವಣೆ ನಡೆದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X