Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಬಜರಂಗ್, ರವಿ ಸೆಮಿ ಫೈನಲ್‌ಗೆ,...

ಬಜರಂಗ್, ರವಿ ಸೆಮಿ ಫೈನಲ್‌ಗೆ, ಒಲಿಂಪಿಕ್ಸ್ ಗೆ ಅರ್ಹತೆ

ವಿಶ್ವ ಕುಸ್ತಿ ಚಾಂಪಿಯನ್‌ಶಿಪ್

ವಾರ್ತಾಭಾರತಿವಾರ್ತಾಭಾರತಿ19 Sept 2019 11:33 PM IST
share
ಬಜರಂಗ್, ರವಿ ಸೆಮಿ ಫೈನಲ್‌ಗೆ, ಒಲಿಂಪಿಕ್ಸ್ ಗೆ ಅರ್ಹತೆ

ನೂರ್ ಸುಲ್ತಾನ್(ಕಝಖ್‌ಸ್ತಾನ), ಸೆ.19: ವಿಶ್ವ ಕುಸ್ತಿ ಚಾಂಪಿಯನ್‌ಶಿಪ್‌ನಲ್ಲಿ ಸೆಮಿ ಫೈನಲ್ ಪ್ರವೇಶಿಸಿರುವ ಭಾರತದ ಸ್ಟಾರ್ ಕುಸ್ತಿಪಟು ಬಜರಂಗ್ ಪೂನಿಯಾ ಹಾಗೂ ಅಚ್ಚರಿ ಫಲಿತಾಂಶ ದಾಖಲಿಸಿದ ರವಿ ದಾಹಿಯಾ ಟೋಕಿಯೊ ಒಲಿಂಪಿಕ್ಸ್‌ಗೆ ಅರ್ಹತೆ ಪಡೆೆದಿದ್ದಾರೆ. ಆದರೆ, ಬಜರಂಗ್ ಹಾಗೂ ರವಿ ಸೆಮಿ ಫೈನಲ್‌ನಲ್ಲಿ ಸೋಲನುಭವಿಸಿದ್ದು, ಶುಕ್ರವಾರ ಕಂಚಿನ ಪದಕಕ್ಕಾಗಿ ನಡೆಯುವ ಪಂದ್ಯದಲ್ಲಿ ಆಡಲಿದ್ದಾರೆ.

57 ಕೆಜಿ ಸೆಮಿ ಫೈನಲ್‌ನಲ್ಲಿ ರವಿ ರಶ್ಯದ ಝವುರ್ ಉಗುಯೆವ್ ವಿರುದ್ಧ 4-6 ಅಂತರದಿಂದ ಸೋತಿದ್ದಾರೆ. ಬಜರಂಗ್ ಪೂನಿಯಾ 65ಕೆಜಿ ತೂಕ ವಿಭಾಗದ ರೋಚಕ ಸೆಮಿ ಫೈನಲ್ ಪಂದ್ಯದಲ್ಲಿ ಕಝಖ್‌ಸ್ತಾನದ ದೌಲತ್ ನಿಯಾಝ್‌ಬೆಕೊವ್ ವಿರುದ್ಧ 2-9 ಅಂತರದಿಂದ ಶರಣಾದರು. ಇದಕ್ಕೂ ಮೊದಲು ಬಜರಂಗ್ 65 ಕೆಜಿ ವಿಭಾಗದಲ್ಲಿ ತನ್ನ ಸುಲಭ ಎದುರಾಳಿಗಳನ್ನು ಮಣಿಸುತ್ತಾ ಸೆಮಿ ಫೈನಲ್ ತಲುಪಿದರು. ಈ ಮೂಲಕ ಚೊಚ್ಚಲ ವಿಶ್ವ ಚಾಂಪಿಯನ್‌ಶಿಪ್ ಪ್ರಶಸ್ತಿ ಗೆಲ್ಲುವ ವಿಶ್ವಾಸ ಮೂಡಿಸಿದರು. 2018ರಲ್ಲಿ ಬುಡಾಪೆಸ್ಟ್‌ನಲ್ಲಿ ಬಜರಂಗ್ ಬೆಳ್ಳಿ ಪದಕ ಜಯಿಸಿದ್ದರು.

ಡಬಲ್ ಒಲಿಂಪಿಯನ್ ಸುಶೀಲ್ ಕುಮಾರ್ ಮಾತ್ರ 2010ರಲ್ಲಿ ಮಾಸ್ಕೊದಲ್ಲಿ ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಚಿನ್ನ ಜಯಿಸಿದ ಭಾರತದ ಏಕೈಕ ಕುಸ್ತಿಪಟು ಆಗಿದ್ದಾರೆ.

ಬಜರಂಗ್ ಮೊದಲ ಸುತ್ತಿನಲ್ಲಿ ಪೊಲೆಂಡ್‌ನ ಬಿಯೆನ್‌ಕೊವಿಸ್ಕಿ ಅವರನ್ನು 9-2 ಅಂತರದಿಂದ ಮಣಿಸಿದರು. ಎರಡನೇ ಸುತ್ತಿನಲ್ಲಿ ಸ್ಲೋವಾನಿಯದ ಡೇವಿಡ್ ಹಬಟ್‌ರನ್ನು ಸುಲಭವಾಗಿ ಸೋಲಿಸಿದರು. ಕ್ವಾರ್ಟರ್ ಫೈನಲ್‌ನಲ್ಲಿ ಕೊರಿಯಾದ ಜೊಂಗ್ ಚೊಯ್ ಸನ್‌ರನ್ನು 8-1 ಅಂತರದಿಂದ ಸೋಲಿಸಿದರು.

ರವಿ(57ಕೆಜಿ)ಭಾರತದ ಅನಿರೀಕ್ಷಿತ ಹೀರೋ ಆಗಿ ಹೊರಹೊಮ್ಮಿದರು. ತನ್ನ ಸವಾಲಿನ ತೂಕ ವಿಭಾಗದಲ್ಲಿ ವಿಶ್ವದ ನಂ.3ನೇ ಕುಸ್ತಿಪಟು ಹಾಗೂ ಯುರೋಪಿಯನ್ ಚಾಂಪಿಯನ್‌ಗೆ ಸೋಲುಣಿಸಿದರು. ರವಿ ಮೊದಲೆರಡು ಪಂದ್ಯಗಳನ್ನು ತಾಂತ್ರಿಕ ಶ್ರೇಷ್ಠತೆಯ ಆಧಾರದಲ್ಲಿ ಗೆದ್ದುಕೊಂಡರು. ಮೊದಲ ಸುತ್ತಿನಲ್ಲಿ ಕೊರಿಯಾದ ಸಂಗ್‌ವಾನ್ ಕಿಮ್‌ರನ್ನು ಸೋಲಿಸಿದರು. ಎರಡನೇ ಸುತ್ತಿನಲ್ಲಿ ಅರ್ಮೆನಿಯದ ಯುರೋಪಿಯನ್ ಚಾಂಪಿಯನ್ ಅರ್ಸೆನ್ ಹರುಟುನಿಯನ್‌ಗೆ ಸೋಲುಣಿಸಿ ಶಾಕ್ ನೀಡಿದರು. ಕ್ವಾರ್ಟರ್ ಫೈನಲ್‌ನಲ್ಲಿ 2017ರ ವಿಶ್ವ ಚಾಂಪಿಯನ್ ಹಾಗೂ ವಿಶ್ವದ ನಂ.3ನೇ ಕುಸ್ತಿಪಟು ಯೂಕಿ ಟಕಹಶಿ ಅವರನ್ನು 6-1 ಅಂತರದಿಂದ ಸೋಲಿಸಿ ದೈತ್ಯ ಸಂಹಾರಿ ಎನಿಸಿಕೊಂಡರು.

ರಿಯೋ ಒಲಿಂಪಿಕ್ಸ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಸಾಕ್ಷಿ ಮಲಿಕ್ ಮಹಿಳೆಯರ ಸ್ಪರ್ಧೆಯಲ್ಲಿ ತನ್ನ ಕಳಪೆ ಪ್ರದರ್ಶನ ಮುಂದುವರಿಸಿದ್ದಾರೆ. ಸಾಕ್ಷಿ ಮೊದಲ ಸುತ್ತಿನ ಪಂದ್ಯದಲ್ಲಿ ನೈಜೀರಿಯದ ಅಮಿನಾಟ್ ಅಡೆನಿಯಿ ವಿರುದ್ಧ 7-10 ಅಂತರದಿಂದ ಸೋತಿದ್ದಾರೆ. ನೈಜೀರಿಯದ ಕುಸ್ತಿಪಟು ಕ್ವಾರ್ಟರ್ ಫೈನಲ್‌ನಲ್ಲಿ ಮುಗ್ಗರಿಸಿದ ಹಿನ್ನೆಲೆಯಲ್ಲಿ ಸಾಕ್ಷಿ ಚಾಂಪಿಯನ್‌ಶಿಪ್‌ನಿಂದ ನಿರ್ಗಮಿಸಿದರು. 68ಕೆಜಿ ತೂಕ ವಿಭಾಗದಲ್ಲಿ ದಿವ್ಯಾ ಕಾಕ್ರನ್ ಹಾಲಿ ಒಲಿಂಪಿಕ್ಸ್ ಚಾಂಪಿಯನ್ ಜಪಾನ್‌ನ ಸಾರಾ ಡೊಶೊ ವಿರುದ್ಧ 0-2 ಅಂತರದಿಂದ ಸುಲಭವಾಗಿ ಸೋತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X