ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವತಿಯಿಂದ ಧ್ವಜದಿನ ಕಾರ್ಯಕ್ರಮ
ಬಂಟ್ವಾಳ, ಸೆ. 19: ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಇದರ ಧ್ವಜ ದಿನಾಚರಣೆಯ ಪ್ರಯುಕ್ತ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ವತಿಯಿಂದ ಧ್ವಜಾರೋಹಣ ಕಾರ್ಯಕ್ರಮವು ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿ ಆವರಣದಲ್ಲಿ ನಡೆಯಿತು.
ಪಂಜರಕೋಡಿ ಜುಮಾ ಮಸೀದಿ ಖತೀಬ್ ಅಬೂಬಕರ್ ಮದನಿ ಉಸ್ತಾದ್ ಹಾಗೂ ಎಸ್ಸೆಸ್ಸೆಫ್ ಮಿತ್ತರಾಜೆ ಶಾಖೆಯ ಅಧ್ಯಕ್ಷ ದಾವುದ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಸಂದರ್ಭದಲ್ಲಿ ಪಂಜರಕೋಡಿ ರಿಫಾಇಯ್ಯ ಜುಮಾ ಮಸೀದಿ ಅಧ್ಯಕ್ಷ ಮಜೀದ್ ಕಲ್ಲಕಟ್ಟ, ಕೊಳ್ನಾಡು ಗ್ರಾಪಂ ಸದಸ್ಯರಾದ ಇಬ್ರಾಹಿಂ ಮಿತ್ತರಾಜೆ, ಎಸ್ವೈಎಸ್ ಪಂಜರಕೋಡಿ ಬ್ರಾಂಚ್ ಅಧ್ಯಕ್ಷ ಹಮೀದ್ ಬಿಬಿಸಿ ಹಾಜರಿದ್ದರು. ಮುಅಲ್ಲಿಂ ಶರೀಫ್ ಹನೀಫಿ ಮಾರ್ನಾಡ್ ಸ್ವಾಗತಿಸಿ, ಜುಮಾ ಮಸೀದಿ ಪ್ರಧಾನ ಕಾರ್ಯದರ್ಶಿ ಉಮರ್ ಅಬ್ಬೆಮ್ಮಾರ್ ವಂದಿಸಿದರು.
Next Story