Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪರಿಹಾರಕ್ಕಾಗಿ ಪಾದೂರು ಕಚ್ಛಾತೈಲ ಘಟಕದ...

ಪರಿಹಾರಕ್ಕಾಗಿ ಪಾದೂರು ಕಚ್ಛಾತೈಲ ಘಟಕದ ಸಂತ್ರಸ್ತರ ಆಗ್ರಹ

210 ಎಕರೆ ಪ್ರದೇಶದಲ್ಲಿ 2ನೆ ಹಂತದ ಕಾಮಗಾರಿಗೆ ಯೋಜನೆ

ವಾರ್ತಾಭಾರತಿವಾರ್ತಾಭಾರತಿ19 Sept 2019 7:44 PM IST
share

ಉಡುಪಿ, ಸೆ.19: ಪಾದೂರು ಕಚ್ಛಾತೈಲ ಸಂಗ್ರಹಣಾ ಘಟಕದ ಮೊದಲ ಹಂತದ ಕಾಮಗಾರಿಯ ಸಂತ್ರಸ್ತರಿಗೆ ಪರಿಹಾರ ನೀಡುವ ಮೊದಲೇ ಇದೀಗ ಎರಡನೆ ಹಂತದ ಕಾಮಗಾರಿಗೆ ಯೋಜನೆ ಹಾಕಿಕೊಳ್ಳಲಾಗಿದ್ದು, ಕೂಡಲೇ ಸಂತ್ರಸ್ತರಿಗೆ ಬಾಕಿ ಇರುವ ಪರಿಹಾರವನ್ನು ನೀಡಬೇಕು ಎಂದು ಮಾಸ್ ಇಂಡಿಯಾ ಒತ್ತಾಯಿಸಿದೆ.

ಎರಡನೆ ಹಂತದಲ್ಲಿ ಪಾದೂರು, ಶಿರ್ವ, ಕಳತ್ತೂರು ಗ್ರಾಮಗಳ ಸುಮಾರು 210 ಎಕರೆ ಪ್ರದೇಶವನ್ನು ಗುರುತಿಸಲಾಗಿದ್ದು, ಭೂಸ್ವಾಧೀನಕ್ಕಾಗಿ ಸರ್ವೆ ನಡೆಸಲು ಐಎಸ್‌ಪಿಆರ್‌ಎಲ್ ಉಡುಪಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದೆ ಎಂದು ಮಾಸ್ ಇಂಡಿಯಾ ಕರ್ನಾಟಕ ಅಧ್ಯಕ್ಷ ಜಿ.ಎ. ಕೋಟ್ಯಾರ್ ಸುದ್ದಿಗೋಷ್ಠಿ ಯಲ್ಲಿಂದು ತಿಳಿಸಿದ್ದಾರೆ.

ಮೊದಲನೆ ಹಂತದ ಕಾಮಗಾರಿಯಿಂದ 120 ಮನೆಗಳು ನೆಲೆ ಕಳೆದು ಕೊಂಡಿದ್ದು, ಬಂಡೆ ಸ್ಪೋಟಗಳಿಂದ 68 ಮನೆಗಳಿಗೆ ಹಾನಿಯಾಗಿವೆ. ಅದೇ ರೀತಿ ತೋಟ, ಮರಗಳು ಕೂಡ ಕಳೆದುಕೊಳ್ಳಲಾಗಿದೆ. ಆದರೆ ಇವರಿಗೆ ಸರಕಾರ ಈವರೆಗೆ ಪರಿಹಾರ ನೀಡಿಲ್ಲ. ಸಂತ್ರಸ್ತರ ಹೆಸರಿನಲ್ಲಿ ಮಧ್ಯವರ್ತಿಗಳು ಮೋಸ ಮಾಡಿ ಹಣವನ್ನು ದೋಚುತ್ತಿದ್ದಾರೆ ಎಂದು ಅವರು ದೂರಿದರು.

ಮೊದಲನೆ ಹಂತದಲ್ಲಿ ಮನೆಮಠ ಕಳೆದುಕೊಂಡ ಬಡವರಿಗೆ ಪರಿಹಾರವನ್ನು ನೀಡಬೇಕು. ಬಂಡೆಕಲ್ಲು ಸ್ಫೋಟದಿಂದ ಮನೆಗೆ ಹಾನಿಯಾಗಿದ್ದ ಸಂತ್ರಸ್ತರಿಗೆ ಪರಿಹಾರಧನವನ್ನು ನೀಡಬೇಕು. ಸರಕಾರದಿಂದ ಬಿಡುಗಡೆಗೊಂಡ ಪರಿಹಾರ ಧನವನ್ನು ಕೆಲವು ಗಣ್ಯ ವ್ಯಕ್ತಿಗಳು ಹಾಗೂ ಮಧ್ಯವರ್ತಿಗಳು ದುರುಪಯೋಗ ಪಡಿಸಿಕೊಂಡು ಬಡ ಸಂತ್ರಸ್ತರಿಗೆ ಮೋಸ ಮಾಡಿದ್ದು, ಈ ಬಗ್ಗೆ ತನಿಖೆ ನಡೆಸಿ ಕಾನೂನು ಕ್ರಮ ಜರಗಿಸಬೇಕು ಎಂದು ಅವರು ಒತ್ತಾಯಿಸಿದರು.

ಸ್ಥಳೀಯ ಜನರಿಗೆ ಐಎಸ್‌ಪಿಆರ್‌ಎಲ್‌ನಲ್ಲಿ ಕಡ್ಡಾಯವಾಗಿ ಉದ್ಯೋಗಾ ವಕಾಶಗಳನ್ನು ಕಲ್ಪಿಸಬೇಕು. ಎರಡನೆ ಹಂತದ ಕೆಲಸ ಆರಂಭ ಮಾಡುವ ಮೊದಲು ಭೂಮಿ ಕಳೆದುಕೊಳ್ಳುವವರಿಗೆ ಸರಕಾರದ ನಿಯಮಾನುಸಾರವಾಗಿ ಅವರ ಪರಿಹಾರದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗಳಿಗೆ ಹಾಕಬೇಕು. ಈ ಬೇಡಿಕೆಗಳನ್ನು ಈಡೇರಿಸದಿದ್ದಲ್ಲಿ ಸ್ಥಳೀಯ ಗ್ರಾಮಸ್ಥರೊಂದಿಗೆ ಸೇರಿ ಹೋರಾಟವನ್ನು ಹಮ್ಮಿಕೊಳ್ಳಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಮಾಸ್ ಇಂಡಿಯಾದ ಜಯ ಪೂಜಾರಿ, ಗೀತಾ ಸುವರ್ಣ, ಪ್ರವೀಣ್ ಕೋರ್ಡಾ, ಐರಿನ್ ಥಾವ್ರೋ, ವಿಠಲ್ ಜತ್ತನ್ನ ಉಪಸ್ಥಿತರಿದ್ದರು.

‘ಈ ಪ್ರದೇಶದಲ್ಲಿ ಸಾಕಷ್ಟು ಮಂದಿ ಐದು ಸೆಂಟ್ಸ್ ಜಾಗದಲ್ಲಿ ವಾಸ ಮಾಡಿ ಕೊಂಡಿದ್ದಾರೆ. ಸರಕಾರ ಸೆಂಟ್ಸ್‌ಗೆ 28ಸಾವಿರ ರೂ. ಪರಿಹಾರ ಮೊತ್ತವನ್ನು ಪಡೆದು ಇವರೆಲ್ಲಾ ಎಲ್ಲಿಗೆ ಹೋಗಬೇಕು. ಎರಡನೆ ಹಂತದ ವ್ಯಾಪ್ತಿಗೆ ಸುಮಾರು 500 ಮನೆಗಳು ಒಳಪಡಲಿವೆ. ಅದೇ ರೀತಿ ಸಾವಿರಾರು ಮರಗಳು, ಕೃಷಿ ಭೂಮಿಯನ್ನು ಕೂಡ ಕಳೆದುಕೊಳ್ಳಬೇಕಾಗುತ್ತದೆ’

-ಪ್ರವೀಣ್ ಕೋರ್ಡಾ ಕಳತ್ತೂರು

‘ಇಲ್ಲಿ ಯಾವುದೇ ಮಾಹಿತಿ ನೀಡದೆ ಸ್ಪೋಟಗಳನ್ನು ನಡೆಸಿದ ಪರಿಣಾಮ ಮನೆಗಳಿಗೆ ಹಾನಿಯಾಗಿವೆ. ತೋಟ ಹಾಗೂ ಕೃಷಿಭೂಮಿಗೆ ಹಾನಿಯಾಗಿವೆ. ಮೊದಲನೆ ಹಂತದಲ್ಲಿ ಸಮೃದ್ಧವಾದ ಕೃಷಿ ಭೂಮಿ ಕಳೆದುಕೊಂಡು ತುತ್ತು ಅನ್ನಕ್ಕೂ ಬೇಡುವ ಪರಿಸ್ಥಿತಿ ನಮ್ಮದಾಗಿದೆ. ಇದರಿಂದ ನಾವು ನೋವು ಅನುಭವಿಸುತ್ತಿದ್ದೇವೆ. ನಮ್ಮ ಜನಪ್ರತಿನಿಧಿಗಳು ಈಗ ಬಾಯಿ ತೆರೆಯುತ್ತಿಲ್ಲ’
-ಐರಿನ್ ಥಾವ್ರೋ, ಸಂತ್ರಸ್ತೆ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X