Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆ ವಿವಾದ; ಸುಪ್ರೀಂಕೋರ್ಟ್...

ಅಯೋಧ್ಯೆ ವಿವಾದ; ಸುಪ್ರೀಂಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಬೇಕು: ಅಮಿತ್ ಶಾ

ವಾರ್ತಾಭಾರತಿವಾರ್ತಾಭಾರತಿ19 Sept 2019 9:16 AM IST
share
ಅಯೋಧ್ಯೆ ವಿವಾದ; ಸುಪ್ರೀಂಕೋರ್ಟ್ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಬೇಕು: ಅಮಿತ್ ಶಾ

ರಾಂಚಿ, ಸೆ.19: ರಾಮ ಜನ್ಮಭೂಮಿ- ಬಾಬರಿ ಮಸೀದಿಗೆ ಜಾಗ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನೀಡುವ ತೀರ್ಪನ್ನು ಪ್ರತಿಯೊಬ್ಬರೂ ಒಪ್ಪಿಕೊಳ್ಳಬೇಕು ಎಂದು ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.

ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಪ್ರಕರಣದ ಬಗ್ಗೆ ಇದೀಗ ಸುಪ್ರೀಂಕೋರ್ಟ್ ಪ್ರತಿದಿನ ವಿಚಾರಣೆ ನಡೆಸುತ್ತಿದ್ದು, ಅಕ್ಟೋಬರ್ 18ರಂದು ವಿಚಾರಣೆ ಪೂರ್ಣಗೊಳಿಸಿ, ನವೆಂಬರ್ 17ರಂದು ತೀರ್ಪು ನೀಡುವ ಸಾಧ್ಯತೆ ಇದೆ ಎಂದು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯಿ ಪ್ರಕಟಿಸಿರುವ ಹಿನ್ನೆಲೆಯಲ್ಲಿ ಅಮಿತ್ ಶಾ ಹೇಳಿಕೆ ವಿಶೇಷ ಮಹತ್ವ ಪಡೆದಿದೆ.

ರಾಮಮಂದಿರ ನಿರ್ಮಾಣಕ್ಕೆ ಸರ್ಕಾರ ಯಾವ ಸಿದ್ಧತೆ ಮಾಡಿಕೊಂಡಿದೆ ಮತ್ತು ಕಾನೂನು ಹಾಗೂ ಸುವ್ಯವಸ್ಥೆ ಪರಿಸ್ಥಿತಿ ಎದುರಿಸಲು ಹೇಗೆ ಸಜ್ಜಾಗಿದೆ ಎಂದು ಕೇಳಿದ ಪ್ರಶ್ನೆಗೆ, "ನಾನು ದೇವಸ್ಥಾನ ನಿರ್ಮಿಸಬೇಕಾಗುವುದಿಲ್ಲ. ಸುಪ್ರೀಂ ತೀರ್ಪನ್ನು ಆಧರಿಸಿ ಟ್ರಸ್ಟ್ ಆ ಕೆಲಸ ಮಾಡುತ್ತದೆ. ಯಾವುದೇ ವಿಚಾರ ನ್ಯಾಯಾಲಯದ ಕಟಕಡೆ ಏರುವುದು ವಿವಾದ ಇದ್ದಾಗ ಮಾತ್ರ; ತೀರ್ಪು ಬಂದಾಗ ಕೆಲವರು ಅದನ್ನು ಇಷ್ಟಪಡುತ್ತಾರೆ; ಕೆಲವರು ಇಷ್ಟಪಡುವುದಿಲ್ಲ. ಆದರೆ ಕೊನೆಗೆ ಪ್ರತಿಯೊಬ್ಬರೂ ತೀರ್ಪನ್ನು ಒಪ್ಪಿಕೊಳ್ಳಲೇಬೇಕಾಗುತ್ತದೆ" ಎಂದು ಸ್ಪಷ್ಟಪಡಿಸಿದರು.

ರಾಂಚಿಯಲ್ಲಿ ಭಾಷಾ ಪತ್ರಿಕೆಯೊಂದು ಏರ್ಪಡಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಅವರು, "ಸುಪ್ರೀಂಕೋರ್ಟ್ ಸ್ವತಂತ್ರವಾಗಿ ಕಾರ್ಯ ನಿರ್ವಹಿಸುತ್ತದೆಯೇ ವಿನಃ ಯಾರ ಬೇಕು ಬೇಡಗಳಿಗೆ ಅನುಗುಣವಾಗಿ ಅಲ್ಲ. ಅಯೋಧ್ಯೆ ತೀರ್ಪು ಬಹಳಷ್ಟು ಹಿಂದೆಯೇ ಬರಬೇಕಿತ್ತು. ಆದರೆ ಸಾರ್ವತ್ರಿಕ ಚುನಾವಣೆ ಮುಗಿಯುವರೆಗೂ ವಿಚಾರಣೆ ಸ್ಥಗಿತಗೊಳಿಸುವಂತೆ ಕಾಂಗ್ರೆಸ್ ಪಕ್ಷ ಹಾಗೂ ಅದರ ನಾಯಕ ಕಪಿಲ್ ಸಿಬಲ್ ಕೋರಿದ್ದರು. ಇದೀಗ ನಿರಂತರ ವಿಚಾರಣೆ ನಡೆಯುತ್ತಿದ್ದು, ಶೀಘ್ರವೇ ಮುಗಿಯಲಿದೆ" ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X