Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಬಲಪಂಥೀಯ ಸರಕಾರ ರಚಿಸಲು ಬಯಸಿದ್ದೆ,ಆದರೆ...

ಬಲಪಂಥೀಯ ಸರಕಾರ ರಚಿಸಲು ಬಯಸಿದ್ದೆ,ಆದರೆ ಅದು ಅಸಾಧ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು

ವಾರ್ತಾಭಾರತಿವಾರ್ತಾಭಾರತಿ19 Sept 2019 7:44 PM IST
share
ಬಲಪಂಥೀಯ ಸರಕಾರ ರಚಿಸಲು ಬಯಸಿದ್ದೆ,ಆದರೆ ಅದು ಅಸಾಧ್ಯ: ಇಸ್ರೇಲ್ ಪ್ರಧಾನಿ ನೆತನ್ಯಾಹು

ಜೆರುಸಲೇಮ್, ಸೆ. 19: ಇಸ್ರೇಲ್‌ನಲ್ಲಿ ಮಂಗಳವಾರ ನಡೆದ ಚುನಾವಣೆಯ ಬಳಿಕ ಅತಂತ್ರ ಸಂಸತ್ತು ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಎಲ್ಲರನ್ನೂ ಒಳಗೊಂಡ ಏಕತಾ ಸರಕಾರವೊಂದನ್ನು ರಚಿಸುವಂತೆ ಪ್ರಧಾನಿ ಬೆಂಜಮಿನ್ ನೆತನ್ಯಾಹು ತನ್ನ ಪ್ರಧಾನ ಪ್ರತಿಸ್ಪರ್ಧಿ ಬೆನ್ನಿ ಗಾಂಟ್ಝ್‌ರಿಗೆ ಗುರುವಾರ ಕರೆ ನೀಡಿದ್ದಾರೆ.

ಯಾವುದೇ ಮೈತ್ರಿಕೂಟ ಬಹುಮತ ಗಳಿಸಲು ವಿಫಲವಾದ ಬಳಿಕ ಈ ಬೆಳವಣಿಗೆ ನಡೆದಿದೆ.

“ನಾನು ಬಲಪಂಥೀಯ ಮೈತ್ರಿ ಸರಕಾರವೊಂದನ್ನು ರಚಿಸಲು ಬಯಸಿದ್ದೇನೆ, ಆದರೆ ಅದು ಸಾಧ್ಯವಿಲ್ಲ ಎನ್ನುವುದನ್ನು ಫಲಿತಾಂಶ ತೋರಿಸಿದೆ” ಎಂದು ವೀಡಿಯೊ ಸಂದೇಶವೊಂದರಲ್ಲಿ ನೆತನ್ಯಾಹು ಹೇಳಿದ್ದಾರೆ.

ವರ್ಷದಲ್ಲಿ ನಡೆದ ಎರಡನೇ ಚುನಾವಣೆಯಲ್ಲೂ ನೆತನ್ಯಾಹುರ ಲಿಕುಡ್ ಪಕ್ಷದ ನೇತೃತ್ವದ ಮೈತ್ರಿಕೂಟವಾಗಲಿ, ಅವರ ಎದುರಾಳಿ ಬೆನ್ನಿ ಗಾಂಟ್ಝ್‌ರ ಬ್ಲೂ ಆ್ಯಂಡ್ ವೈಟ್ ಪಾರ್ಟಿ ನೇತೃತ್ವದ ಕಹೋಲ್ ಲಾವನ್ ಒಕ್ಕೂಟವಾಗಲಿ ಸ್ಪಷ್ಟ ಬಹುಮತವನ್ನು ಪಡೆಯುವಲ್ಲಿ ವಿಫಲವಾಗಿವೆ.

120 ಸದಸ್ಯ ಬಲದ ಇಸ್ರೇಲ್ ಸಂಸತ್ತಿನಲ್ಲಿ ಗಾಂಟ್ಝ್ ನೇತೃತ್ವದ ಮಧ್ಯ-ಎಡಪಂಥೀಯ ಮೈತ್ರಿಕೂಟ 57 ಕ್ಷೇತ್ರಗಳಲ್ಲಿ ಮುಂದಿದೆ ಹಾಗೂ ನೆತನ್ಯಾಹು ನೇತೃತ್ವದ ಬಲಪಂಥೀಯ ಮತ್ತು ಧಾರ್ಮಿಕ ಪಕ್ಷಗಳ ಒಕ್ಕೂಟ 55ರಲ್ಲಿ ಮುಂದಿದೆ. ಹಾಗಾಗಿ, ಈ ಎರಡೂ ಮೈತ್ರಿಕೂಟಗಳಿಗೆ ಬಹುಮತದ ಸರಕಾರ ರಚಿಸಲು ಸಾಧ್ಯವಿಲ್ಲ. ಇಸ್ರೇಲ್ ಬೈಟೀನು ಪಕ್ಷವು 9 ಸ್ಥಾನಗಳಲ್ಲಿ ಮುಂದಿದ್ದು, ಕಿಂಗ್ ಮೇಕರ್ ಆಗುವ ಎಲ್ಲ ಲಕ್ಷಣಗಳನ್ನು ಹೊಂದಿದೆ. ಆದರೆ, ಅದರ ನಾಯಕ ಅವಿಗ್ಡರ್ ಲೈಬರ್‌ಮನ್ ‘‘ವಿಶಾಲ ತಳಹದಿಯ, ಉದಾರವಾಗಿ’ ಏಕತಾ ಸರಕಾರವೊಂದನ್ನು ರಚಿಸುವಂತೆ ಕರೆ ನೀಡಿದ್ದಾರೆ.

► ನಾಯಕತ್ವ ಸಮರ?

 ಏಕತಾ ಸರಕಾರವನ್ನು ರಚಿಸಲು ತಕ್ಷಣ ಸಂಧಾನ ಆರಂಭಿಸುವಂತೆ ಪ್ರಧಾನಿ ನೆತನ್ಯಾಹು ಬೆನ್ನಿ ಗಾಂಟ್ಝ್‌ರನ್ನು ಒತ್ತಾಯಿಸಿದ್ದಾರೆ.

ಏಕತಾ ಸರಕಾರಕ್ಕೆ ನನ್ನ ಒಪ್ಪಿಗೆಯಿದೆ, ಆದರೆ ಅದು ನನ್ನ ನಾಯಕತ್ವದಲ್ಲಿ ಇರಬೇಕು ಎಂದು ಗಾಂಟ್ಝ್ ಹೇಳಿದ್ದಾರೆ.

ಭ್ರಷ್ಟಾಚಾರ ಆರೋಪಗಳನ್ನು ಎದುರಿಸುತ್ತಿರುವ ನೆತನ್ಯಾಹು ನೇತೃತ್ವದ ಮೈತ್ರಿ ಸರಕಾರದಲ್ಲಿ ಭಾಗಿಯಾಗಲು ಅವರ ಪಕ್ಷ ನಿರಾಕರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X