ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ: ಸಾಕ್ಷಿಗಳ ವಿಚಾರಣೆ ಅಂತ್ಯ
ಉಡುಪಿ, ಸೆ.18: ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣದ ತನಿಖಾಧಿ ಕಾರಿಯಾಗಿರುವ ಸಿಐಡಿ ಡಿವೈಎಸ್ಪಿ ಎಸ್.ಟಿ.ಚಂದ್ರಶೇಖರ್ ಅವರ ಅಡ್ಡ ವಿಚಾರಣೆ ಇಂದು ಉಡುಪಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಪೂರ್ಣಗೊಳ್ಳುವ ಮೂಲಕ ಪ್ರಕರಣದ ಸಾಕ್ಷಿಗಳ ವಿಚಾರಣೆ ಪ್ರಕ್ರಿಯೆ ಅಂತ್ಯಗೊಂಡಿದೆ.
ಎಸ್.ಟಿ.ಚಂದ್ರಶೇಖರ್ ಅವರ ಮುಖ್ಯ ವಿಚಾರಣೆಯನ್ನು ವಿಶೇಷ ಸರಕಾರಿ ಅಭಿಯೋಜಕ ಶಾಂತಾರಾಮ್ ಶೆಟ್ಟಿ ಈಗಾಗಲೇ ಮುಗಿಸಿದ್ದು, ಇಂದು ಮುಂದುವರೆದ ಭಾಗವಾಗಿ ಅವರ ಅಡ್ಡ ವಿಚಾರಣೆಯನ್ನು ಆರೋಪಿಗಳ ಪರ ವಕೀಲರಾದ ಹೈದರಾಬಾದಿನ ಡಾ.ಜಿ.ವೆಂಕಟೇಶ್ವರ ರಾವ್, ಅರುಣ್ ಬಂಗೇರ ಹಾಗೂ ವಿಕ್ರಂ ಹೆಗ್ಡೆ ನಡೆಸಿದರು. ಪ್ರಕರಣದ ಒಟ್ಟು 167 ಸಾಕ್ಷಿಗಳ ಪೈಕಿ 78 ಸಾಕ್ಷಿಗಳ ವಿಚಾರಣೆಯನ್ನು ನಡೆಸಲಾಗಿದೆ.
ಮುಂದಿನ 3-13 ಹೇಳಿಕೆ ಪಡೆಯುವ ಪ್ರಕ್ರಿಯೆಯನ್ನು ಅ.30ಕ್ಕೆ ಮುಂದೂಡಿ ಜಿಲ್ಲಾ ನ್ಯಾಯಾಧೀಶ ಸಿ.ಎಂ.ಜೋಶಿ ಆದೇಶ ನೀಡಿದರು. ವಿಚಾರಣೆ ಸಂದರ್ಭ ಬೆಂಗಳೂರಿನ ಕಾರಾಗೃಹದಲ್ಲಿರುವ ನವನೀತ್ ಶೆಟ್ಟಿ ಹಾಗೂ ನಿರಂಜನ್ ಭಟ್ ವಿಡಿಯೋ ಕಾನ್ಫರೆನ್ಸ್ ಮೂಲಕ ಮತ್ತು ಜಾಮೀನ ನಲ್ಲಿ ಬಿಡುಗಡೆಗೊಂಡಿರುವ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿ ಹಾಗೂ ಸಾಕ್ಷ ನಾಶ ಆರೋಪಿ ರಾಘವೇಂದ್ರ ನ್ಯಾಯಾಲಯದಲ್ಲಿ ಹಾಜರಿದ್ದರು.