Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಮಾರ್ಕ್ರಮ್,ಮುಲ್ಡರ್ ಶತಕ, ದ.ಆಫ್ರಿಕಾ...

ಮಾರ್ಕ್ರಮ್,ಮುಲ್ಡರ್ ಶತಕ, ದ.ಆಫ್ರಿಕಾ ಮರು ಹೋರಾಟ

ಎರಡನೇ ಅನಧಿಕೃತ ಟೆಸ್ಟ್

ವಾರ್ತಾಭಾರತಿವಾರ್ತಾಭಾರತಿ19 Sept 2019 11:39 PM IST
share
ಮಾರ್ಕ್ರಮ್,ಮುಲ್ಡರ್ ಶತಕ, ದ.ಆಫ್ರಿಕಾ ಮರು ಹೋರಾಟ

 ಮೈಸೂರು, ಸೆ.19: ನಾಯಕ ಏಡೆನ್ ಮಾರ್ಕ್ರಮ್ ಹಾಗೂ ಆಲ್‌ರೌಂಡರ್ ವಿಯಾನ್ ಮುಲ್ಡರ್ ಆಕರ್ಷಕ ಶತಕದ ಬೆಂಬಲದಿಂದ ದಕ್ಷಿಣ ಆಫ್ರಿಕಾ ‘ಎ’ ತಂಡ ಭಾರತ ‘ಎ’ ವಿರುದ್ಧ ದ್ವಿತೀಯ ಅನಧಿಕೃತ ಟೆಸ್ಟ್ ನ ಮೂರನೇ ದಿನದಾಟದಲ್ಲಿ ಮರು ಹೋರಾಟ ನೀಡಲು ಯತ್ನಿಸಿದೆ.

161 ರನ್ ಸಿಡಿಸಿದ ಮಾರ್ಕ್ರಮ್ ಭಾರತ ವಿರುದ್ಧ ಮುಂಬರುವ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಸಜ್ಜಾದರು. ಮುಲ್ಡರ್ ಔಟಾಗದೆ 131 ರನ್ ಗಳಿಸಿ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ನಾಲ್ಕನೇ ಶತಕ ದಾಖಲಿಸಿದರು. ಭಾರತದ ಮೊದಲ ಇನಿಂಗ್ಸ್ 417 ರನ್‌ಗೆ ಉತ್ತರವಾಗಿ ದಕ್ಷಿಣ ಆಫ್ರಿಕ ಎ ತಂಡ 400 ರನ್ ಗಳಿಸಿ ಆಲೌಟಾಗುವುದರೊಂದಿಗೆ 17 ರನ್ ಹಿನ್ನಡೆ ಕಂಡಿತು. ದ.ಆಫ್ರಿಕಾ ಒಂದು ಹಂತದಲ್ಲಿ 142 ರನ್‌ಗೆ 5 ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟದಲ್ಲಿತ್ತು. ಆಗ ಆರನೇ ವಿಕೆಟ್ ಜೊತೆಯಾಟದಲ್ಲಿ 155 ರನ್ ಸೇರಿಸಿದ ಮಾರ್ಕ್ರಮ್ ಹಾಗೂ ಮುಲ್ಡರ್ ತಂಡವನ್ನು ಆಧರಿಸಿದರು.

 ಎರಡನೇ ಇನಿಂಗ್ಸ್ ಆರಂಭಿಸಿದ ಆತಿಥೇಯ ಭಾರತ ಮಂದ ಬೆಳಕಿನಿಂದಾಗಿ ಇನ್ನೂ 25 ಓವರ್‌ಗಳ ಆಟ ಬಾಕಿ ಇರುವಾಗಲೇ ದಿನದಾಟ ಸ್ಥಗಿತಗೊಳ್ಳುವ ಮೊದಲು ವಿಕೆಟ್‌ನಷ್ಟವಿಲ್ಲದೆ 14 ರನ್ ಗಳಿಸಿತು. 5 ವಿಕೆಟ್‌ಗಳ ನಷ್ಟಕ್ಕೆ 159 ರನ್‌ನಿಂದ ಬ್ಯಾಟಿಂಗ್ ಮುಂದುವರಿಸಿದ ದಕ್ಷಿಣ ಆಫ್ರಿಕಾಕ್ಕೆ ಮಾರ್ಕ್ರಮ್ ಹಾಗೂ ಮುಲ್ಡರ್ ಆಸರೆಯಾದರು. ಭಾರತ ಎ ತಂಡದ ವೇಗದ ಬೌಲರ್‌ಗಳನ್ನು ದಿಟ್ಟವಾಗಿ ಎದುರಿಸಿದ ಮಾರ್ಕ್ರಮ್, ಮೂರು ಸ್ಪಿನ್ ಬೌಲರ್‌ಗಳನ್ನು ಅಷ್ಟೇ ಲೀಲಾಜಾಲವಾಗಿ ಎದುರಿಸಿದರು. 263 ಎಸೆತಗಳ ಇನಿಂಗ್ಸ್ ನಲ್ಲಿ 20 ಬೌಂಡರಿ ಹಾಗೂ 2 ಸಿಕ್ಸರ್‌ಗಳನ್ನು ಸಿಡಿಸಿದರು. ಮಾರ್ಕ್ರಮ್ ಹಾಗೂ ಮುಲ್ಡರ್ ಶತಕದ ಜೊತೆಯಾಟ ನಡೆಸಿ ದ.ಆಫ್ರಿಕಾ ಇನಿಂಗ್ಸ್ ಗೆ ಬೇಗನೆ ತೆರೆ ಎಳೆಯಬೇಕೆಂಬ ಭಾರತ ಎ ತಂಡದ ವಿಶ್ವಾಸಕ್ಕೆ ಧಕ್ಕೆ ತಂದರು. 87ನೇ ಓವರ್‌ನಲ್ಲಿ ಮಾರ್ಕ್ರಮ್ ವಿಕೆಟನ್ನು ಉರುಳಿಸಿದ ಮುಹಮ್ಮದ್ ಸಿರಾಜ್ ದೊಡ್ಡ ಜೊತೆಯಾಟಕ್ಕೆ ಬ್ರೇಕ್ ಹಾಕಿದರು.

ರಕ್ಷಣಾತ್ಮಕ ಹಾಗೂ ಆಕ್ರಮಣಕಾರಿ ಆಟದೊಂದಿಗೆ ಆತಿಥೇಯ ಬೌಲರ್‌ಗಳನ್ನು ಕಾಡಿದ ಮುಲ್ಡರ್ ಅವರು ವೆರ್ನಾನ್ ಫಿಲ್ಯಾಂಡರ್(21)ಜೊತೆ ಏಳನೇ ವಿಕೆಟ್‌ಗೆ 59 ರನ್ ಹಾಗೂ ಡ್ಯಾನ್ ಪೀಟ್(11)ಜೊತೆ 8ನೇ ವಿಕೆಟ್‌ಗೆ 39 ರನ್ ಜೊತೆಯಾಟದಲ್ಲಿ ಭಾಗಿಯಾದರು. ಮುಲ್ಡರ್-ಫಿಲ್ಯಾಂಡರ್ ಜೊತೆಯಾಟವನ್ನು ಶಿವಂ ದುಬೆ ಕೊನೆಗೊಳಿಸಿದರು. ಸ್ಪಿನ್ ಬೌಲರ್‌ಗಳಾದ ಕುಲದೀಪ್ ಯಾದವ್(4-121)ಹಾಗೂ ಶಹಬಾಝ್ ನದೀಂ(3-76)ಯಶಸ್ವಿ ಪ್ರದರ್ಶನ ನೀಡಿದರು. ಔಟಾಗದೆ 131 ರನ್ ಗಳಿಸಿದ ಮುಲ್ಡರ್ 230 ಎಸೆತಗಳನ್ನು ಎದುರಿಸಿ 17 ಬೌಂಡರಿ ಹಾಗೂ 1 ಸಿಕ್ಸರ್‌ನ್ನು ಸಿಡಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X