Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ಜಾತಿ-ಒಂದು ಅಧ್ಯಯನ

ಜಾತಿ-ಒಂದು ಅಧ್ಯಯನ

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯಾ-ಕಾರುಣ್ಯಾ19 Sept 2019 12:01 AM IST
share
ಜಾತಿ-ಒಂದು ಅಧ್ಯಯನ

‘ಜಾತಿ- ಸಾಮಾಜಿಕ ಪ್ರತ್ಯೇಕತೆ ಮತ್ತು ಬಡತನ’ ಇದು ಸುಖದೇವ್ ಥೋರಟ್ ಅವರು ಮಂಡಿಸಿದ ಪ್ರಬಂಧ. ಜಾತಿಯ ಕುರಿತ ಶಾಸ್ತ್ರೀಯ ಅಧ್ಯಯನಾತ್ಮಕ ಬರಹ ಇದು. ಪರಿಕಲ್ಪನೆ, ವೌಲ್ಯ ಮಾಪನ ಮತ್ತು ಪ್ರಾಯೋಗಿಕ ಸಾಕ್ಷಿಗಳನ್ನೊಳಗೊಂಡ ಈ ಲೇಖನ ಪೂರ್ತಿಯಾಗಿ ಅಕಾಡಮಿಕ್ ಆಗಿರುವುದು. ಅಥವಾ ವಿದ್ವಾಂಸರಿಗಾಗಿ ಬರೆದಿರುವುದು. ಆದುದರಿಂದಲೇ ಇಲ್ಲಿ ಅನುವಾದಗೊಂಡಿರುವ ಪಾರಿಭಾಷಿಕ ಶಬ್ದಗಳನ್ನು ಜೀರ್ಣಿಸಿಕೊಳ್ಳಲು, ಅದರ ಆಧಾರದಲ್ಲಿ ಈ ಕೃತಿಯನ್ನು ಅರ್ಥೈಸಿಕೊಳ್ಳಲು ಶ್ರೀಸಾಮಾನ್ಯರಿಗೆ ಕಷ್ಟವಾಗಬಹುದು. ಇದೊಂದು ರೀತಿಯಲ್ಲಿ ಸಕ್ಕರೆಯ ರುಚಿಯ ವೈಜ್ಞಾನಿಕ ಸಂಗತಿಗಳನ್ನು ಬರೆದಂತೆ. ಸಕ್ಕರೆಯನ್ನು ಸವಿದವನಿಗೂ ಅದರ ಕುರಿತ ವಿವರಗಳನ್ನು ಅರ್ಥೈಸುವುದು ಕಷ್ಟವಾಗಬಹುದು.

ಈ ಕೃತಿಯ ಪ್ರಸ್ತಾವನೆ ಹೀಗೆ ಹೇಳುತ್ತದೆ ‘‘ಈ ಪ್ರಬಂಧವು ಪರಸ್ಪರ ಸಂಬಂಧಗಳುಳ್ಳ ವಿಷಯಗಳನ್ನು ಕುರಿತು ಸಂಬೋಧಿಸುತ್ತದೆ. ಮೊದಲನೆಯದಾಗಿ ಇಂಡಿಯಾದ ವ್ಯವಸ್ಥೆಯಲ್ಲಿ ಅವಕಾಶ ವಂಚಿತ ತಳ ಸಮುದಾಯಗಳ ಮೇಲೆ ನಡೆಸಲಾಗುತ್ತಿರುವ ‘ಪ್ರತ್ಯೇಕತೆಯನ್ನು ಒಳಗೊಂಡ ದಬ್ಬಾಳಿಕೆ’ಗಳ ಸ್ವರೂಪ ಮತ್ತು ವಿವಿಧ ಆಯಾಮಗಳನ್ನು ಪರಿಕಲ್ಪಿತಗೊಳಿಸುತ್ತದೆ. ಜಾತಿ ಆಧಾರಿತ ಪ್ರತ್ಯೇಕತೆ ಮತ್ತು ಅವಕಾಶವಂಚಿತ ತಳಸಮುದಾಯಗಳ ಬಡತನದ ಮೇಲೆ ಅದರ ಪರಿಣಾಮಗಳ ಕುರಿತ ಪರಿಕಲ್ಪನೆ ಮತ್ತು ಅರ್ಥಗಳನ್ನು ಇದೇ ಪ್ರಕ್ರಿಯೆಯಲ್ಲಿ ವಿಸ್ತಾರವಾಗಿ ಚರ್ಚಿಸಲಾಗಿದೆ. ಎರಡನೆಯದಾಗಿ ಮೇಲಿನ ಈ ಸಿದ್ಧಾಂತದ ಹಿನ್ನೆಲೆಯಲ್ಲಿ ಜಾತಿ ಆಧಾರಿತ ಪ್ರತ್ಯೇಕತೆಯ ಆಚರಣೆಗಳು, ಸಾಮಾಜಿಕ, ನಾಗರಿಕ, ಸಾಂಸ್ಕೃತಿಕ, ರಾಜಕೀಯ, ಆರ್ಥಿಕ ವಲಯಗಳಲ್ಲಿ ತಳ ಸಮುದಾಯಗಳ ಹಕ್ಕುಗಳನ್ನು ನಿರಾಕರಿಸಿದ ತಾರತಮ್ಯ ನೀತಿಗಳು ಮತ್ತು ಈ ಜಾತೀಯತೆಯ ಕಾರಣದಿಂದಾಗಿ ಬದುಕು ಕಟ್ಟಿಕೊಳ್ಳಲು ಬೇಕಾದಂತಹ ಆರ್ಥಿಕ ವರಮಾನದ ಕೊರತೆ, ವ್ಯವಸಾಯ, ಭೂಮಿ, ಶಿಕ್ಷಣ, ನೌಕರಿ, ನಾಗರಿಕ ಸೌಲಭ್ಯಗಳಾದ ಮನೆ, ನೀರು, ವಿದ್ಯುತ್ ಮುಂತಾದವುಗಳ ಕನಿಷ್ಠ ಸೌಲಭ್ಯಗಳು ಇಲ್ಲದೇ ಇರುವುದರ ಕುರಿತಾದ ಅಂಕಿ ಅಂಶಗಳನ್ನಾಧರಿಸಿದ ಪ್ರಾಯೋಗಿಕ ಸಾಕ್ಷಿಯನ್ನು ಒದಗಿಸಲು ಪ್ರಯತ್ನಿಸಲಾಗಿದೆ’’

ಸಾಮಾಜಿಕ ಪ್ರತ್ಯೇಕತೆಯ ಕುರಿತಾದ ಪರಿಕಲ್ಪನೆಗಳು, ಜಾತಿ ಆಧಾರಿತ ಪ್ರತ್ಯೇಕತೆ ಮತ್ತು ತಾರತಮ್ಯದ ಪರಿಕಲ್ಪನೆ, ಜಾತಿ ಪ್ರತ್ಯೇಕತೆ ಮತ್ತು ತಾರತಮ್ಯ ನೀತಿಯ ಸ್ವರೂಪಗಳು, ಜಾತಿ ಪ್ರತ್ಯೇಕತೆ ಮತ್ತು ತಾರತಮ್ಯ: ಪ್ರಾಯೋಗಿಕ ಸಾಕ್ಷಿಗಳು, ಆರ್ಥಿಕ ಪ್ರತ್ಯೇಕತೆ ಮತ್ತು ತಾರತಮ್ಯ: ಪ್ರಾಯೋಗಿಕ ಸಾಕ್ಷಿಗಳು, ಜಾತಿ ಪ್ರತ್ಯೇಕತೆ ಮತ್ತು ಆಹಾರದ ಹಕ್ಕು, ನಾಗರಿಕ ಮತ್ತು ರಾಜಕೀಯ ವಲಯಗಳಲ್ಲಿ ಪ್ರತ್ಯೇಕತೆ ಮತ್ತು ತಾರತಮ್ಯ, ವಿವಿಧ ರಾಜ್ಯಗಳ ಅಧ್ಯಯನ, ನ್ಯಾಯಕ್ಕಾಗಿ ದಾರಿಯ ಹುಡುಕಾಟ...ಹೀಗೆ ಬೇರೆ ತಲೆಬರಹಗಳಲ್ಲಿ ಜಾತಿಯನ್ನು ಚರ್ಚಿಸಲಾಗಿದೆ. ಲಡಾಯಿ ಪ್ರಕಾಶನ, ಗದಗ ಹೊರತಂದಿರುವ ಈ ಕೃತಿಯ ಒಟ್ಟು ಪುಟಗಳು 52. ಮುಖಬೆಲೆ 40 ರೂ. ಆಸಕ್ತರು 94802 86844 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯಾ
-ಕಾರುಣ್ಯಾ
Next Story
X