Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ನೂತನ ಮೋಟರ್ ವಾಹನ ಕಾಯ್ದೆಗೆ ವಕೀಲರ...

ನೂತನ ಮೋಟರ್ ವಾಹನ ಕಾಯ್ದೆಗೆ ವಕೀಲರ ವಿರೋಧ: ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ19 Sept 2019 11:33 PM IST
share
ನೂತನ ಮೋಟರ್ ವಾಹನ ಕಾಯ್ದೆಗೆ ವಕೀಲರ ವಿರೋಧ: ನ್ಯಾಯಾಲಯ ಕಲಾಪ ಬಹಿಷ್ಕರಿಸಿ ಪ್ರತಿಭಟನೆ

ಮಂಡ್ಯ, ಸೆ.19: ಕೇಂದ್ರ ಸರಕಾರವು ಮೋಟರ್ ವಾಹನ ಕಾಯ್ದೆ 1988ಕ್ಕೆ ತಿದ್ದುಪಡಿ ಮಾಡಿರುವುದನ್ನು ಖಂಡಿಸಿ ವಕೀಲರು ಗುರುವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು ವಕೀಲರ ಸಂಘದ ಹೋರಾಟಕ್ಕೆ ಬೆಂಬಲವಾಗಿ ನಗರದ ವಕೀಲರೂ ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಕಾಯ್ದೆ ತಿದ್ದುಪಡಿ ವಿರೋಧಿಸಿದರು. ಕೇಂದ್ರ ಸರಕಾರ ಮೋಟರ್ ವಾಹನ ಕಾಯ್ದೆಗೆ ತಿದ್ದುಪಡಿ ತಂದಿರುವುದರಿಂದ ಸಾರ್ವಜನಿಕರು, ಕಕ್ಷಿದಾರರು ಹಾಗು ವಕೀಲರಿಗೆ ತೊಂದರೆಯಾಗಿದೆ. ತಿದ್ದುಪಡಿಯನ್ನು 15 ದಿವಸದೊಳಗೆ ಕೇಂದ್ರ ಸರಕಾರ ಹಿಂಪಡೆಯಬೇಕು ಎಂದು ಒತ್ತಾಯಿಸಿದ ಅವರು, ಇಲ್ಲದಿದ್ದರೆ ನ್ಯಾಯಾಲಯದಲ್ಲಿ ರಿಟ್ ಅರ್ಜಿ ಸಲ್ಲಿಸಲಾಗುವುದು ಎಂದರು.

ಹಳೆಯ ಕಾಯ್ದೆ 1988ರಲ್ಲಿ ಸಾರ್ವಜನಿಕರಿಗೆ ಅನುಕೂಲವಾದ ಹಲವಾರು ಅಂಶಗಳು ಇದ್ದವು. ಆದರೆ, ಹೊಸ ಕಾಯ್ದೆಯಲ್ಲಿ ಸಾರ್ವಜನಿಕರಿಗೆ ಅನಾನುಕೂಲವಾಗುವ ಅಂಶಗಳಿವೆ. ಹಳೆಯ ಕಾಯ್ದೆಯಲ್ಲಿ ಸೆಕ್ಷನ್ 140ರ ಅನ್ವಯ ತಕ್ಷಣದ ಪರಿಹಾರವಾಗಿ ಗಾಯಾಳುವಿಗೆ 25 ಸಾವಿರ ರೂ. ಮತ್ತು ಮಾರಣಾಂತಿಕ, ಗಂಭೀರ ಪ್ರಕರಣಕ್ಕೆ ಮಧ್ಯಂತರ 50 ಸಾವಿರ ರೂ. ಮೊತ್ತ ಒದಗಿಸಲಾಗಿದೆ. ಆದರೆ, ಈ ನಿಬಂಧನೆಯನ್ನು ಈಗ ಅಳಿಸಲಾಗಿದೆ. ಹೊಸ ಕಾಯ್ದೆಯಡಿ ಯಾವುದೇ ತಕ್ಷಣದ ಪರಿಹಾರ ದೊರಕುವುದಿಲ್ಲ. ಗಾಯಾಳುವಿಗೆ ವೈದ್ಯಕೀಯ ಚಿಕಿತ್ಸೆಗೆ ತಕ್ಷಣದ ಪರಿಹಾರ ಮೊತ್ತ ನೀಡಲಾಗುವುದಿಲ್ಲ. ಹಳೇ ಕಾಯ್ದೆಯಲ್ಲಿ ನ್ಯಾಯಾಲಯವು ಆದೇಶಿಸುವ ಯಾವುದೇ ಮೊತ್ತವನ್ನು ವಿಮಾ ಕಂಪನಿಯು ಸಂಪೂರ್ಣ ಮೊತ್ತವನ್ನು ಹಕ್ಕುದಾರನಿಗೆ ಪಾವತಿಸಬೇಕಿತ್ತು. ಹೊಸ ಕಾಯ್ದೆಯಲ್ಲಿ ವಿಮಾ ಕಂಪೆನಿಯ ಪರಿಹಾರ ನೀಡುವ ಹೊಣೆಗಾರಿಕೆಯು ವಾಹನದ ಮಾಲಕರು ಪಾವತಿಸುವ ಪ್ರೀಮಿಯಂ ಮೊತ್ತ ಮತ್ತು ವಾಹನದ ವಿಮೆ ಹೊಣೆಗಾರಿಕೆಯನ್ನು ಅವಲಂಬಿಸುತ್ತದೆ ಎಂದು ಆರೋಪಿಸಿದರು.

ಹೊಸ ಕಾಯ್ದೆಯಲ್ಲಿ ಇನ್ನೂ ಹಲವಾರು ತೊಂದರೆಗಳಿದ್ದು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಒತ್ತಾಯಿಸಿ ಜಿಲ್ಲಾಧಿಕಾರಿಗಳ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಸಲ್ಲಿಸಲಾಯಿತು.

ವಕೀಲರ ಸಂಘದ ಅಧ್ಯಕ್ಷ ಸಿ.ಎಲ್.ಶಿವಕುಮಾರ್, ಉಪಾಧ್ಯಕ್ಷ ಕೆ.ಬಿ.ಎಸ್.ಗಿರೀಶ್, ಪ್ರಧಾನ ಕಾರ್ಯದರ್ಶಿ ನವೀನ, ಎಂ.ಎಸ್.ಕುಮಾರ್, ಶೋಭಾ ಎಚ್.ಕೆ., ತಿಮ್ಮೇಗೌಡ, ಸುಮಿತ್ರ, ಎಚ್.ಸವಿತ, ಎಂ.ಕೆ.ರೇವಣ್ಣ, ಗೌರೀಶ್, ಇತರರು ಭಾಗವಹಿಸಿದ್ದರು.

ನಾಗಮಂಗಲದಲ್ಲೂ ಕಾಯ್ದೆ ತಿದ್ದುಪಡಿ ವಿರೋಧಿಸಿ ವಕೀಲರು ಪ್ರತಿಭಟಿಸಿದರು. ವಕೀಲರ ಸಂಘದ ಅಧ್ಯಕ್ಷ ಟಿ.ಕೆ.ರಾಮೇಗೌಡ, ಉಪಾಧ್ಯಕ್ಷ ರಮೇಶ್, ಪ್ರಧಾನ ಕಾರ್ಯದರ್ಶಿ ಜಯಪ್ರಕಾಶ್, ಖಜಾಂಚಿ ಚಿಕ್ಕಸ್ವಾಮಿ, ಶೇಖ್ ಅಹಮದ್, ದೇವಹಳ್ಳಿ ಮಂಜುನಾಥ್, ಮಹದೇವ, ಶಿವಣ್ಣ, ಪ್ರವೀಣ್ ಕುಮಾರ್, ಬಿಂದುಮತಿ, ಧರಣಪ್ಪ ಇತರರು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X