Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸಾಹಿತಿ, ರಂಗಸಾಧಕ ಜಿ.ಕೆ.ಐತಾಳ್ ನಿಧನ

ಸಾಹಿತಿ, ರಂಗಸಾಧಕ ಜಿ.ಕೆ.ಐತಾಳ್ ನಿಧನ

ವಾರ್ತಾಭಾರತಿವಾರ್ತಾಭಾರತಿ19 Sept 2019 9:46 PM IST
share
ಸಾಹಿತಿ, ರಂಗಸಾಧಕ ಜಿ.ಕೆ.ಐತಾಳ್ ನಿಧನ

ಉಡುಪಿ, ಸೆ.19: ಖ್ಯಾತ ಸಾಹಿತಿ, ರಂಗ ಸಾಧಕ ಹಾಗೂ ನಿವೃತ್ತ ಕರ್ನಾಟಕ ಬ್ಯಾಂಕ್ ವ್ಯವಸ್ಥಾಪಕ ಜಿ.ಕೆ.ಐತಾಳ್ ಅವರು ಇಂದು ಬೆಳಗ್ಗೆ ಕೋಟೇಶ್ವರದಲ್ಲಿ ರುವ ತನ್ನ ಸ್ವಗೃಹದಲ್ಲಿ ನಿಧನರಾದರು. ಅವರಿಗೆ 68 ವರ್ಷ ಪ್ರಾಯವಾಗಿತ್ತು.

ಕನ್ನಡದ ಪ್ರಮುಖ ಸಣ್ಣ ಕಥೆಗಾರರಲ್ಲಿ ಒಬ್ಬರಾದ ಜಿ.ಕೆ.ಐತಾಳ್ ಸುಮಾರು 500ಕ್ಕೂ ಅಧಿಕ ಸಣ್ಣಕತೆಗಳನ್ನು ಬರೆದಿದ್ದು, ನಾಡಿನ ಪ್ರಮುಖ ಪತ್ರಿಕೆ ಹಾಗೂ ನಿಯತಕಾಲಿಕಗಳಲ್ಲಿ ಪ್ರಕಟಗೊಂಡಿವೆ. ಅವರ ‘ಕುಜ’ ಕಾದಂಬರಿಗೆ ರಾಜ್ಯ ಪ್ರಶಸ್ತಿಯೂ ದೊರೆತಿದೆ. ಇವರು ಉತ್ತಮ ಅನುವಾದಕರೂ ಆಗಿದ್ದಾರೆ. ಇವರ ಕಾದಂಬರಿಗಳು ಧಾರಾವಾಹಿಗಳಾಗಿ ಪ್ರಕಟಗೊಂಡಿವೆ.

ರಂಗಭೂಮಿಯ ಸಾಧಕರಲ್ಲೊಬ್ಬರಾದ ಇವರು ಕುಂದಾಪುರದ ರೂಪಕಲಾ ಹಾಗೂ ಉಡುಪಿಯ ರಂಗಭೂಮಿಯೊಂದಿಗೆ ನಿಕಟ ಸಂಬಂಧ ಹೊಂದಿದ್ದರು. ನಟ, ನಿರ್ದೇಶಕರಾಗಿಯೂ ಜನಪ್ರಿಯತೆ ಪಡೆದಿದ್ದ ಇವರು ಕೆಲವು ನಾಟಕಗಳನ್ನು ರಚಿಸಿದ್ದಾರೆ. ಕೋಟೇಶ್ವರ ಹಾಗೂ ಕುಂದಾಪುರದ ಹಲವು ಸಂಘ ಸಂಸ್ಥೆಗಳಲ್ಲಿ ಅವರು ಪದಾಧಿಕಾರಿಗಳಾಗಿ ಸೇವೆ ಸಲ್ಲಿಸಿದ್ದರು.

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪ್ರಶಸ್ತಿ ಸೇರಿದಂತೆ ನಾಡಿನ ಹಲವು ಪ್ರಮುಖ ಪ್ರಶಸ್ತಿಗಳನ್ನು ಪಡೆದಿರುವ ಜಿ.ಕೆ.ಐತಾಳ್ ಪತ್ನಿ, ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X